4:16 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಒಡಿಸ್ಸಾ ರೈಲು ದುರಂತ: ಕಳಸದಿಂದ ಸಮೇದ್ ಶಿಖರ್ಜಿ ಯಾತ್ರೆಗೆ ತೆರಳಿದ್ದ 110 ಮಂದಿ ಯಾತ್ರಾರ್ಥಿಗಳು

03/06/2023, 19:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಒಡಿಶಾದ ಬಹನಾಗ ರೈಲ್ವೆ ನಿಲ್ದಾಣದಲ್ಲಿ ದುರಂತಕ್ಕೀಡಾದ
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಚಿಕ್ಕಮಗಳೂರು ಜಿಲ್ಲೆಯ
ಕಳಸ ತಾಲೂಕಿನ 110 ಮಂದಿ
ಕಳಸದಿಂದ ಸಮೇದ್ ಶಿಖರ್ಜಿ ಯಾತ್ರೆಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.
ಕಳಸ, ಹೊರನಾಡು, ಬಲಿಗೆ, ಯಡೂರು, ಸಂಸೆ, ಸುತ್ತ ಮುತ್ತಲ ಪ್ರದೇಶದ 110 ಜನ ಯಾತ್ರಿಕರು ರೈಲಿನಲ್ಲಿದ್ದರು. ಇವರಲ್ಲಿ ಹೆಂಗಸರು, ಮಕ್ಕಳು, ಹಿರಿಯ ನಾಗರಿಕರು ಕೂಡ ಸೇರಿದ್ದರು. ಒಟ್ಟಿಗೆ ಒಂದೇ ಕುಟುಂಬದ ಸದಸ್ಯರಂತೆ ಪ್ರಯಾಣ ಬೆಳೆಸಿದ್ದರು. ಅದೃಷ್ಟವಶಾತ್ ಕಳಸದ ಇವರೆಲ್ಲ ಸೇಫ್ ಆಗಿದ್ದಾರೆ.
ಗುರುವಾರ ಬೆಳಗ್ಗೆ 11:30ಕ್ಕೆ ಬೆಂಗಳೂರಿನ ಯಶವಂತಪುರದಿಂದ ರೈಲು ಹೊರಟಿತ್ತು. ಹೊರನಾಡಿನ ಅಜಿತ್ ಕುಮಾರ್ ಜೈನ್ ನೇತೃತ್ವದಲ್ಲಿ ಯಾತ್ರೆ ಹೊರಟಿತ್ತು.
ಮಲೆನಾಡಿನ ಸಂತ ಎಂದೇ ಖ್ಯಾತಿ ಪಡೆದಿದ್ದ ಮಹಿಮಾ ಸಾಗರ್ ಮುನಿ ಮಹಾರಾಜ್ ದರ್ಶನಕ್ಕೆ ಯಾತ್ರಾರ್ಥಿಗಳು ತೆರಳಿದ್ದರು. ಜೊತೆಗೆ 24 ತೀರ್ಥಂಕರರ ಮೋಕ್ಷ ಹೊಂದಿದ ಸ್ಥಳದ ದರ್ಶನ ಕೂಡ ಇತ್ತು. ಜೈನ ಕಾಶಿ ಎಂದೇ ಪ್ರಸಿದ್ಧಿಯಾದ ಸಮೇದ್ ಶಿಖರ್ಜಿ ಯಾತ್ರಾ ಸ್ಥಳವಾಗಿದೆ.
ಒಡಿಶಾ ಮೂಲಕ ಜಾರ್ಖಂಡ್ ತಲುಪಿ ಸಮೇದ್ ಶಿಖರ್ಜಿ ಯಾತ್ರಿಗಳು ತೆರಳಬೇಕಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು