2:27 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಅಕ್ಟೋಬರ್ 3: ಮಂಗಳೂರಿನಲ್ಲಿ ಬ್ಯಾರಿ ಭಾಷಾ ದಿನಾಚರಣೆ, ‘ಬ್ಯಾರಿ ವಚನ ಮಾಲೆ’ ಪುಸ್ತಕ ಬಿಡುಗಡೆ 

02/10/2022, 18:13

ಮಂಗಳೂರು(reporterkarnataka.com):ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಬ್ಯಾರಿ ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ಇದರ ಸಹಯೋಗದಲ್ಲಿ ಅಕ್ಟೋಬರ್ 3ರಂದು ಮಧ್ಯಾಹ್ನ 3.00 ಗಂಟೆಗೆ “ಬ್ಯಾರಿ ಭಾಷಾ ದಿನಾಚರಣೆ ಹಾಗೂ ಬ್ಯಾರಿ ವಚನಮಾಲೆ ಪುಸ್ತಕ ಬಿಡುಗಡೆ” ಸಮಾರಂಭ ನಗರದ ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಡಾ. ಶಿವರಾಮ ಕಾರಂತ ಭವನದಲ್ಲಿ ನಡೆಯಲಿದೆ.

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಆಡಳಿತಾಧಿಕಾರಿ ವಿ.ಎನ್. ಮಲ್ಲಿಕಾರ್ಜುನ ಸ್ವಾಮಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಸ.ಪ.ಪೂ, ಕಾಲೇಜು ಬಿ,ಮೂಡ ಬಂಟ್ವಾಳ ಇಲ್ಲಿನ ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಅವರು  ಬ್ಯಾರಿ ಭಾಷಾ ದಿನಾಚರಣೆಯ ಉಪನ್ಯಾಸ ನೀಡಲಿದ್ದಾರೆ. ಲೇಖಕ ಹಾಗೂ ಸ್ನೇಹ ಪಬ್ಲಿಕ್ ಸ್ಕೂಲ್ ಬಜಾಲ್ ನ  ಶಿಕ್ಷಕ ಅಶೀರುದ್ದೀನ್ ಆಲಿಯಾ ಅವರು ಬರೆದ “ಬ್ಯಾರಿ ವಚನಮಾಲೆ” ಕೃತಿಯನ್ನು ಪತ್ರಕರ್ತ, ಸಾಹಿತಿ ಹಂಝ ಮಲಾರ್  ಬಿಡುಗಡೆ ಮಾಡಲಿದ್ದಾರೆ. ಬ್ಯಾರಿ ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ಇದರ ಸಂಯೋಜಕರಾದ ಡಾ. ಅಬೂಬಕ್ಕರ್ ಸಿದ್ದೀಕ್ ಮತ್ತು ಅಕಾಡೆಮಿಯ ಸದಸ್ಯರಾದ ಶಂಶೀರ್ ಬುಡೋಳಿ  ಅವರು ಕಾರ್ಯಕ್ರಮದ ಸದಸ್ಯ ಸಂಚಾಲಕರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಪೂರ್ಣಿಮಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು