5:36 PM Saturday1 - August 2026
ಬ್ರೇಕಿಂಗ್ ನ್ಯೂಸ್
ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ…

ಇತ್ತೀಚಿನ ಸುದ್ದಿ

ಒಂದೆಡೆ ಪಾದಯಾತ್ರೆಗೆ ಸಿದ್ದತೆ; ಇನ್ನೊಂದೆಡೆ ಭಿನ್ನಮತದ ಹೊಗೆ; ರಾಜ್ಯ ಬಿಜೆಪಿಯಲ್ಲಿ ನಡೆಯುತ್ತದೆಯೇ ಅಂತರ್ಯುದ್ಧ?

02/08/2024, 00:21

ಬೆಂಗಳೂರು(reporterkarnataka.com): ಒಂದು ಕಡೆ ಮುಡಾ ಹಗರಣದ ವಿರುದ್ದ ಪಾದಯಾತ್ರೆಗೆ ಸಿದ್ದವಾಗಿರುವ ರಾಜ್ಯ ಬಿಜೆಪಿಯಲ್ಲಿ ಬಂಡಾಯದ ಹೊಗೆ ಏಳಲಾರಂಭಿಸಿದೆ. ಪಕ್ಷದ ಕೆಲವು ಹಿರಿಯ ನಾಯಕರು ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧ ಶುಕ್ರವಾರ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ದ ಸದಾ ಗುಟುರ್ ಹಾಕುತ್ತಿರುವ ಬಿಜೆಪಿ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಈ ಸಭೆಯ ಮುಂದಾಳತ್ವ ವಹಿಸಿಕೊಂಡಿದ್ದಾರೆ. ಉಳಿದಂತೆ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹಾಗೂ ಮೈಸೂರು ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸೇರಿಕೊಂಡಿದ್ದಾರೆ‌.
ಯತ್ನಾಳ್ ಅವರು ಆರಂಭದಿಂದಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಾಯಕತ್ವಕ್ಕೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ಅವರನ್ನು ಕೂಡ ವಿರೋಧಿಸುತ್ತಲೇ ಬಂದಿದ್ದಾರೆ. ಇದೀಗ ಯತ್ನಾಳ್ ಪಾಳಯಕ್ಕೆ ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ ಹಾಗೂ ಪ್ರತಾಪ್ ಸಿಂಹ ಸೇರಿಕೊಂಡಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ನಾಯಕರು ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಇಲ್ಲಿ ಚರ್ಚೆ ನಡೆಸಲಾಗಿದೆ. ಮತ್ತೊಂದಿಷ್ಟು ಅತೃಪ್ತ ನಾಯಕರನ್ನು ಸೇರಿಸಿಕೊಂಡು ಇನ್ನೊಂದು ಸಭೆ ನಡೆಸಿ ವಿಜಯೇಂದ್ರ ಬಣದ ವಿರುದ್ಧ ಪಕ್ಷದ ವರಿಷ್ಠರಿಗೆ ದೂರು ನೀಡಲು ಪ್ಲಾನ್ ಮಾಡಿಕೊಂಡಿದ್ದಾರೆ. ಇನ್ನು ಮೈಸೂರು ಪಾದಯಾತ್ರೆಯಲ್ಲಿ ಭಾಗವಹಿಸದಿರಲು ನಾಯಕರು ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ನಾಳೆ ಇನ್ನಷ್ಟು ನಾಯಕರುಗಳು ಸೇರಿಕೊಂಡು ಮತ್ತೊಂದು ಸುತ್ತಿನ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು