6:46 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ಒಂದೆಡೆ ಪಾದಯಾತ್ರೆಗೆ ಸಿದ್ದತೆ; ಇನ್ನೊಂದೆಡೆ ಭಿನ್ನಮತದ ಹೊಗೆ; ರಾಜ್ಯ ಬಿಜೆಪಿಯಲ್ಲಿ ನಡೆಯುತ್ತದೆಯೇ ಅಂತರ್ಯುದ್ಧ?

02/08/2024, 00:21

ಬೆಂಗಳೂರು(reporterkarnataka.com): ಒಂದು ಕಡೆ ಮುಡಾ ಹಗರಣದ ವಿರುದ್ದ ಪಾದಯಾತ್ರೆಗೆ ಸಿದ್ದವಾಗಿರುವ ರಾಜ್ಯ ಬಿಜೆಪಿಯಲ್ಲಿ ಬಂಡಾಯದ ಹೊಗೆ ಏಳಲಾರಂಭಿಸಿದೆ. ಪಕ್ಷದ ಕೆಲವು ಹಿರಿಯ ನಾಯಕರು ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧ ಶುಕ್ರವಾರ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ದ ಸದಾ ಗುಟುರ್ ಹಾಕುತ್ತಿರುವ ಬಿಜೆಪಿ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಈ ಸಭೆಯ ಮುಂದಾಳತ್ವ ವಹಿಸಿಕೊಂಡಿದ್ದಾರೆ. ಉಳಿದಂತೆ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹಾಗೂ ಮೈಸೂರು ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸೇರಿಕೊಂಡಿದ್ದಾರೆ‌.
ಯತ್ನಾಳ್ ಅವರು ಆರಂಭದಿಂದಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಾಯಕತ್ವಕ್ಕೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ಅವರನ್ನು ಕೂಡ ವಿರೋಧಿಸುತ್ತಲೇ ಬಂದಿದ್ದಾರೆ. ಇದೀಗ ಯತ್ನಾಳ್ ಪಾಳಯಕ್ಕೆ ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ ಹಾಗೂ ಪ್ರತಾಪ್ ಸಿಂಹ ಸೇರಿಕೊಂಡಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ನಾಯಕರು ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಇಲ್ಲಿ ಚರ್ಚೆ ನಡೆಸಲಾಗಿದೆ. ಮತ್ತೊಂದಿಷ್ಟು ಅತೃಪ್ತ ನಾಯಕರನ್ನು ಸೇರಿಸಿಕೊಂಡು ಇನ್ನೊಂದು ಸಭೆ ನಡೆಸಿ ವಿಜಯೇಂದ್ರ ಬಣದ ವಿರುದ್ಧ ಪಕ್ಷದ ವರಿಷ್ಠರಿಗೆ ದೂರು ನೀಡಲು ಪ್ಲಾನ್ ಮಾಡಿಕೊಂಡಿದ್ದಾರೆ. ಇನ್ನು ಮೈಸೂರು ಪಾದಯಾತ್ರೆಯಲ್ಲಿ ಭಾಗವಹಿಸದಿರಲು ನಾಯಕರು ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ನಾಳೆ ಇನ್ನಷ್ಟು ನಾಯಕರುಗಳು ಸೇರಿಕೊಂಡು ಮತ್ತೊಂದು ಸುತ್ತಿನ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು