6:46 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಅಕ್ಟೋಬರ್ 15ರಂದು ಮಂಗಳೂರಿನಲ್ಲಿ ಡಿವೈಎಫ್ಐ 14ನೇ ದ.ಕ. ಜಿಲ್ಲಾ ಸಮ್ಮೇಳನ: ಲೋಗೋ ಅನಾವರಣ

21/09/2023, 19:46

ಮಂಗಳೂರು(reporterkarnataka.com): ಶಿಕ್ಷಣ, ಉದ್ಯೋಗ, ಆರೋಗ್ಯದ ಹಕ್ಕಿಗಾಗಿ, ಜಾತ್ಯತೀತತೆ, ಪ್ರಜಾಪ್ರಭುತ್ವ, ಸಂವಿಧಾನದ ಉಳಿವಿಗಾಗಿ ಎಂಬ ಘೋಷಣೆಯಡಿ ಡಿವೈಎಫ್ಐ ಯುವಜನ ಸಂಘಟನೆಯ 14ನೇ ದ.ಕ ಜಿಲ್ಲಾ ಸಮ್ಮೇಳನ ಅಕ್ಟೋಬರ್ 15ರಂದು ಮಂಗಳೂರಿನಲ್ಲಿ ನಡೆಯಲಿರುವುದು.
ಜಿಲ್ಲೆಯ ವಿವಿಧ ಭಾಗಗಳಿಂದ ಆಯ್ಕೆಯಾದ ಯುವ ಪ್ರತಿನಿಧಿಗಳು ಭಾಗವಹಿಸಿ ನಾಡಿನ ಜನಸಾಮಾನ್ಯರ ಬದುಕಿನಲ್ಲಿ ನೆಮ್ಮದಿ ಮೂಡಿಸುವ ನಿಟ್ಟಿನಲ್ಲಿ ಎದುರಾಗುವ ಸಮಸ್ಯೆಗಳು ಮತ್ತು ಅನ್ಯಾಯಗಳ ವಿರುದ್ಧ ಹೋರಾಡುವ, ಶಿಕ್ಷಣದಿಂದ ವಂಚಿತ ಹಾಗೂ ನಿರುದ್ಯೋಗದಿಂದ ಬಳಲುತ್ತಿರುವ ಯುವಜನರ ಸಮಸ್ಯೆಗಳಿಗೆ ಮಾರ್ಗೋಪಾಯವನ್ನು ಕಂಡುಕೊಳ್ಳುವ ಮತ್ತವುಗಳ ವಿರುದ್ಧ ರಾಜಿರಹಿತ ಹೋರಾಟಗಳನ್ನು ಸಂಘಟಿಸುವ ಕುರಿತು ಚರ್ಚಿಸಲು ಡಿವೈಎಫ್ಐ ದ.ಕ. ಜಿಲ್ಲಾ ಸಮ್ಮೇಳನವು ನಡೆಯಲಿರುವುದು.
ಇಂದು ಡಿವೈಎಫ್ಐ ಕಚೇರಿಯಲ್ಲಿ ನಡೆದ ಜಿಲ್ಲಾ ಸಮಿತಿ ಸಭೆಯಲ್ಲಿ 14 ನೇ ದ.ಕ ಜಿಲ್ಲಾ ಸಮ್ಮೇಳನದ ಲೋಗೋವನ್ನು ಅನಾವರಣಗೊಳಿಸಲಾಯಿತು. ಈ ವೇಳೆ ಡಿವೈಎಫ್ಐ ದ.ಕ ಜಿಲ್ಲಾಧ್ಯಕ್ಷರಾದ ಬಿ.ಕೆ. ಇಮ್ತಿಯಾಜ್, ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಕೋಶಾಧಿಕಾರಿ ಮನೋಜ್ ವಾಂಮಜೂರು, ಪದಾಧಿಕಾರಿಗಳಾದ ರಫೀಕ್ ಹರೇಕಳ, ನವೀನ್ ಕೊಂಚಾಡಿ, ನಿತಿನ್ ಕುತ್ತಾರ್ , ಆಶಾ ಬೋಳೂರು, ಸುನಿಲ್ ತೇವುಲ, ತಯ್ಯೂಬ್ ಬೆಂಗರೆ, ಶ್ರೀನಾಥ್ ಕಾಟಿಪಳ್ಳ, ಚರಣ್ ಶೆಟ್ಟಿ,‌ ರಿಯಾಝ್ ಮೂಡಬಿದ್ರೆ, ರಿಜ್ವಾನ್ ಹರೇಕಳ ಮುಂತಾದವರು ಉಪಸ್ಥಿತರಿದರು.

ಇತ್ತೀಚಿನ ಸುದ್ದಿ

ಜಾಹೀರಾತು