8:56 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಒಂದೆಡೆ ಪಾದಯಾತ್ರೆಗೆ ಸಿದ್ದತೆ; ಇನ್ನೊಂದೆಡೆ ಭಿನ್ನಮತದ ಹೊಗೆ; ರಾಜ್ಯ ಬಿಜೆಪಿಯಲ್ಲಿ ನಡೆಯುತ್ತದೆಯೇ ಅಂತರ್ಯುದ್ಧ?

02/08/2024, 00:21

ಬೆಂಗಳೂರು(reporterkarnataka.com): ಒಂದು ಕಡೆ ಮುಡಾ ಹಗರಣದ ವಿರುದ್ದ ಪಾದಯಾತ್ರೆಗೆ ಸಿದ್ದವಾಗಿರುವ ರಾಜ್ಯ ಬಿಜೆಪಿಯಲ್ಲಿ ಬಂಡಾಯದ ಹೊಗೆ ಏಳಲಾರಂಭಿಸಿದೆ. ಪಕ್ಷದ ಕೆಲವು ಹಿರಿಯ ನಾಯಕರು ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧ ಶುಕ್ರವಾರ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ದ ಸದಾ ಗುಟುರ್ ಹಾಕುತ್ತಿರುವ ಬಿಜೆಪಿ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಈ ಸಭೆಯ ಮುಂದಾಳತ್ವ ವಹಿಸಿಕೊಂಡಿದ್ದಾರೆ. ಉಳಿದಂತೆ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹಾಗೂ ಮೈಸೂರು ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸೇರಿಕೊಂಡಿದ್ದಾರೆ‌.
ಯತ್ನಾಳ್ ಅವರು ಆರಂಭದಿಂದಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಾಯಕತ್ವಕ್ಕೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ಅವರನ್ನು ಕೂಡ ವಿರೋಧಿಸುತ್ತಲೇ ಬಂದಿದ್ದಾರೆ. ಇದೀಗ ಯತ್ನಾಳ್ ಪಾಳಯಕ್ಕೆ ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ ಹಾಗೂ ಪ್ರತಾಪ್ ಸಿಂಹ ಸೇರಿಕೊಂಡಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ನಾಯಕರು ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಇಲ್ಲಿ ಚರ್ಚೆ ನಡೆಸಲಾಗಿದೆ. ಮತ್ತೊಂದಿಷ್ಟು ಅತೃಪ್ತ ನಾಯಕರನ್ನು ಸೇರಿಸಿಕೊಂಡು ಇನ್ನೊಂದು ಸಭೆ ನಡೆಸಿ ವಿಜಯೇಂದ್ರ ಬಣದ ವಿರುದ್ಧ ಪಕ್ಷದ ವರಿಷ್ಠರಿಗೆ ದೂರು ನೀಡಲು ಪ್ಲಾನ್ ಮಾಡಿಕೊಂಡಿದ್ದಾರೆ. ಇನ್ನು ಮೈಸೂರು ಪಾದಯಾತ್ರೆಯಲ್ಲಿ ಭಾಗವಹಿಸದಿರಲು ನಾಯಕರು ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ನಾಳೆ ಇನ್ನಷ್ಟು ನಾಯಕರುಗಳು ಸೇರಿಕೊಂಡು ಮತ್ತೊಂದು ಸುತ್ತಿನ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು