2:59 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಒಂದೆಡೆ ಅತಿವೃಷ್ಠಿ, ಇನ್ನೊಂದೆಡೆ ಅನಾವೃಷ್ಠಿ: ಉತ್ತರ ಕರ್ನಾಟಕದಲ್ಲಿ ಕೈಕೊಟ್ಟ ಮಳೆ; ಶತಕ ದಾಟಿದ ಟೊಮೆಟೊ, ಮೆಣಸಿನ ಕಾಯಿ ಬೆಲೆ!

05/07/2023, 21:39

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕರಾವಳಿ ಕರ್ನಾಟಕದಲ್ಲಿ ಅತಿವೃಷ್ಠಿಯಾಗುತ್ತಿದ್ದರೆ, ಉತ್ತರ ಕರ್ನಾಟಕದಲ್ಲಿ ಅನಾವೃಷ್ಠಿ ತಲೆದೋರಿದೆ.
ಮುಂಗಾರು ಮಳೆ ಕೈ ಕೊಟ್ಟ ಹಿನ್ನೆಲೆಯಲ್ಲಿ ಇಲ್ಲಿನ ರೈತರು, ಕೃಷಿಕರು ಮಳೆರಾಯನ ಆಗಮನಕ್ಕಾಗಿ ಆಕಾಶದತ್ತ ಮುಖ ಮಾಡಿ ಕುಳಿತಿದ್ದಾರೆ‌. ಮತ್ತೊಂದೆಡೆ ಟೊಮೆಟೋ, ಮೆಣಸಿನಕಾಯಿ ಬೆಲೆ ಶತಕದ ಗಡಿ ದಾಟಿರುವುದು ಜನಸಾಮಾನ್ಯರನ್ನು ಚಿಂತೆಗೀಡು ಮಾಡಿದೆ.

ಹೌದು ಜುಲೈ ತಿಂಗಳ ಮೊದಲ ವಾರ ಕಳೆಯುತ್ತಾ ಬಂದರೂ ಅಥಣಿ ಹಾಗೂ ಕಾಗವಾಡ ಸಾಧಾರಣ ಮಳೆಯಾಗುತ್ತಿರುವುದು ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿ ಉಪಯೋಗವಾಗುತ್ತಿಲ್ಲ. ಮಳೆ ಕೊರತೆ ಹಿನ್ನೆಲೆ ಬಹುತೇಕ ರೈತರು ಬಿತ್ತನೆ ಮಾಡದೇ ಕೈ ಕೈ ಕಟ್ಟಿ ಕುಳಿತುಕೊಳ್ಳುವಂತಾಗಿದೆ. ಇನ್ನು ಇದಕ್ಕೂ ಮೊದಲು ಬೆಳೆದಿದ್ದ ಟೊಮೆಟೋ, ಮೆಣಸಿನಕಾಯಿ ಸೇರಿ‌ ಇತರೆ ತರಕಾರಿ ಬೆಳೆಗಳು ಸಮರ್ಪಕ ಮಳೆಯಾಗದೇ ಇರುವುದರಿಂದ ಇಳುವರಿ ಕಡಿಮೆಯಾಗಿದೆ. ಪರಿಣಾಮ ಬೆಳಗಾವಿಯಲ್ಲಿ ಟೊಮೆಟೋ ಮತ್ತು ಹಸಿ ಮೆಣಸಿನಕಾಯಿ ಬೆಲೆ ನೂರು ರೂಪಾಯಿಗೆ ಮಾರಾಟವಾಗುತ್ತಿವೆ.
ಟೊಮೆಟೋ ಮತ್ತು ಮೆಣಸಿನಕಾಯಿ ದಿನನಿತ್ಯ ಎಲ್ಲರ ಮನೆಯಲ್ಲೂ ಬಳಸುವ ಉತ್ಪನ್ನಗಳು. ಆದರೆ ಅಗತ್ಯಕ್ಕಿಂತ ಕಡಿಮೆ ಉತ್ಪನ್ನ ಮಾರುಕಟ್ಟೆಗೆ ಬಂದಿರುವುದರಿಂದ ಇವುಗಳ ಬೆಲೆ ಗಗನಕ್ಕೇರಿವೆ.

ಇತ್ತೀಚಿನ ಸುದ್ದಿ

ಜಾಹೀರಾತು