10:11 AM Saturday23 - August 2025
ಬ್ರೇಕಿಂಗ್ ನ್ಯೂಸ್
ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ! Kodagu | ಸೋಮವಾರಪೇಟೆ: ಯುವಕನ ಆತ್ಮಹತ್ಯೆ; 3 ದಿನಗಳ ಹುಡುಕಾಟದ ಬಳಿಕ ಮೃತದೇಹ… ರಾಜ್ಯದ ಮೊದಲ ‘ವಿದೇಶ ಅಧ್ಯಯನ ಎಕ್ಸ್‌ಪೋ’ ಯಶಸ್ವಿ: 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು…

ಇತ್ತೀಚಿನ ಸುದ್ದಿ

ಒಂದೇ ಒಂದು ಶಾಲೆ ಆರಂಭಿಸದ ಬಿಜೆಪಿ ಗನ್ ತರಬೇತಿ ನೀಡುತ್ತಿದೆ: ಪ್ರತಿಪಕ್ಷದ ಉಪ ನಾಯಕ ಖಾದರ್ ಗರಂ

17/05/2022, 21:50

ಮಂಗಳೂರು(reporterkarnataka.com): ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಒಂದೇ ಒಂದು ಹೈಸ್ಕೂಲ್ ಪ್ರಾರಂಭಿಸಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಥಮಿಕ ಬಿಡಿ, ಹೊಸತಾಗಿ ಅಂಗನವಾಡಿ ಕೂಡ ಆರಂಭಿಸಿಲ್ಲ. ವಿದ್ಯಾಸಂಸ್ಥೆಗಳಲ್ಲಿ ಶಸ್ತ್ರಾಸ್ತ್ರ ತರಬೇತಿಗೆ ಅವಕಾಶ ಕೊಟ್ಟಿರೋದು ಸರ್ಕಾರದ ನಿರ್ಲಕ್ಷ್ಯವಾಗಿದೆ. ಈ ಬಗ್ಗೆ ಗೃಹ ಸಚಿವರು ಮತ್ತು ಶಿಕ್ಷಣ ಸಚಿವರು ಈ ಬಗ್ಗೆ ಜನರಿಗೆ ಉತ್ತರಿಸಲಿ. ಈ ವಿಚಾರದಲ್ಲಿ ಮುಖ್ಯಮಂತ್ರಿ ಕೂಡ ಮೌನವಾಗಿರೋದು ಸರಿಯಲ್ಲ ಎಂದು ವಿಪಕ್ಷ ಉಪನಾಯಕ ಯುಟಿ ಖಾದರ್ ಹೇಳಿದರು. 

ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೊಡಗಿನ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಿಗೆ ಪೆನ್, ಪುಸ್ತಕ ಕೊಡುವ ಬದಲು ರೈಫಲ್ ಟ್ರೈನಿಂಗ್ ಮಾಡಲಾಗಿದೆ. ಶಾಸಕರೇ ಮುಂದೆ ನಿಂತು ಮಾಡಿರೋದು ಸರ್ಕಾರದ ತಾಲಿಬಾನ್ ಸಂಸ್ಕೃತಿ ತೋರಿಸುತ್ತಿದೆ ಎಂದು ಖಾದರ್ ಆರೋಪಿಸಿದರು.

ಸರ್ಕಾರ ಗೂಂಡಾಗಿರಿ ಮಾಡಲು ಹೊರಗುತ್ತಿಗೆ ಕೊಟ್ಟಂತಿದೆ. ಎನ್ ಸಿಸಿಯಂತಹ ಸಂಸ್ಥೆಗಳು ಅಧಿಕೃತ. ಅವರು ದೇಶ ಸೇವೆಗಾಗಿ ತರಬೇತಿ ಕೊಡುತ್ತಾರೆ. ಆದರೆ ಕೂಡಗಿನಲ್ಲಿ ಮಾಡಿದವರು ಯಾರು ಅನ್ನೋದು ಗೊತ್ತಿದೆ. ಇವರ ಉದ್ದೇಶ ಏನು? ಅನುಮತಿ ಯಾರು ಕೊಟ್ಟಿದ್ದು ಎಂಬುದರ ತನಿಖೆ ಆಗಲಿ ಎಂದು ಆಗ್ರಹಿಸಿದರು.

ಮಕ್ಕಳ ಕೈಗೆ ಪುಸ್ತಕ, ಪೆನ್ ಕೊಡುವ ಬದಲು ಆಯುಧ ಕೊಡ್ತಾರಾ? ಗನ್ ಹಿಡಿದುಕೊಂಡು ಸುತ್ತಾಡಲಿಕ್ಕೆ ಇದೇನು ಉತ್ತರ ಪ್ರದೇಶವಾ? ಕಾಂಗ್ರೆಸ್ ಸೇವಾದಳ ಅಥವಾ ಯೂತ್ ಕಾಂಗ್ರೆಸ್ ಮಾಡಿದ್ರೆ ಏನಾಗ್ತಿತ್ತು?ದೇಶದ ಭವಿಷ್ಯ ಮಕ್ಕಳು, ಮಕ್ಕಳಲ್ಲಿ ದ್ವೇಷದ ವಾತಾವರಣ ಬೇಡ. ಹೀಗಾಗಿ ದ್ವೇಷ ಹುಟ್ಟುವ ವಿಚಾರಗಳು ಮಕ್ಕಳಲ್ಲಿ ಬೇಡ ಎಂದರು.

ಮುಸ್ಲಿಮರ ಓಟು ಬೇಡ, ಹಿಂದೂಗಳ ಓಟು ಸಾಕು ಎಂಬ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಬೆಳ್ತಂಗಡಿ ಶಾಸಕರ ಅಪ್ರಬುದ್ಧ ಮಾತು, ಅದೊಂದು ಕೀಳು ರಾಜಕೀಯ. ಅದಕ್ಕೆ ನಾನು ಉತ್ತರ ಕೊಡಲ್ಲ, ಅದಕ್ಕೆ ಬೆಳ್ತಂಗಡಿ ಜನ ಉತ್ತರ ಕೊಡ್ತಾರೆ. ಓಟು ಕೊಟ್ಟ ಜನರಿಗಾದ್ರೂ ಮೊದಲು ಇವರು ಕೆಲಸ ಮಾಡಲಿ, ಅಲ್ಲಿನ ಎಂಡೋಸಲ್ಫಾನ್ ಪೀಡಿತರಿಗೆ  ಅವರು ಏನು ಮಾಡಿದ್ರು? ಮೊದಲು ಇವರು ಅದನ್ನ ಮಾಡಲಿ, ಅದು ಬಿಟ್ಟು ಇದೆಲ್ಲಾ ಮಾಡುವುದಲ್ಲ ಎಂದು ಕಿಡಿಕಾರಿದ್ದಾರೆ.

ಮಂಗಳೂರಿನ ಮಳಲಿ ಮಸೀದಿ ವಿಚಾರದಲ್ಲಿ ವಿಎಚ್ ಪಿ ಅಷ್ಟಮಂಗಳ ಪ್ರಶ್ನೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಕೆಲವರಿಗೆ ಕೆಲವು ಸಂಶಯ ಬರುತ್ತದೆ, ಆದರೆ ಇದೊಂದು ಜಾಗದ ವಿವಾದ, ದಾಖಲೆ ಜಿಲ್ಲಾಧಿಕಾರಿ ಬಳಿ ಇದೆ. ಕಡೆಯವರು ಡಿಸಿಗೆ ಕೊಟ್ಟಿದ್ದಾರೆ. 400-500 ವರ್ಷದಿಂದ ಇಲ್ಲಿ ಮಸೀದಿ ಇರೋದು ಊರಿನವರಿಗೆ ಗೊತ್ತಿದೆ. ಅದು ಮಸೀದಿ ಅನ್ನೋದು ಊರಿನವರಿಗೆ ಗೊತ್ತಿದೆ. ಆದರೆ ಹೊರಗಿನವರಿಗೆ ಅದರಲ್ಲಿ ಸಂಶಯ. ಸಂಶಯ ಬಂದಾಗ ಅವರು ಡಿಸಿಗೆ ಈ ಬಗ್ಗೆ ಅರ್ಜಿ ಕೊಟ್ಟಿದ್ದಾರೆ. ಈಗ ಡಿಸಿ ಅದರ ದಾಖಲೆ ನೋಡಿ ನಿರ್ಧಾರ ಮಾಡಬೇಕು. ಜಿಲ್ಲಾಧಿಕಾರಿ ಕಾರ್ಯಪ್ರವೃತ್ತರಾಗಿ ದಾಖಲೆ ನೋಡಿ ತೀರ್ಪು ಕೊಡಲಿ.

ಅಸಮಾಧಾನ ಇದ್ದವರು ಬೇಕಾದ್ರೆ ಕೋರ್ಟ್ ಗೆ ಹೋಗಲಿ. ನಾಳೆ ನಿಮ್ಮ ಮನೆಯಲ್ಲಿ ನೋಡಿದ್ರೂ ಅಡಿಯಲ್ಲಿ ಹೆಣ ಸಿಗಬಹುದು. ಹಾಗಂತ ಅದು ತೀರಿ ಹೋದವನ ಜಾಗ ಅನ್ನೋದಕ್ಕೆ ಆಗುತ್ತಾ..? ಹೀಗಾಗಿ ಡಿಸಿ ತಕ್ಷಣ ಈ ವಿಚಾರದಲ್ಲಿ ನ್ಯಾಯ ಕೊಡಬೇಕು. ಆದರೆ ಡಿಸಿ ಯಾಕೆ ತಡ ಮಾಡ್ತಿದಾರೆ ಗೊತ್ತಾಗ್ತಿಲ್ಲ? ಜಿಲ್ಲಾಧಿಕಾರಿ ತಕ್ಷಣ ಗೊಂದಲ ಮಾಡದೇ ಬಗೆಹರಿಸಲಿ. ದಾಖಲೆಯಲ್ಲಿ ಏನಿದೆ ಅದರ ಕುರಿತು ಅವರು ಆದೇಶ ಕೊಡಲಿ, ಇಡೀ ಪ್ರಕರಣದಲ್ಲಿ ಜಿಲ್ಲಾಧಿಕಾರಿ ನಿರ್ಧಾರ ಕೇಂದ್ರ ಬಿಂದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು