3:39 AM Friday20 - June 2025
ಬ್ರೇಕಿಂಗ್ ನ್ಯೂಸ್
Bangalore | ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ: ರಾಜ್ಯಾದ್ಯಂತ ಪರಿಸರ… Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:… ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ

ಇತ್ತೀಚಿನ ಸುದ್ದಿ

ಒಳ ಮೀಸಲಾತಿ ಜಾರಿ; ನಮ್ಮ ಸರಕಾರವು ನುಡಿದಂತೆ ನಡೆಯಲಿದೆ: ಸಚಿವ ಡಾ.ಎಚ್. ಸಿ. ಮಹದೇವಪ್ಪ

16/12/2024, 22:06

ಬೆಳಗಾವಿ(reporterkarnataka.com):ಬೆಳಗಾವಿಯ ಸುವರ್ಣ ಸೌಧದ ಬಳಿ ಮಾದಿಗ ದಂಡೋರ ಸಮಿತಿಯಿಂದ ಜರುಗುತ್ತಿರುವ ಒಳ ಮೀಸಲಾತಿ ಜಾರಿ ಹೋರಾಟದ ಸಮಾವೇಶದಲ್ಲಿ ಪಾಲ್ಗೊಂಡು ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದೆ.
ಇದೇ ವೇಳೆ ಪರಿಶಿಷ್ಟ ಸಮುದಾಯಗಳು ತಮ್ಮನ್ನು ಮಾದಿಗ ಮತ್ತು ಹೊಲೆಯ ಎಂದು ಕರೆದುಕೊಳ್ಳುವುದನ್ನು ನಿಲ್ಲಿಸಲು ವಿನಂತಿಸಿದೆ.
ಒಳ ಮೀಸಲಾತಿ ಜಾರಿಗೆ ನಮ್ಮ ಸಿದ್ದರಾಮಯ್ಯ ಸರ್ಕಾರವು ಬದ್ಧವಾಗಿದ್ದು ಈಗಾಗಲೇ ಅದನ್ನು ಸ್ಪಷ್ಟವಾಗಿ ಘೋಷಿಸಿದೆ. ಆದರೆ ಬಿಜೆಪಿ ಪಕ್ಷದ ನಾಯಕರು ಇದನ್ನು ರಾಜಕೀಯಗೊಳಿಸುವ ಪ್ರಯತ್ನವನ್ನು ಮಾಡುತ್ತಿದ್ದು ಇದರಿಂದ ಪರಿಶಿಷ್ಟ ಸಮುದಾಯಗಳಿಗೆ ಯಾವುದೇ ಪ್ರಯೋಜನ ಇಲ್ಲ.
ಜನರನ್ನು ಮೆಚ್ಚಿಸಲು ಹಳೆಯ ವರದಿ ಮತ್ತು 2011 ರ ಜನಗಣತಿಯ ದತ್ತಾಂಶ ತೆಗೆದುಕೊಂಡು ಮೀಸಲಾತಿ ಕೊಡಿ ಎಂದು ಸಲಹೆ ಕೊಡುತ್ತಿರುವ ಬಿಜೆಪಿಗರಿಗೆ 2011ರಿಂದ 2024ರ ಅವಧಿಯ ಒಳಗೆ ಪರಿಶಿಷ್ಟ ಸಮುದಾಯಗಳ ಜನಸಂಖ್ಯೆಯಲ್ಲಿ ಏರಿಕೆಯಾಗಿದ್ದರ ಕುರಿತು ಅರಿವಿಲ್ಲ. ಸರಿ ಸುಮಾರು ಒಂದೂವರೆ ದಶಕದ ಅವಧಿಯಲ್ಲಿ ಆಗಿರುವ ಮಾರ್ಪಾಡುಗಳನ್ನು ಸೇರಿಸಿಕೊಳ್ಳದೇ ಮೀಸಲಾತಿಯನ್ನು ಜಾರಿ ಮಾಡಿದರೆ ಮುಂದೊಮ್ಮೆ ಯಾರಾದರೂ ಪ್ರಶ್ನೆ ಮಾಡಿದರೆ ಆಗ ತೊಂದರೆ ಅನುಭವಿಸಬಾರದು ಎಂಬ ಉದ್ದೇಶದಿಂದಲೇ ನಾಗಮೋಹನ್ ದಾಸ್ ಸಮಿತಿಯನ್ನು ರಚಿಸಲಾಗಿದೆ ಎಂದು ಸಚಿವ ಡಾ.ಎಚ್. ಸಿ. ಮಹದೇವಪ್ಪ ನುಡಿದರು.


ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದಂತೆ ರಾಜಕೀಯ ಅಧಿಕಾರವೇ ಶೋಷಿತರ ಅಭಿವೃದ್ಧಿಯ ಕೀಲಿಕೈ ಎಂದು ಹೇಳಿದ್ದು ಅದನ್ನು ಎಲ್ಲರೂ ಗಮನದಲ್ಲಿಟ್ಟುಕೊಂಡು ವರ್ತಿಸಬೇಕು. ದೇಶಾದ್ಯಂತ ಅತಿ ಶೋಷಿತ ಸಮುದಾಯಗಳನ್ನು ಗುರುತಿಸಿ ಅವುಗಳಿಗೆ ಒಳ ಮೀಸಲಾತಿ ಕಲ್ಪಿಸುವ ಕುರಿತು ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಆಲೋಚಿಸಿದ್ದು ಈ ಬಗ್ಗೆ ಮುಂದಿನ ದಿನಗಳಲ್ಲಿ ಪಕ್ಷವು ವಿವರವಾಗಿ ಚರ್ಚಿಸಲಿದೆ.
ಒಳ ಮೀಸಲಾತಿಯನ್ನು ಸೂಕ್ತ ರೀತಿಯಲ್ಲಿ ಕಾಂಗ್ರೆಸ್ ಸರ್ಕಾರ ಜಾರಿ ಮಾಡಲಿದ್ದು ಚುನಾವಣಾ ಪ್ರಣಾಳಿಕೆಯಲ್ಲಿ ತಾನು ನುಡಿದಂತೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು