10:20 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಓಬಳಾಪುರ: ಸರಕಾರ ನಿರ್ಮಿಸಿದ ಚೆಕ್ ಡ್ಯಾಂ ಒಡೆದು ಅಕ್ರಮ ಮರಳು ಸಾಗಣಿಕೆ; ಗ್ರಾಮಸ್ಥರಿಂದ ಆರೋಪ

09/10/2021, 21:52

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕು ಹುರುಳಿಹಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಓಬಳಾಪುರ ಗ್ರಾಮದ ಹೊರವಲಯದಲ್ಲಿ ಹಳ್ಳದಲ್ಲಿ ನಿರ್ಮಿಸಿರುವ ಚೆಕ್ ಡ್ಯಾಂ ಒಡೆದು ಅಕ್ರಮವಾಗಿ ಮರಳು ಸಾಗಿಸಲಾಗುತ್ತಿದೆ ಎಂಬ ದೂರು ಕೇಳಿ ಬಂದಿದೆ.


ಗ್ರಾಮದ ವ್ಯಕ್ತಿಯೊಬ್ಬರು ಚೆಕ್ ಡ್ಯಾಂ ಕೆಡವಿ ಅದರಡಿಯಲ್ಲಿರುವ ಮರಳನ್ನು ಅಕ್ರಮವಾಗಿ ಬಗೆಯಲಾಗುತ್ತಿದ್ದು, ಮರಳನ್ನು ತಮ್ಮ ಕಾಮಗಾರಿಗೆ ಬಳಸುತ್ತಿದ್ದಾರೆಂದು ಓಬಳಾಪುರ ಗ್ರಾಮ ಸೇರಿದಂತೆ ಕೆಲ ಗ್ರಾಮಸ್ಥರು ದೂರಿದ್ದಾರೆ.

ಸರ್ಕಾರ ನಿರ್ಮಿಸಿರುವ ವೆಕ್ ಡ್ಯಾಂ ಅನ್ನು ಕೆಡವಿರೋದೇ ಕಾನೂನು ಬಾಹಿರವಾಗಿದ್ದು, ಹಳ್ಳದಲ್ಲಿರುವ ಮರಳನ್ನು ಯಾವುದೇ ಪರವಾನಗಿ ಇಲ್ಲದೇ ಸಾಗಿಸಲಾಗುತ್ತಿದೆ ಎಂದು ಹೊಸಹಳ್ಳಿ ಹೋಬಳಿಯ ಕೆಲ ಸಂಘಟನೆಗಳ ಪದಾಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು  ಕಂದಾಯ ಇಲಾಖಾಧಿಕಾರಿಗಳು ಹಾಗೂ ತಾಪಂ ಕಾರ್ಯನಿರ್ವಹಣಾಧಿಕಾರಿ ಸ್ಥಳ ಪರಿಶೀಲಸಬೇಕಿದೆ. ಸರ್ಕಾರ ನಿರ್ಮಿಸಿರುವ ಚೆಕ್ ಡ್ಯಾಂ ಧ್ವಂಸಗೊಳಿಸಲಾಗಿದೆ ಹಾಗೂ ಕೆಲ ದಿಬಗಳಿಂದ ನಿರಂತರ, ಪ್ರತಿ ದಿನ ಹತ್ತಾರು ಟ್ರಾಕ್ಟ್ರ್ ನಷ್ಟು ಅಕ್ರಮವಾಗಿ ಮರಳು ಸಾಗಿಸಲಾಗುತ್ತಿದ್ದು, ಸಂಬಂಧಿಸಿದಂತೆ ತಾಪಂ ಕಾರ್ಯನಿರ್ಹಣಾಧಿಕಾರಿ ಹಾಗೂ ಕಂದಾಯ ಇಲಾಖಾಧಿಕಾರಿ ಶೀಘ್ರವೇ ಸ್ಥಳ ಪರಿಶೀಲಿಸಬೇಕಿದೆ. ಅಕ್ರಮ ಜರುಗಿಸಿರುವ ವಿರುದ್ಧ ಸೂಕ್ತ ಶಿಸ್ಥು ಕ್ರಮ ಜರುಗಿಸಬೇಕೆಂದು, ಓಬಳಾಪುರ ಗ್ರಾಮದವರು ಮತ್ತು ಕೆಲ ಸಂಘಟನೆಗಳ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು