3:45 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಒಡಿಶಾ | ಏ.22, 23ರಂದು 5 ರಾಜ್ಯಗಳ ವಿಧಾನಸಭಾ ಅಧ್ಯಕ್ಷರ ಸಮಿತಿ ಸಭೆ: ಸ್ಪೀಕರ್ ಖಾದರ್

20/04/2026, 21:36

ಮಂಗಳೂರು(reporterkarnataka.com): ಪಕ್ಷಾಂತರ ನಿಷೇಧ ತಿದ್ದುಪಡಿ ಕಾಯ್ದೆಯ ಮೌಲ್ಯಮಾಪನ ಹಾಗೂ ಬಲವರ್ಧನೆಗೆ ಸಂಬಂಧಿಸಿದಂತೆ ಲೋಕಸಭಾ ಸ್ಪೀಕರ್ ಮೂಲಕ ನೇಮಕಗೊಂಡ 5 ರಾಜ್ಯಗಳ ವಿಧಾನಸಭಾ ಅಧ್ಯಕ್ಷರ ಸಮಿತಿ ಸಭೆ ಒಡಿಶಾದ ಭುವನೇಶ್ವರದಲ್ಲಿ ಎ.22 23ರಂದು ನಡೆಯಲಿದೆ ಎಂದು ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಈ ಹಿಂದೆ ಮುಂಬಯಿಯಲ್ಲಿ ಒಂದು ಸಭೆ ನಡೆದಿತ್ತು. ಇದೀಗ ಎರಡನೇ ಸಭೆ ಒಡಿಶಾದಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಒಡಿಶಾ, ಸಿಕ್ಕಿಂ, ಮಹಾರಾಷ್ಟ್ರ, ನಾಗಾಲ್ಯಾಂಡ್, ಕರ್ನಾಟಕ ಸೇರಿದಂತೆ 5 ರಾಜ್ಯಗಳ ಸ್ಪೀಕರ್‌ಗಳು ಭಾಗವಹಿಸಲಿದ್ದಾರೆ. ಒಂದು ವರ್ಷದ ಒಳಗೆ ಈ ಸಮಿತಿ ಲೋಕಸಭಾ ಅಧ್ಯಕ್ಷರಿಗೆ ವರದಿ ನೀಡಬೇಕಾಗಿದೆ ಎಂದು ಯು.ಟಿ. ಖಾದರ್ ತಿಳಿಸಿದ್ದಾರೆ.
ಶಾಸಕ ವಿನಯ ಕುಲಕರ್ಣಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದ್ದರೂ, ಅಧಿಕೃತ ಸೂಚನೆ ಬಂದ ಬಳಿಕ ಅವರ ವಿಧಾನಸಭಾ ಅಧಿಕಾರದ ಬಗ್ಗೆ ತೀರ್ಮಾನಿಸಲಾಗುವುದು ಎಂದು ಯು.ಟಿ. ಖಾದರ್ ತಿಳಿಸಿದರು.
ಲೋಕಸಭೆಯಲ್ಲಿ ಸಂವಿಧಾನ ತಿದ್ದುಪಡಿ ಮಸೂದೆ ಬಹುಮತವಿಲ್ಲದೆ ಬಿದ್ದುಹೋದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಖಾದರ್, ಸಂವಿಧಾನಬದ್ಧ ತೀರ್ಮಾನಗಳು ಹಾಗೂ ಚರ್ಚೆಗಳ ಮೂಲಕ ಯಾವುದೇ ಪ್ರದೇಶದ ಜನರು, ಸಮುದಾಯಗಳಿಗೆ ಅನ್ಯಾಯವಾಗಬಾರದು ಎನ್ನುವುದು ಮುಖ್ಯ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು