4:50 PM Monday21 - July 2025
ಬ್ರೇಕಿಂಗ್ ನ್ಯೂಸ್
Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ…

ಇತ್ತೀಚಿನ ಸುದ್ದಿ

ಒಂದೇ ಕುಟುಂಬದ ಎಲ್ಲ 5 ಮಂದಿಗೂ ಬೆರಳುಗಳೇ ಶಾಪ!!: ಸಹಜ ಕೆಲಸಕ್ಕೆ ಅಡ್ಡಿ; ಆರ್ಥಿಕ ಸಂಕಷ್ಟ!

19/07/2022, 11:00

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಪೂಜಾರಹಳ್ಳಿ ತಾಂಡದಲ್ಲಿರುವ ಕುಟುಂಬವೊಂದರ ಎಲ್ಲ ಸದಸ್ಯರು ತಮ್ಮ ಕೈ ಕಾಲುಗಳಲ್ಲಿ ಒಟ್ಟು ತಲಾ 24, 28, 32 ಬೆರಳುಗಳನ್ನು ಹೊಂದಿದ್ದಾರೆ. ಇದು ವಿಚಿತ್ರವಾದರೂ ಸತ್ಯ ಸಂಗತಿಯಾಗಿದೆ. 


ಜಗದೀಶ ನಾಯ್ಕ ಎಂಬ ಕುಟುಂಬದ ಸದಸ್ಯರು ಅವರ ತಾಯಿ ಸೇರಿದಂತೆ ಮನೆಯ ಒಟ್ಟು 5 ಮಂದಿ ಸದಸ್ಯರು ಕೈಯಲ್ಲಿ ಆರು, ಏಳು, ಎಂಟು ಬೆರಳುಗಳನ್ನು ಹೊಂದಿದ್ದಾರೆ. ಅವು ಪರಸ್ಪರ ಹೊಂದಿಕೊಂಡಿದ್ದು ಸಹಜವಾಗಿ ಎಲ್ಲರಂತೆ ಕೆಲ ಕಾರ್ಯಮಾಡಲಾಗುತ್ತಿಲ್ಲ. ಅವರ ದೇಹಕ್ಕೆ ವ್ಯತಿರಿಕ್ತ ಪರಿಣಾಮ ಬೀರಿದ ಕಾರಣ ಅವರನ್ನು ವಿಶಿಷ್ಟ ಚೇತನರೆಂದು ಪರಿಗಣಿಸಲಾಗಿದೆ. ಎಲ್ಲರಂತೆ ಸಹಜವಾಗಿ ದುಡಿಮೆ ಮಾಡಲಾಗದೇ ತೀರಾ ಆರ್ಥಿಕ ಸಂಕಷ್ಟವನ್ನು ಕುಟುಂಬ ಸದಸ್ಯರು ಎದುರಿಸುತ್ತಿದ್ದಾರೆ. ಅವರ ನೆರವಿಗೆ ಜಿಲ್ಲಾಡಳಿತ ಹಾಗೂ ತಾಲೂಕಾಡಳಿತ ಮುಂದಾಗಬೇಕಿದೆ. ಕುಟುಂಬಕ್ಕೆ ಆರ್ಥಿಕ ಸಾಲ ಸೌಲಭ್ಯ ನೀಡಿ, ಅವರು ಸ್ವಾವಲಂಬಿ ಜೀವನ ನಡೆಸಲು ಅಗತ್ಯ ನೆರವನ್ನು ಸರ್ಕಾರ ಮಾಡಬೇಕಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು