1:00 AM Wednesday11 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಒಡಿಸ್ಸಾ ರೈಲು ದುರಂತ: ಕಳಸದಿಂದ ಸಮೇದ್ ಶಿಖರ್ಜಿ ಯಾತ್ರೆಗೆ ತೆರಳಿದ್ದ 110 ಮಂದಿ ಯಾತ್ರಾರ್ಥಿಗಳು

03/06/2023, 19:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಒಡಿಶಾದ ಬಹನಾಗ ರೈಲ್ವೆ ನಿಲ್ದಾಣದಲ್ಲಿ ದುರಂತಕ್ಕೀಡಾದ
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಚಿಕ್ಕಮಗಳೂರು ಜಿಲ್ಲೆಯ
ಕಳಸ ತಾಲೂಕಿನ 110 ಮಂದಿ
ಕಳಸದಿಂದ ಸಮೇದ್ ಶಿಖರ್ಜಿ ಯಾತ್ರೆಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.
ಕಳಸ, ಹೊರನಾಡು, ಬಲಿಗೆ, ಯಡೂರು, ಸಂಸೆ, ಸುತ್ತ ಮುತ್ತಲ ಪ್ರದೇಶದ 110 ಜನ ಯಾತ್ರಿಕರು ರೈಲಿನಲ್ಲಿದ್ದರು. ಇವರಲ್ಲಿ ಹೆಂಗಸರು, ಮಕ್ಕಳು, ಹಿರಿಯ ನಾಗರಿಕರು ಕೂಡ ಸೇರಿದ್ದರು. ಒಟ್ಟಿಗೆ ಒಂದೇ ಕುಟುಂಬದ ಸದಸ್ಯರಂತೆ ಪ್ರಯಾಣ ಬೆಳೆಸಿದ್ದರು. ಅದೃಷ್ಟವಶಾತ್ ಕಳಸದ ಇವರೆಲ್ಲ ಸೇಫ್ ಆಗಿದ್ದಾರೆ.
ಗುರುವಾರ ಬೆಳಗ್ಗೆ 11:30ಕ್ಕೆ ಬೆಂಗಳೂರಿನ ಯಶವಂತಪುರದಿಂದ ರೈಲು ಹೊರಟಿತ್ತು. ಹೊರನಾಡಿನ ಅಜಿತ್ ಕುಮಾರ್ ಜೈನ್ ನೇತೃತ್ವದಲ್ಲಿ ಯಾತ್ರೆ ಹೊರಟಿತ್ತು.
ಮಲೆನಾಡಿನ ಸಂತ ಎಂದೇ ಖ್ಯಾತಿ ಪಡೆದಿದ್ದ ಮಹಿಮಾ ಸಾಗರ್ ಮುನಿ ಮಹಾರಾಜ್ ದರ್ಶನಕ್ಕೆ ಯಾತ್ರಾರ್ಥಿಗಳು ತೆರಳಿದ್ದರು. ಜೊತೆಗೆ 24 ತೀರ್ಥಂಕರರ ಮೋಕ್ಷ ಹೊಂದಿದ ಸ್ಥಳದ ದರ್ಶನ ಕೂಡ ಇತ್ತು. ಜೈನ ಕಾಶಿ ಎಂದೇ ಪ್ರಸಿದ್ಧಿಯಾದ ಸಮೇದ್ ಶಿಖರ್ಜಿ ಯಾತ್ರಾ ಸ್ಥಳವಾಗಿದೆ.
ಒಡಿಶಾ ಮೂಲಕ ಜಾರ್ಖಂಡ್ ತಲುಪಿ ಸಮೇದ್ ಶಿಖರ್ಜಿ ಯಾತ್ರಿಗಳು ತೆರಳಬೇಕಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು