3:00 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಒಂದೇ ಕುಟುಂಬದ 4 ಮಂದಿ ನೀರು ಪಾಲು: 24 ತಾಸು ಕಳೆದರೂ ಘಟನಾ ಸ್ಥಳಕ್ಕೆ ಬಾರದ ಶಾಸಕ ಮಹೇಶ್ ಕುಮಟಳ್ಳಿ; ಗ್ರಾಮಸ್ಥರ ಆಕ್ರೋಶ

29/06/2021, 17:16

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿಯ ಕೃಷ್ಣಾ ನದಿಯಲ್ಲಿ ಒಂದೇ ಕುಟುಂಬದ ನಾಲ್ವರು ಸಹೋದರರು ನೀರು ಪಾಲಾದ ಘಟನೆ ನಡೆದು 24 ತಾಸು ಕಳೆದರೂ ಸ್ಥಳೀಯ ಶಾಸಕ ಮಹೇಶ್ ಕುಮಟಳ್ಳಿ ನಾಪತ್ತೆಯಾಗಿದ್ದಾರೆ. ದುರಂತ ನಡೆದ ಸ್ಥಳದಲ್ಲಿ ಇಡೀ ಗ್ರಾಮವೇ ನೆರೆದರೂ ಜನರು ಆರಿಸಿ ಕಳುಹಿಸಿದ ಶಾಸಕರ ಸುಳಿವಿಲ್ಲ. ಇದರಿಂದ ಗ್ರಾಮಸ್ಥರು ಕೂಡ ಆಕ್ರೋಶಗೊಂಡಿದ್ದಾರೆ.

ಬಡ ದಲಿತ ಕುಟುಂಬಕ್ಕೆ ಸೇರಿದ ನಾಲ್ವರು ಸಹೋದರರು ಸೋಮವಾರ ಮಧ್ಯಾಹ್ನ ಬಟ್ಟೆ ಒಗೆಯುತ್ತಿದ್ದ ವೇಳೆ ನೀರು ಪಾಲಾಗಿದ್ದರು. ಸುದ್ದಿ ತಿಳಿಯುತ್ತಿದ್ದಂತೆ ಇಡೀ ಗ್ರಾಮವೇ ನಡುಗು ಹೋಗಿತ್ತು. ಕುಟುಂಬಸ್ಥರ ಮತ್ತು ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಜಿಲ್ಲಾಧಿಕಾರಿ, ಸಹಾಯಕ ಕಮಿಷನರ್, ತಹಶೀಲ್ದಾರ್, ಕಂದಾಯ ಅಧಿಕಾರಿಗಳು ದೌಡಾಯಿಸಿದ್ದರು. ಅಗ್ನಿಶಾಮಕ ದಳ, ಎನ್ ಡಿ ಆರ್ ಎಫ್ ತಂಡ, ಮುಳುಗು ತಜ್ಞರು ನಾನಾ ಕಡೆಗಳಿಂದ ಆಗಮಿಸಿದ್ದರು. ಆದರೆ ಜನರು ಮತ ಹಾಕಿ ಆರಿಸಿ ಕಳುಹಿಸಿದ ಜನಪ್ರತಿನಿಧಿ, ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಮಾತ್ರ ಇತ್ತ ಕಾಲು ಇಡಲೇ ಇಲ್ಲ.


ಶಾಸಕರು ಯಾವಾಗಲೂ ತುಂಬಾ ಬ್ಯುಸಿ ಇರುತ್ತಾರೆ. ಅವರಿಗೆ ಇಂತಹ ಚಿಲ್ಲರೆ ವಿಷಯಕ್ಕೆ ತಲೆ ಹಾಕಲು ಎಲ್ಲಿದೆ ಸಮಯ ಎಂದು ಗ್ರಾಮಸ್ಥರು ತಮಾಷೆ ಮಾಡುತ್ತಾರೆ. ವಾಸ್ತವದಲ್ಲಿ ಕೂಡ ಇದು ಹೌದು. ಸರಕಾರ ಕಟ್ಟುವುದು, ಸರಕಾರ ಬೀಳಿಸುವುವಲ್ಲಿ ಕೆಲವು ಶಾಸಕರು ಬ್ಯುಸಿಯಾಗಿರುತ್ತಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು