6:29 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ನ್ಯಾಯಕ್ಕಾಗಿ ಮಗು ಜತೆ ರಾತ್ರಿ 1 ಗಂಟೆ ವರೆಗೂ ಪೊಲೀಸ್ ಠಾಣೆಯಲ್ಲಿ ಧರಣಿ ಕೂತ ಮಹಿಳೆ!: ಕೊನೆಗೂ ಎಫ್ ಐಆರ್ ದಾಖಲು

02/06/2023, 10:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನ್ಯಾಯಕ್ಕಾಗಿ 4 ವರ್ಷದ ಮಗು ಜೊತೆ ರಾತ್ರಿ 1 ಗಂಟೆವರೆಗೂ ಸಂಸೆಯ ಮಹಿಳೆಯೊಬ್ಬರು ಕಳಸ
ಪೊಲೀಸ್ ಇನ್ಸ್ ಪೆಕ್ಟರ್ ಕಚೇರಿಯಲ್ಲಿ ಧರಣಿ ಕುಳಿತ ಘಟನೆ ನಡೆದಿದೆ.
ಯುವಕರ ಅಸಭ್ಯ ವರ್ತನೆ ಹಾಗೂ ಗಂಡನಿಗೆ ಜೀವ ಬೆದರಿಕೆ ಇದೆ ಅಂತ ಮಹಿಳೆ ಕುದುರೆಮುಖ ಪೊಲೀಸರಿಗೆ ದೂರು ನೀಡಿದ್ದರು. ಆದರೆ ಪೊಲೀಸರು ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಿಸಲಿಲ್ಲ. ಎಫ್ ಐಆರ್ ದಾಖಲಾಗದೆ ಮನೆಗೆ ಹೋಗಲ್ಲ ಅಂತ ಮಹಿಳೆ ಕಳಸ ಪೊಲೀಸ್ ಇನ್ಸ್ ಪೆಕ್ಟರ್ ಕಚೇರಿಯಲ್ಲಿ ಕುಳಿತೇ ಬಿಟ್ಟರು.
ಮಗುವಿಗೆ ಇನ್ಸ್ ಪೆಕ್ಟರ್ ಕಚೇರಿಯಲ್ಲೇ ಊಟ ಮಾಡಿಸಿ ಮಲಗಿಸಿದರು.
ಪಕ್ಕದ ಮನೆ ಯುವಕರು ಅಸಭ್ಯ ವರ್ತನೆ ಮಾಡುತ್ತಿದ್ದಾರೆ ಮತ್ತು ಪತಿಗೆ ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಮಹಿಳೆ ದೂರು ನೀಡಿದ್ದರು. ಅಸಭ್ಯ ವರ್ತನೆಯ ವಿಡಿಯೋ ನೀಡಿದರೂ ಕುದುರೆಮುಖ ಪೊಲೀಸರು ದೂರು ದಾಖಲಿಸಿಲ್ಲ. ಇದರಿಂದ ಆಕ್ರೋಶಗೊಂಡ ಮಹಿಳೆ ಕಳಸ‌ ಇನ್ಸ್‌ಪೆಕ್ಟರ್ ಕಚೇರಿಯಲ್ಲಿ ಮಧ್ಯರಾತ್ರಿವರೆಗೂ ಕುಳಿತರು.
ಮಹಿಳೆಯ ಆಕ್ರೋಶ ಹಿನ್ನೆಲೆ ಪೊಲೀಸರಿಂದ ಮಧ್ಯರಾತ್ರಿ ಯುವಕರ ವಿರುದ್ಧ ಎಫ್.ಐ.ಆರ್. ದಾಖಲು ಮಾಡಲಾಯಿತು.


ಕುದುರೆಮುಖ ಪೊಲೀಸದ ಠಾಣೆ ವ್ಯಾಪ್ತಿಯ ಸಂಸೆ ಗ್ರಾಮದಲ್ಲಿ ನಡೆದ ಘಟನೆ ನಡೆದಿದೆ. ಅಸಭ್ಯ ವರ್ತನೆ ಮಾಡಿದ ನವೀನ್, ಶ್ರೇಯಾಂಶ್ ವಿರುದ್ಧ ದೂರು ದಾಖಲಾಗಿದೆ. ಎರಡು ದಿನದ ಹಿಂದೆ ದೂರು ನೀಡಿದರೂ ಪೊಲೀಸರು ಎಫ್ ಐಆರ್ ದಾಖಲು ಮಾಡಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು