3:03 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಒಂದೆಡೆ ಪಾದಯಾತ್ರೆಗೆ ಸಿದ್ದತೆ; ಇನ್ನೊಂದೆಡೆ ಭಿನ್ನಮತದ ಹೊಗೆ; ರಾಜ್ಯ ಬಿಜೆಪಿಯಲ್ಲಿ ನಡೆಯುತ್ತದೆಯೇ ಅಂತರ್ಯುದ್ಧ?

02/08/2024, 00:21

ಬೆಂಗಳೂರು(reporterkarnataka.com): ಒಂದು ಕಡೆ ಮುಡಾ ಹಗರಣದ ವಿರುದ್ದ ಪಾದಯಾತ್ರೆಗೆ ಸಿದ್ದವಾಗಿರುವ ರಾಜ್ಯ ಬಿಜೆಪಿಯಲ್ಲಿ ಬಂಡಾಯದ ಹೊಗೆ ಏಳಲಾರಂಭಿಸಿದೆ. ಪಕ್ಷದ ಕೆಲವು ಹಿರಿಯ ನಾಯಕರು ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧ ಶುಕ್ರವಾರ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ದ ಸದಾ ಗುಟುರ್ ಹಾಕುತ್ತಿರುವ ಬಿಜೆಪಿ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಈ ಸಭೆಯ ಮುಂದಾಳತ್ವ ವಹಿಸಿಕೊಂಡಿದ್ದಾರೆ. ಉಳಿದಂತೆ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹಾಗೂ ಮೈಸೂರು ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸೇರಿಕೊಂಡಿದ್ದಾರೆ‌.
ಯತ್ನಾಳ್ ಅವರು ಆರಂಭದಿಂದಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಾಯಕತ್ವಕ್ಕೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ಅವರನ್ನು ಕೂಡ ವಿರೋಧಿಸುತ್ತಲೇ ಬಂದಿದ್ದಾರೆ. ಇದೀಗ ಯತ್ನಾಳ್ ಪಾಳಯಕ್ಕೆ ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ ಹಾಗೂ ಪ್ರತಾಪ್ ಸಿಂಹ ಸೇರಿಕೊಂಡಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ನಾಯಕರು ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಇಲ್ಲಿ ಚರ್ಚೆ ನಡೆಸಲಾಗಿದೆ. ಮತ್ತೊಂದಿಷ್ಟು ಅತೃಪ್ತ ನಾಯಕರನ್ನು ಸೇರಿಸಿಕೊಂಡು ಇನ್ನೊಂದು ಸಭೆ ನಡೆಸಿ ವಿಜಯೇಂದ್ರ ಬಣದ ವಿರುದ್ಧ ಪಕ್ಷದ ವರಿಷ್ಠರಿಗೆ ದೂರು ನೀಡಲು ಪ್ಲಾನ್ ಮಾಡಿಕೊಂಡಿದ್ದಾರೆ. ಇನ್ನು ಮೈಸೂರು ಪಾದಯಾತ್ರೆಯಲ್ಲಿ ಭಾಗವಹಿಸದಿರಲು ನಾಯಕರು ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ನಾಳೆ ಇನ್ನಷ್ಟು ನಾಯಕರುಗಳು ಸೇರಿಕೊಂಡು ಮತ್ತೊಂದು ಸುತ್ತಿನ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು