3:05 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಒಂದೆಡೆ ಅತಿವೃಷ್ಠಿ, ಇನ್ನೊಂದೆಡೆ ಅನಾವೃಷ್ಠಿ: ಉತ್ತರ ಕರ್ನಾಟಕದಲ್ಲಿ ಕೈಕೊಟ್ಟ ಮಳೆ; ಶತಕ ದಾಟಿದ ಟೊಮೆಟೊ, ಮೆಣಸಿನ ಕಾಯಿ ಬೆಲೆ!

05/07/2023, 21:39

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕರಾವಳಿ ಕರ್ನಾಟಕದಲ್ಲಿ ಅತಿವೃಷ್ಠಿಯಾಗುತ್ತಿದ್ದರೆ, ಉತ್ತರ ಕರ್ನಾಟಕದಲ್ಲಿ ಅನಾವೃಷ್ಠಿ ತಲೆದೋರಿದೆ.
ಮುಂಗಾರು ಮಳೆ ಕೈ ಕೊಟ್ಟ ಹಿನ್ನೆಲೆಯಲ್ಲಿ ಇಲ್ಲಿನ ರೈತರು, ಕೃಷಿಕರು ಮಳೆರಾಯನ ಆಗಮನಕ್ಕಾಗಿ ಆಕಾಶದತ್ತ ಮುಖ ಮಾಡಿ ಕುಳಿತಿದ್ದಾರೆ‌. ಮತ್ತೊಂದೆಡೆ ಟೊಮೆಟೋ, ಮೆಣಸಿನಕಾಯಿ ಬೆಲೆ ಶತಕದ ಗಡಿ ದಾಟಿರುವುದು ಜನಸಾಮಾನ್ಯರನ್ನು ಚಿಂತೆಗೀಡು ಮಾಡಿದೆ.

ಹೌದು ಜುಲೈ ತಿಂಗಳ ಮೊದಲ ವಾರ ಕಳೆಯುತ್ತಾ ಬಂದರೂ ಅಥಣಿ ಹಾಗೂ ಕಾಗವಾಡ ಸಾಧಾರಣ ಮಳೆಯಾಗುತ್ತಿರುವುದು ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿ ಉಪಯೋಗವಾಗುತ್ತಿಲ್ಲ. ಮಳೆ ಕೊರತೆ ಹಿನ್ನೆಲೆ ಬಹುತೇಕ ರೈತರು ಬಿತ್ತನೆ ಮಾಡದೇ ಕೈ ಕೈ ಕಟ್ಟಿ ಕುಳಿತುಕೊಳ್ಳುವಂತಾಗಿದೆ. ಇನ್ನು ಇದಕ್ಕೂ ಮೊದಲು ಬೆಳೆದಿದ್ದ ಟೊಮೆಟೋ, ಮೆಣಸಿನಕಾಯಿ ಸೇರಿ‌ ಇತರೆ ತರಕಾರಿ ಬೆಳೆಗಳು ಸಮರ್ಪಕ ಮಳೆಯಾಗದೇ ಇರುವುದರಿಂದ ಇಳುವರಿ ಕಡಿಮೆಯಾಗಿದೆ. ಪರಿಣಾಮ ಬೆಳಗಾವಿಯಲ್ಲಿ ಟೊಮೆಟೋ ಮತ್ತು ಹಸಿ ಮೆಣಸಿನಕಾಯಿ ಬೆಲೆ ನೂರು ರೂಪಾಯಿಗೆ ಮಾರಾಟವಾಗುತ್ತಿವೆ.
ಟೊಮೆಟೋ ಮತ್ತು ಮೆಣಸಿನಕಾಯಿ ದಿನನಿತ್ಯ ಎಲ್ಲರ ಮನೆಯಲ್ಲೂ ಬಳಸುವ ಉತ್ಪನ್ನಗಳು. ಆದರೆ ಅಗತ್ಯಕ್ಕಿಂತ ಕಡಿಮೆ ಉತ್ಪನ್ನ ಮಾರುಕಟ್ಟೆಗೆ ಬಂದಿರುವುದರಿಂದ ಇವುಗಳ ಬೆಲೆ ಗಗನಕ್ಕೇರಿವೆ.

ಇತ್ತೀಚಿನ ಸುದ್ದಿ

ಜಾಹೀರಾತು