10:57 PM Monday18 - May 2026
ಬ್ರೇಕಿಂಗ್ ನ್ಯೂಸ್
ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್…

ಇತ್ತೀಚಿನ ಸುದ್ದಿ

ಒಗ್ಗಟ್ಟಿನ ಕೊರತೆಯಿಂದ ರಾಜಕಾರಣ ದಲಿತರ ಕೈ ಜಾರುತ್ತಿದೆ: ಮಾಜಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್

06/09/2022, 18:51

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ರಾಜ್ಯದ 150 ವಿಧಾನ ಸಭಾ ಕ್ಷೇತ್ರಗಳಲ್ಲಿ ದಲಿತರೇ ನಿರ್ಣಾಯಕರಾಗಿದ್ದರೂ , ಒಗ್ಗಟ್ಟಿನ ಕೊರತೆಯಿಂದಾಗಿ ರಾಜಕಾರಣ ದಲಿತ ಕೈ ಜಾರುತ್ತಿದೆಯೆಂದು ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ವಿಷಾದಿಸಿದರು.

ನಗರದ ಗಲ್‌ಪೇಟೆಯಲ್ಲಿ ದಲಿತ ಸಮುದಾಯದ ಖಾಸಗಿ ಕಾರ್ಯಕ್ರಮದಲ್ಲಿ ವಿವಿಧ ಸಂಘಟನೆಗಳ ಮುಖಂಡರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ರಾಜ್ಯದ 150 ವಿಧಾನಸಭಾ ಕ್ಷೇತ್ರಗಳಲ್ಲಿ ದಲಿತರು ಒಗ್ಗಟ್ಟಾಗಿ ಮತ ಚಲಾಯಿಸಿದರೆ ರಾಜಕೀಯಕೀಲಿ ಕೈ ಹಿಡಿಯಲು ಸಾಧ್ಯವಾಗುತ್ತದೆ , ದಲಿತರು ಒಂದಾಗಬೇಕಿದೆ ಎಂದರು.

ಹಳ್ಳಿ ಮತ್ತು ಕೇರಿಗಳು ಒಂದಾಗುವವರೆವಿಗೂ ಸಮಾನತೆಯ ಹೋರಾಟ ಮುಂದುವರೆಸಬೇಕೆಂದು ಪ್ರತಿಪಾದಿಸಿದ ಅವರು , ಹಲವು ಹೋರಾಟಗಳಿಗೆ ನಾಂದಿ ಹಾಡಿರುವ ಕೋಲಾರ ಜಿಲ್ಲೆಯಿಂದಲೇ ಈ ಹೋರಾಟವನ್ನು ತಾವೇ ಮುಂದೆ ನಿಂತು ಮುನ್ನಡೆಸುವುದಾಗಿ ಘೋಷಿಸಿದರು.

ಕೋಲಾರದಲ್ಲಿ ತಮ್ಮ ತಂದೆ ಆರಂಭಿಸಿದ ಸಿದ್ದಾರ್ಥ ಪ್ರೌಢಶಾಲೆಯನ್ನು ಅಭಿವೃದ್ಧಿಪಡಿಸುವ ಸಲುವಾಗಿ ತಾವು ಕೋಲಾರಕ್ಕೆ ಆಗಮಿಸಿದ್ದು , ಸಿದ್ದಾರ್ಥಪ್ರೌಢಶಾಲೆಯನ್ನು ಮೇಲ್ದರ್ಜೆಗೆ ಏರಿಸಲಾಗುವುದು ಎಂದರು . 

ಮಾಜಿ ಸ್ಪೀಕರ್ ಶ್ರೀನಿವಾಸಪುರ ಶಾಸಕ ರಮೇಶ್ ಕುಮಾರ್ ಮಾತನಾಡಿ , ಸ್ವಾತಂತ್ರ್ಯ ಅಮೃತ ಮಹೋತ್ಸವ ಭಾಷಣದಲ್ಲಿ ತಮಗೆ ಮಹಿಳೆಯರ ಮೇಲೆ ಗೌರವವಿದೆಯೆಂದು ಹೇಳಿದ ಮೋದಿಯವರು , ತಮ್ಮದೇ ಗುಜರಾತ್ ರಾಜ್ಯದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಆರೋಪಿಗಳನ್ನು ಸ್ವಾತಂತ್ರ್ಯ ಅಮೃತ ಮಹೋತ್ಸವ ನೆಪದಲ್ಲಿ ಬಿಡುಗಡೆ ಮಾಡಿ ಅವರನ್ನು ಅಭೂತ ಪೂರ್ವವಾಗಿ ಸ್ವಾಗತಿಸಿದ್ದಾರೆ. ಇಂತವರಿಗೆ ಮಹಿಳೆ ಮತ್ತು ಸಮಾನತೆಯ ಹಕ್ಕುಗಳನ್ನು ನೀಡಿರುವ ಸಂವಿಧಾನದ ಮೇಲೆ ಹೇಗೆ ಗೌರವ ಇರಲು ಸಾಧ್ಯ ಎಂದು ಪ್ರಶ್ನಿಸಿದರು.

ಪ್ರಾಸ್ತಾವಿಕವಾಗಿ ಹಿರಿಯ ದಲಿತ ಮುಖಂಡ ಸಿ.ಎಂ. ಮುನಿಯಪ್ಪ ಮಾತನಾಡಿ , ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ದಲಿತರು ಹಂಗಿನ ರಾಜಕಾರಣ ಮಾಡಬೇಕಾಗಿದೆ , ಸ್ವತಂತ್ರವಾಗಿ ಪ೦ಗಡಗಳ ಮಾತನಾಡುವ ಹಕ್ಕು ಇಲ್ಲವಾಗಿದೆ . 

ಒಳಕಿತ್ತಾಡ ಬಿಟ್ಟು ಒಂದಾಗದಿದ್ದರೆ ಸ್ವಾಭಿಮಾನದ ರಾಜಕಾರಣ ಸಾಧ್ಯವಾಗುವುದಿಲ್ಲ , ಅಪಾಯದಲ್ಲಿರುವ ಸಂವಿಧಾನ ವನ್ನು ಸಂರಕ್ಷಿಸಲು ಸಾಧ್ಯವಿಲ್ಲವೆಂದು ಟೀಕಿಸಿದರು . 

ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ದಲಿತ ಮುಖಂಡರು ಸಂಘಟನೆಗಳ ಪರವಾಗಿ ಜಿ. ಪರಮೇಶ್ವರ್‌ರನ್ನು ಸನ್ಮಾನಿಸಲಾಯಿತು .

ವೇದಿಕೆಯಲ್ಲಿ ಶಾಸಕರಾದ ಕೆ.ವೈ. ನಂಜೇಗೌಡ , ಎಸ್.ಎನ್ . ನಾರಾಯಣಸ್ವಾಮಿ , ನಜೀರ್‌ ಅಹಮದ್‌ , ಮುಖಂಡರಾದ ಚಂದನಗೌಡ , ಮುನಿಆಂಜಿನಪ್ಪ , ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಶ್ರೀನಿವಾಸ್ , ಶ್ರೀಕೃಷ್ಣ , ಎನ್.ಮುನಿಸ್ವಾಮಿ , ಗೊಲ್ಲ ಹಳ್ಳಿ ಶಿವಪ್ರಸಾದ್‌ , ಟಿ.ವಿಜಯಕುಮಾರ್ , ತಿಮೃಯ್ಯ , ಬೆಳಗಾನಹಳ್ಳಿ ಮುನಿವೆಂಕಟಪ್ಪ ಹಾಗು ವಿವಿಧ ದಲಿತ ಸಂಘಟನೆಗಳ ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು