5:59 PM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಅಕ್ಟೋಬರ್ 29ರಂದು ಕಾಂಗ್ರೆಸ್ ನಿಂದ ಉಡುಪಿ ಜಿಲ್ಲೆಯಾದ್ಯಂತ ಬೃಹತ್ ತಿರಂಗಾ ಬೈಕ್ ಜಾಥಾ

28/10/2022, 20:53

ಉಡುಪಿ(reporterkarnataka.com): ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಉಡುಪಿ ಜಿಲ್ಲೆಯಾದ್ಯಂತ ಬೃಹತ್ ತಿರಂಗಾ ಬೈಕ್ ಜಾಥಾವನ್ನು ಅಕ್ಟೋಬರ್ 29 ರಂದು ಮಧ್ಯಾಹ್ನ 2 ಗಂಟೆಗೆ ಆಯೋಜಿಸಲಾಗಿದೆ ಎಂದು ಕೆಪಿಸಿಸಿ ವಕ್ತಾರ ಬಿಪಿನ್ ಚಂದ್ರಪಾಲ್ ನಕ್ರೆ ತಿಳಿಸಿದರು.

ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೈಕ್ ಜಾಥಾವು ಬೈಂದೂರಿನಿಂದ ಆರಂಭಗೊಂಡು, ಕುಂದಾಪುರ, ಬ್ರಹ್ಮಾವರ, ಉಡುಪಿ, ಕಾಪು, ಪಡುಬಿದ್ರಿ ಮೂಲಕ‌ ಕಾರ್ಕಳ ತಾಲೂಕಿನ ಇನ್ನಾಕ್ಕೆ ಆಗಮಿಸಿ, ಅಲ್ಲಿಂದ ಬೆಳ್ಮಣ್ ಮಾರ್ಗವಾಗಿ ಕಾರ್ಕಳಕ್ಕೆ ತಲುಪಲಿದೆ ಎಂದರು.

ಬೈಕ್ ಜಾಥಾದಲ್ಲಿ ಜಿಲ್ಲೆಯ 10 ಬ್ಲಾಕ್ ಗಳಿಂದ ಸುಮಾರು 5 ಸಾವಿರಕ್ಕೂ ಅಧಿಕ ಬೈಕ್‌ಗಳೊಂದಿಗೆ ಯುವಕರು ಭಾಗವಹಿಸಲಿದ್ದಾರೆ. ಕಾರ್ಕಳದಲ್ಲಿ ಸಾರ್ವಜನಿಕ ಸಭೆ ನಡೆಯಲಿದ್ದು, ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಎಐಸಿಸಿ ಕಾರ್ಯದರ್ಶಿ ಕೃಷ್ಣ ಅಲ್ಲವಾರ್, ಕೆಪಿಸಿಸಿ ಕಾರ್ಯಧ್ಯಕ್ಷ ಧ್ರುವ ನಾರಾಯಣ್, ಮಾಜಿ ಸಚಿವರಾದ ಅಭಯಚಂದ್ರ ಜೈನ್, ವಿನಯ್ ಕುಮಾರ್ ಸೊರಕೆ, ರಮಾನಾಥ ರೈ, ಮಾಜಿ ಶಾಸಕ ಗೋಪಾಲ ಪೂಜಾರಿ, ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದೀಪಕ್ ಕೋಟ್ಯಾನ್, ಸದಾಶಿವ ದೇವಾಡಿಗ, ಪ್ರಭಾಕರ ಬಂಗೇರ, ಸೌರಭ್ ಬಲ್ಲಾಳ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು