4:12 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಅಕ್ಟೋಬರ್ 15ರಂದು ಮಂಗಳೂರಿನಲ್ಲಿ ಡಿವೈಎಫ್ಐ 14ನೇ ದ.ಕ. ಜಿಲ್ಲಾ ಸಮ್ಮೇಳನ: ಲೋಗೋ ಅನಾವರಣ

21/09/2023, 19:46

ಮಂಗಳೂರು(reporterkarnataka.com): ಶಿಕ್ಷಣ, ಉದ್ಯೋಗ, ಆರೋಗ್ಯದ ಹಕ್ಕಿಗಾಗಿ, ಜಾತ್ಯತೀತತೆ, ಪ್ರಜಾಪ್ರಭುತ್ವ, ಸಂವಿಧಾನದ ಉಳಿವಿಗಾಗಿ ಎಂಬ ಘೋಷಣೆಯಡಿ ಡಿವೈಎಫ್ಐ ಯುವಜನ ಸಂಘಟನೆಯ 14ನೇ ದ.ಕ ಜಿಲ್ಲಾ ಸಮ್ಮೇಳನ ಅಕ್ಟೋಬರ್ 15ರಂದು ಮಂಗಳೂರಿನಲ್ಲಿ ನಡೆಯಲಿರುವುದು.
ಜಿಲ್ಲೆಯ ವಿವಿಧ ಭಾಗಗಳಿಂದ ಆಯ್ಕೆಯಾದ ಯುವ ಪ್ರತಿನಿಧಿಗಳು ಭಾಗವಹಿಸಿ ನಾಡಿನ ಜನಸಾಮಾನ್ಯರ ಬದುಕಿನಲ್ಲಿ ನೆಮ್ಮದಿ ಮೂಡಿಸುವ ನಿಟ್ಟಿನಲ್ಲಿ ಎದುರಾಗುವ ಸಮಸ್ಯೆಗಳು ಮತ್ತು ಅನ್ಯಾಯಗಳ ವಿರುದ್ಧ ಹೋರಾಡುವ, ಶಿಕ್ಷಣದಿಂದ ವಂಚಿತ ಹಾಗೂ ನಿರುದ್ಯೋಗದಿಂದ ಬಳಲುತ್ತಿರುವ ಯುವಜನರ ಸಮಸ್ಯೆಗಳಿಗೆ ಮಾರ್ಗೋಪಾಯವನ್ನು ಕಂಡುಕೊಳ್ಳುವ ಮತ್ತವುಗಳ ವಿರುದ್ಧ ರಾಜಿರಹಿತ ಹೋರಾಟಗಳನ್ನು ಸಂಘಟಿಸುವ ಕುರಿತು ಚರ್ಚಿಸಲು ಡಿವೈಎಫ್ಐ ದ.ಕ. ಜಿಲ್ಲಾ ಸಮ್ಮೇಳನವು ನಡೆಯಲಿರುವುದು.
ಇಂದು ಡಿವೈಎಫ್ಐ ಕಚೇರಿಯಲ್ಲಿ ನಡೆದ ಜಿಲ್ಲಾ ಸಮಿತಿ ಸಭೆಯಲ್ಲಿ 14 ನೇ ದ.ಕ ಜಿಲ್ಲಾ ಸಮ್ಮೇಳನದ ಲೋಗೋವನ್ನು ಅನಾವರಣಗೊಳಿಸಲಾಯಿತು. ಈ ವೇಳೆ ಡಿವೈಎಫ್ಐ ದ.ಕ ಜಿಲ್ಲಾಧ್ಯಕ್ಷರಾದ ಬಿ.ಕೆ. ಇಮ್ತಿಯಾಜ್, ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಕೋಶಾಧಿಕಾರಿ ಮನೋಜ್ ವಾಂಮಜೂರು, ಪದಾಧಿಕಾರಿಗಳಾದ ರಫೀಕ್ ಹರೇಕಳ, ನವೀನ್ ಕೊಂಚಾಡಿ, ನಿತಿನ್ ಕುತ್ತಾರ್ , ಆಶಾ ಬೋಳೂರು, ಸುನಿಲ್ ತೇವುಲ, ತಯ್ಯೂಬ್ ಬೆಂಗರೆ, ಶ್ರೀನಾಥ್ ಕಾಟಿಪಳ್ಳ, ಚರಣ್ ಶೆಟ್ಟಿ,‌ ರಿಯಾಝ್ ಮೂಡಬಿದ್ರೆ, ರಿಜ್ವಾನ್ ಹರೇಕಳ ಮುಂತಾದವರು ಉಪಸ್ಥಿತರಿದರು.

ಇತ್ತೀಚಿನ ಸುದ್ದಿ

ಜಾಹೀರಾತು