4:44 AM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಅಕ್ಟೋಬರ್ 3: ಮಂಗಳೂರಿನಲ್ಲಿ ಬ್ಯಾರಿ ಭಾಷಾ ದಿನಾಚರಣೆ, ‘ಬ್ಯಾರಿ ವಚನ ಮಾಲೆ’ ಪುಸ್ತಕ ಬಿಡುಗಡೆ 

02/10/2022, 18:13

ಮಂಗಳೂರು(reporterkarnataka.com):ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಬ್ಯಾರಿ ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ಇದರ ಸಹಯೋಗದಲ್ಲಿ ಅಕ್ಟೋಬರ್ 3ರಂದು ಮಧ್ಯಾಹ್ನ 3.00 ಗಂಟೆಗೆ “ಬ್ಯಾರಿ ಭಾಷಾ ದಿನಾಚರಣೆ ಹಾಗೂ ಬ್ಯಾರಿ ವಚನಮಾಲೆ ಪುಸ್ತಕ ಬಿಡುಗಡೆ” ಸಮಾರಂಭ ನಗರದ ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಡಾ. ಶಿವರಾಮ ಕಾರಂತ ಭವನದಲ್ಲಿ ನಡೆಯಲಿದೆ.

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಆಡಳಿತಾಧಿಕಾರಿ ವಿ.ಎನ್. ಮಲ್ಲಿಕಾರ್ಜುನ ಸ್ವಾಮಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಸ.ಪ.ಪೂ, ಕಾಲೇಜು ಬಿ,ಮೂಡ ಬಂಟ್ವಾಳ ಇಲ್ಲಿನ ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಅವರು  ಬ್ಯಾರಿ ಭಾಷಾ ದಿನಾಚರಣೆಯ ಉಪನ್ಯಾಸ ನೀಡಲಿದ್ದಾರೆ. ಲೇಖಕ ಹಾಗೂ ಸ್ನೇಹ ಪಬ್ಲಿಕ್ ಸ್ಕೂಲ್ ಬಜಾಲ್ ನ  ಶಿಕ್ಷಕ ಅಶೀರುದ್ದೀನ್ ಆಲಿಯಾ ಅವರು ಬರೆದ “ಬ್ಯಾರಿ ವಚನಮಾಲೆ” ಕೃತಿಯನ್ನು ಪತ್ರಕರ್ತ, ಸಾಹಿತಿ ಹಂಝ ಮಲಾರ್  ಬಿಡುಗಡೆ ಮಾಡಲಿದ್ದಾರೆ. ಬ್ಯಾರಿ ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ಇದರ ಸಂಯೋಜಕರಾದ ಡಾ. ಅಬೂಬಕ್ಕರ್ ಸಿದ್ದೀಕ್ ಮತ್ತು ಅಕಾಡೆಮಿಯ ಸದಸ್ಯರಾದ ಶಂಶೀರ್ ಬುಡೋಳಿ  ಅವರು ಕಾರ್ಯಕ್ರಮದ ಸದಸ್ಯ ಸಂಚಾಲಕರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಪೂರ್ಣಿಮಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು