9:45 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಅಕ್ಟೋಬರ್ 2ರ ವರೆಗೆ ಬಿಜೆಪಿಯಿಂದ ಸೇವಾ ಪಾಕ್ಷಿಕ ಆಚರಣೆ: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

18/09/2024, 19:43

ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ಅಕ್ಟೋಬರ್ 2ರ ವರೆಗೆ ಸೇವಾ ಪಾಕ್ಷಿಕವಾಗಿ ಆಚರಿಸಲಾಗುತ್ತದೆ ಎಂದು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೆಚ್ಚಿನ ಪ್ರಧಾನಿ ಮೋದಿಯವರು ‘ಮನುಕುಲದ ಸೇವೆ- ಭಗವಂತನ ಸೇವೆ’ ಎಂದು ಭಾವಿಸಿ ತಮ್ಮ ಆಡಳಿತಾವಧಿಯಲ್ಲಿ ಹಲವಾರು ಮಹತ್ತರವಾದ ಮಾನವೀಯ ಕಾರ್ಯಗಳನ್ನು ಜಾರಿಗೊಳಿಸುತ್ತಿದ್ದಾರೆ. ಸಮಾಜದ ಬಡವರ, ತುಳಿತಕ್ಕೊಳಗಾದ ಮತ್ತು ವಂಚಿತ ವರ್ಗಗಳ ಸಬಲೀಕರಣ, ರೈತರ ಕಲ್ಯಾಣ ಪ್ರಧಾನಿಯವರ ಆದ್ಯತೆಯಾಗಿದೆ. ಪರಿಶಿಷ್ಟ ಜಾತಿಗಳು, ಪಂಗಡಗಳು ಮತ್ತು ಹಿಂದುಳಿದ ವರ್ಗಗಳ ಸಮಗ್ರ ಅಭಿವೃದ್ಧಿಗಾಗಿ ಐತಿಹಾಸಿಕ ಕೆಲಸಗಳನ್ನು ಜಾರಿಗೊಳಿಸುತ್ತಿದ್ದಾರೆ. ದೇಶದ ನಾಗರಿಕರು, ಗೌರವಾನ್ವಿತ ಪ್ರಧಾನ ಮಂತ್ರಿಗಳನ್ನು ಶ್ಲಾಘಿಸುತ್ತಿದ್ದಾರೆ ಮತ್ತು ಅಭಿನಂದಿಸುತ್ತಿದ್ದಾರೆ ಎಂದು ಕುಂಪಲ ನುಡಿದರು.
ಸೇವಾ ಪಾಕ್ಷಿಕ (ಸೇವೆಗೆ ಮೀಸಲಾದ ಹದಿನೈದು ದಿನಗಳು) ಆಚರಿಸುವ ಮೂಲಕ ಪ್ರತೀ ವರ್ಷ ಪ್ರಧಾನಿಯವರ ಜನ್ಮದಿನವನ್ನು ಪಕ್ಷದ ವತಿಯಿಂದ ಆಚರಿಸಲಾಗುತ್ತದೆ. ನಾವೆಲ್ಲರೂ ಅವರ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ವಿವಿಧ ಸೇವಾ ಕಾರ್ಯಗಳ ಮೂಲಕ ಪ್ರಾರ್ಥಿಸುತ್ತೇವೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷರು ಮಾಹಿತಿ ನೀಡಿದರು.
ಸೆ.2ರಂದು ಪ್ರಧಾನಿ ಮೋದಿಯವರು ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಸ್ವತಃ ಪ್ರಧಾನಿಯವರೇ ಪಕ್ಷದ ಸದಸ್ಯತ್ವವನ್ನು ಹೊಸದಾಗಿ ಪಡೆಯುವ ಮೂಲಕ ಚಾಲನೆ ನೀಡಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ ಹಾಗೂ ಇತರ ಸಚಿವರು, ಹಿರಿಯ ನಾಯಕರು ಬಿಜೆಪಿಯ ಹೊಸ ಸದಸ್ಯತ್ವ ಪಡೆದಿದ್ದಾರೆ ಎಂದು ಸತೀಶ್ ಕುಂಪಲ ವಿವರಿಸಿದರು.
ವಿವಿಧ ಸಾಮಾಜಿಕ ಸಂಸ್ಥೆಗಳು, ರಕ್ತನಿಧಿ ಕೇಂದ್ರಗಳು, ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಮತ್ತು ಆರೋಗ್ಯ ಇಲಾಖೆಗಳ ಸಹಯೋಗದಲ್ಲಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ರಕ್ತದಾನ ಶಿಬಿರಗಳನ್ನು ಇಂದು ಆಯೋಜಿಸಲಾಗುತ್ತಿದೆ. ನಾಳೆ ಮತ್ತು ನಾಡಿದ್ದು ಕೂಡ ಶಿ ಬಿರಗಳು ನಡೆಯಲಿವೆ.
ಸೆ.18ರಿಂದ 24ರ ವರೆಗೆ ಎಲ್ಲಾ ಶಾಲೆ ಮತ್ತು ಆಸ್ಪತ್ರೆ ಆವರಣದಲ್ಲಿ ಸ್ವಚ್ಛತಾ ಅಭಿಯಾನ ನಡೆಸಲಾಗುತ್ತದೆ. ದಿವ್ಯಾಂಗರಿಗೆ ಉಚಿತ ಸಲಕರಣೆಗಳ ವಿತರಣೆ, ಕ್ರೀಡಾಪಟುಗಳಿಗೆ ಗೌರವಿಸುವುದು, ಆಯುಷ್ಮಾನ್ ಭಾರತ್ ಯೋಜನೆಯ ಪ್ರಾರಂಭದ ದಿನವಾದ ಸೆ.23ರಂದು ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 60 ವರ್ಷ ಮೇಲ್ಪಟ್ಟ ವೃದ್ಧ ಮಹಿಳೆಯರಿಗೆ ಉಚಿತ ಆರೋಗ್ಯ ಶಿಬಿರಗಳ ಆಯೋಜನೆ ಮಾಡಲಾಗುವುದು.
ಪ್ರಧಾನಿಯವರ ಜೀವನ ಮತ್ತು ಸಾಧನೆಗಳ ಚಿತ್ರ ಪ್ರದರ್ಶನವನ್ನು 15 ದಿನಗಳ ಕಾಲ ರಾಜ್ಯದ ವಿವಿಧ ಕಡೆಗಳಲ್ಲಿ ಆಯೋಜಿಸಲಾಗುವುದು. ಕಾನೂನು, ವೈದ್ಯಕೀಯ, ಕೈಗಾರಿಕಾ, ಎನ್‌ಜಿಓ, ಪ್ರಬುದ್ಧರು ಮತ್ತು ಶಿಕ್ಷಕರ ಪ್ರಕೋಷ್ಠಗಳು ‘ಪವರ್ ವಿಥ್ ಇನ್: ದಿ ಲೀಡರ್‌ಶಿಪ್ ಲೆಗಸಿ ಆಫ್‌ ನರೇಂದ್ರ ಮೋದಿ’ ಪುಸ್ತಕ ಆಧರಿಸಿ ಸೆಮಿನಾರ್‌ಗಳನ್ನು ಆಯೋಜಿಸಲಿವೆ.
ಕಲೆ ಮತ್ತು ಚಿತ್ರಕಲೆ ಸ್ಪರ್ಧೆಗಳು, ಭಾಷಣ ಮತ್ತು ಪ್ರಬಂಧ ಸ್ಪರ್ಧೆಗಳು, ಮರಳು ಕಲಾಕೃತಿ ಸ್ಪರ್ಧೆಗಳು, ಗ್ರಾಫಿಕ್ ವಿನ್ಯಾಸ ಸ್ಪರ್ಧೆಗಳು ಮತ್ತು ಆತ್ಮನಿರ್ಭರ ಭಾರತ್, ವಿಕಸಿತ್ ಭಾರತ್ 2047 ಹಾಗೂ ಸ್ಥಳೀಯ ವಿಷಯಗಳಿಗೆ ಸಂಬಂಧಿಸಿದ ಗೋ ವೋಕಲ್ ಆಧರಿತ ರಸಪ್ರಶ್ನೆ ಸ್ಪರ್ಧೆಗಳನ್ನು ನಡೆಸಲಾಗುವುದು ಎಂದು ಸತೀಶ್ ಕುಂಪಲ ಮಾಹಿತಿ ನೀಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರಾದ ಪ್ರಸನ್ನ ಮಾರ್ತ, ಪೂಜಾ ಪೈ, ಸೇವಾ ಪಾಕ್ಷಿಕದ ಜಿಲ್ಲಾ ಸಹ ಸಂಚಾಲಕ ಪುರುಷೋತ್ತಮ ಮುಂಗ್ಲಿಮನೆ ಪುತ್ತೂರು, ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ನಂದನ್ ಮಲ್ಯ ಹಾಗೂ ಜಿಲ್ಲಾ ಉಪಾಧ್ಯಕ್ಷರು ಹಾಗೂ ಸೇವಾ ಪಾಕ್ಷಿಕದ ಜಿಲ್ಲಾ ಸಂಚಾಲಕ ರಾಜೇಶ್ ರೈ ಕೆಡೆಂಜಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು