4:52 PM Wednesday2 - September 2026
ಬ್ರೇಕಿಂಗ್ ನ್ಯೂಸ್
ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ

ಇತ್ತೀಚಿನ ಸುದ್ದಿ

ಒಳ್ಳೆಯ ಕೆಲಸಗಳ ಜತೆ ಯಾವಾಗಲೂ ನಾನಿದ್ದೇನೆ: ಬಂಟ್ಚಾಳ ಶಾಸಕ ರಾಜೇಶ್ ನಾಯ್ಕ್

08/02/2023, 18:43

ಕಲ್ಲಡ್ಕ(reporterkarnataka.com): ಶಾಸಕನಾಗಿ ಇರಲಿ ಅಥವಾ ಇಲ್ಲದಿರಲಿ ಒಳ್ಳೆಯ ಕೆಲಸಗಳ ಜೊತೆ ಯಾವಾಗಲೂ ನಾನಿದ್ದೇನೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಹೇಳಿದರು.

ಬಂಟ್ವಾಳ ತಾಲೂಕು ವಿಟ್ಲಮುಡ್ನರು ಗ್ರಾಮದ ಏಮಾಜೆ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ತನ್ನ ಅನುದಾನದಲ್ಲಿ ಸುಮಾರು 14 ಲಕ್ಷ ವೆಚ್ಚದ ನಿರ್ಮಾಣಗೊಳ್ಳಲಿರುವ ಕಲಿಕಾ ಕೊಠಡಿಯ ಶಿಲನ್ಯಾಸ ಮಾಡಿ, ಮುತ್ತೊಟ್ಟು ಫೈನಾನ್ಸ್ ವತಿಯಿಂದ ನಿರ್ಮಿಸಲ್ಪಟ್ಟ ಬಾಲವನವನ, ಹಾಗೂ ವಿಟ್ಲ ಮುಡ್ನರು ಗ್ರಾಮ ಪಂಚಾಯತ್ ವತಿಯಿಂದ ನರೇಗಾ ಯೋಜನೆಯ ಅಡಿಯಲ್ಲಿ ನಿರ್ಮಿಸಲ್ಪಟ್ಟ ಶಾಲಾ ಆವರಣ ಗೋಡೆ ಹಾಗೂ ಆಟದ ಮೈದಾನ ವಿಸ್ತರಣಾ, ಹರೀಶ್ ಮುಜಾಲ ಒದಗಿಸಿಕೊಟ್ಟ ಬಾಸ್ಕೆಟ್ ಬಾಲ್ ಕ್ರೀಡಾ ಸಲಕರಣೆ ಮೊದಲಾದ ಕಾಮಗಾರಿಗಳನ್ನು ಉದ್ಘಾಟಿಸಿ ಅವರು ಮಾತಾಡಿದರು.

ತನ್ನ ಕ್ಷೇತ್ರದ ಹಳ್ಳಿ ಪ್ರದೇಶದ ಏಮಾಜೆ ಶಾಲೆಯನ್ನು ಬಾಲವನ ನಿರ್ಮಿಸಲು ಆಯ್ಕೆ ಮಾಡಿ ಬಹಳ ಸುಂದರವಾಗಿ ಬಾಲವನ ನಿರ್ಮಿಸಿಕೊಟ್ಟ ಮುತ್ತೂಟ್ ಫೈನಾನ್ಸಿನ ಸಂಸ್ಥೆಯನ್ನು ಶಾಸಕರು ಅಭಿನಂದಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆಟ್ಲ ಮುಟ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸಚ್ಚಿದಾನಂದ ವಹಿಸಿದ್ದರು. ಈ ಸಂದರ್ಭದಲ್ಲಿ ಶಾಲೆಗೆ ಸಹಕರಿಸಿದ ವಿವಿಧಗಣ್ಯರನ್ನು ಅಭಿನಂದಿಸಲಾಯಿತು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶಕೀಲಾ ಕೃಷ್ಣ ಮಿತ್ತಕೋಡಿ, ಪಂಚಾಯತ್ ಸದಸ್ಯರಾದ ಸವಿತಾ ಡಿ ಪೂಜಾರಿ, ಧನಂಜಯ ಗೌಡ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಮಲ್ಲಿಕಾ ಗಣೇಶ್ ಆಚಾರ್ಯ, ಉಪಾಧ್ಯಕ್ಷರಾದ ಪ್ರಸಾದ್ ಆಚಾರ್ಯ ಮೈಕೆ, ಮುತ್ತೂಟ್ ಫೈನಾನ್ಸಿನ ಪುತ್ತೂರು ಕ್ಲಸ್ಟರ್ ಮೆನೇಜರ್ ಸಂದೇಶ್ ಶೆಣೈ, ಪುತ್ತೂರು ಬ್ರಾಂಚ್ ಮ್ಯಾನೇಜರ್ ನವೀನ್ ಎ., ಪ್ರಸಾದ್ ಕುಮಾರ್ (ಮೆನೇಜರ್ ಸಿ ಎಸ್ ಆರ್ ಮಂಗಳೂರು), ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನುಷಾ ಮೊದಲಾದವರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ತ್ರಿವೇಣಿ ರಮೇಶ್ ಸ್ವಾಗತಿಸಿದರು. ಗೌರವ ಶಿಕ್ಷಕಿ ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು