7:55 PM Thursday13 - November 2025
ಬ್ರೇಕಿಂಗ್ ನ್ಯೂಸ್
Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ…

ಇತ್ತೀಚಿನ ಸುದ್ದಿ

ಒಂದೇ ಕುಟುಂಬದ ಎಲ್ಲ 5 ಮಂದಿಗೂ ಬೆರಳುಗಳೇ ಶಾಪ!!: ಸಹಜ ಕೆಲಸಕ್ಕೆ ಅಡ್ಡಿ; ಆರ್ಥಿಕ ಸಂಕಷ್ಟ!

19/07/2022, 11:00

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಪೂಜಾರಹಳ್ಳಿ ತಾಂಡದಲ್ಲಿರುವ ಕುಟುಂಬವೊಂದರ ಎಲ್ಲ ಸದಸ್ಯರು ತಮ್ಮ ಕೈ ಕಾಲುಗಳಲ್ಲಿ ಒಟ್ಟು ತಲಾ 24, 28, 32 ಬೆರಳುಗಳನ್ನು ಹೊಂದಿದ್ದಾರೆ. ಇದು ವಿಚಿತ್ರವಾದರೂ ಸತ್ಯ ಸಂಗತಿಯಾಗಿದೆ. 


ಜಗದೀಶ ನಾಯ್ಕ ಎಂಬ ಕುಟುಂಬದ ಸದಸ್ಯರು ಅವರ ತಾಯಿ ಸೇರಿದಂತೆ ಮನೆಯ ಒಟ್ಟು 5 ಮಂದಿ ಸದಸ್ಯರು ಕೈಯಲ್ಲಿ ಆರು, ಏಳು, ಎಂಟು ಬೆರಳುಗಳನ್ನು ಹೊಂದಿದ್ದಾರೆ. ಅವು ಪರಸ್ಪರ ಹೊಂದಿಕೊಂಡಿದ್ದು ಸಹಜವಾಗಿ ಎಲ್ಲರಂತೆ ಕೆಲ ಕಾರ್ಯಮಾಡಲಾಗುತ್ತಿಲ್ಲ. ಅವರ ದೇಹಕ್ಕೆ ವ್ಯತಿರಿಕ್ತ ಪರಿಣಾಮ ಬೀರಿದ ಕಾರಣ ಅವರನ್ನು ವಿಶಿಷ್ಟ ಚೇತನರೆಂದು ಪರಿಗಣಿಸಲಾಗಿದೆ. ಎಲ್ಲರಂತೆ ಸಹಜವಾಗಿ ದುಡಿಮೆ ಮಾಡಲಾಗದೇ ತೀರಾ ಆರ್ಥಿಕ ಸಂಕಷ್ಟವನ್ನು ಕುಟುಂಬ ಸದಸ್ಯರು ಎದುರಿಸುತ್ತಿದ್ದಾರೆ. ಅವರ ನೆರವಿಗೆ ಜಿಲ್ಲಾಡಳಿತ ಹಾಗೂ ತಾಲೂಕಾಡಳಿತ ಮುಂದಾಗಬೇಕಿದೆ. ಕುಟುಂಬಕ್ಕೆ ಆರ್ಥಿಕ ಸಾಲ ಸೌಲಭ್ಯ ನೀಡಿ, ಅವರು ಸ್ವಾವಲಂಬಿ ಜೀವನ ನಡೆಸಲು ಅಗತ್ಯ ನೆರವನ್ನು ಸರ್ಕಾರ ಮಾಡಬೇಕಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು