6:44 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಒಂದೇ ವೇದಿಕೆಯಲ್ಲಿದ್ದರೂ ಪರಸ್ಪರ ಮುಖ ನೋಡದ ಈಶ್ವರಪ್ಪ- ರಾಘವೇಂದ್ರ: ಆರೆಸ್ಸೆಸ್ ಯುಗಾದಿ ಸಮಾರಂಭದಲ್ಲಿ ಮುನಿಸಿಕೊಂಡೇ ಇದ್ದ ನಾಯಕರು!

09/04/2024, 21:03

ಜಯಶ್ರೀ ಪಾಟೀಲ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಶಿವಮೊಗ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಹಾಗೂ ಬಿಜೆಪಿ ರೆಬೆಲ್ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅವರು ಒಂದೇ ವೇದಿಕೆಯಲ್ಲಿದ್ದರೂ ಕೈಕುಲುವುದು ಬಿಡಿ, ಪರಸ್ಪರ ಮುಖ ನೋಡದ ಘಟನೆ ನಡೆದಿದೆ.
ಆರೆಸ್ಸೆಸ್ ಆಯೋಜಿಸಿದ ಯುಗಾದಿ ಕಾರ್ಯಕ್ರಮದಲ್ಲಿ ಈ ಇಬ್ಬರು ನಾಯಕರು ಒಂದೇ ವೇದಿಕೆಯಲ್ಲಿದ್ದರು. ಶಿವಮೊಗ್ಗದ ಆದಿಚುಂಚನಗಿರಿ ಕಾಲೇಜು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದ ರಾಘವೇಂದ್ರ ಹಾಗೂ ಮಾಜಿ ಸಚಿವ ಈಶ್ವರಪ್ಪ ಅವರು ಆರೆಸ್ಸೆಸ್ ಕಪ್ಪು ಟೋಪಿ ಧರಿಸಿ ಭಾಗವಹಿಸಿದ್ದರು. ಇಬ್ಬರು ನಾಯಕರು ಆರೆಸ್ಸೆಸ್ ಸಮವಸ್ತ್ರವಾದ ಬಿಳಿ ಶರ್ಟ್/ ಜುಬ್ಬಾ ತೊಟ್ಟಿದ್ದರು. ದಶಕಗಳ ಕಾಲ ಒಂದೇ ಪಕ್ಷದಲ್ಲಿ ದುಡಿದಿದ್ದ ಆ ಇಬ್ಬರು ನಾಯಕರಲ್ಲಿ ಒಬ್ಬರು ಹಿರಿಯ ರಾಜಕಾರಣಿಯಾದರೆ, ಇನ್ನೊಬ್ಬರು ಯುವ ನೇತಾರ. ಆದರೆ ಈ ಇಬ್ಬರೂ ನಾಯಕರುಗಳು ಒಬ್ಬರ ಮುಖ ಇನ್ನೊಬ್ಬರು ನೋಡುವ ಗೋಜಿಗೆ ಹೋಗಿಲ್ಲ. ಯಾಕೆಂದರೆ ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಈ ಇಬ್ಬರು ನಾಯಕರು ಸ್ಪರ್ಧಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರನಾದ ರಾಘವೇಂದ್ರ ಅವರು ಬಿಜೆಪಿಯ ಅಧಿಕೃತ ಅಭ್ಯರ್ಥಿಯಾದರೆ, ಈಶ್ವರಪ್ಪ ಅವರು ಬಿಜೆಪಿ ಬಂಡಾಯ ಅಭ್ಯರ್ಥಿ.

ಇತ್ತೀಚಿನ ಸುದ್ದಿ

ಜಾಹೀರಾತು