2:47 AM Tuesday17 - February 2026
ಬ್ರೇಕಿಂಗ್ ನ್ಯೂಸ್
ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ

ಇತ್ತೀಚಿನ ಸುದ್ದಿ

ಒಂದೆಡೆ ಪಾದಯಾತ್ರೆಗೆ ಸಿದ್ದತೆ; ಇನ್ನೊಂದೆಡೆ ಭಿನ್ನಮತದ ಹೊಗೆ; ರಾಜ್ಯ ಬಿಜೆಪಿಯಲ್ಲಿ ನಡೆಯುತ್ತದೆಯೇ ಅಂತರ್ಯುದ್ಧ?

02/08/2024, 00:21

ಬೆಂಗಳೂರು(reporterkarnataka.com): ಒಂದು ಕಡೆ ಮುಡಾ ಹಗರಣದ ವಿರುದ್ದ ಪಾದಯಾತ್ರೆಗೆ ಸಿದ್ದವಾಗಿರುವ ರಾಜ್ಯ ಬಿಜೆಪಿಯಲ್ಲಿ ಬಂಡಾಯದ ಹೊಗೆ ಏಳಲಾರಂಭಿಸಿದೆ. ಪಕ್ಷದ ಕೆಲವು ಹಿರಿಯ ನಾಯಕರು ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧ ಶುಕ್ರವಾರ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ದ ಸದಾ ಗುಟುರ್ ಹಾಕುತ್ತಿರುವ ಬಿಜೆಪಿ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಈ ಸಭೆಯ ಮುಂದಾಳತ್ವ ವಹಿಸಿಕೊಂಡಿದ್ದಾರೆ. ಉಳಿದಂತೆ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹಾಗೂ ಮೈಸೂರು ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸೇರಿಕೊಂಡಿದ್ದಾರೆ‌.
ಯತ್ನಾಳ್ ಅವರು ಆರಂಭದಿಂದಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಾಯಕತ್ವಕ್ಕೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ಅವರನ್ನು ಕೂಡ ವಿರೋಧಿಸುತ್ತಲೇ ಬಂದಿದ್ದಾರೆ. ಇದೀಗ ಯತ್ನಾಳ್ ಪಾಳಯಕ್ಕೆ ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ ಹಾಗೂ ಪ್ರತಾಪ್ ಸಿಂಹ ಸೇರಿಕೊಂಡಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ನಾಯಕರು ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಇಲ್ಲಿ ಚರ್ಚೆ ನಡೆಸಲಾಗಿದೆ. ಮತ್ತೊಂದಿಷ್ಟು ಅತೃಪ್ತ ನಾಯಕರನ್ನು ಸೇರಿಸಿಕೊಂಡು ಇನ್ನೊಂದು ಸಭೆ ನಡೆಸಿ ವಿಜಯೇಂದ್ರ ಬಣದ ವಿರುದ್ಧ ಪಕ್ಷದ ವರಿಷ್ಠರಿಗೆ ದೂರು ನೀಡಲು ಪ್ಲಾನ್ ಮಾಡಿಕೊಂಡಿದ್ದಾರೆ. ಇನ್ನು ಮೈಸೂರು ಪಾದಯಾತ್ರೆಯಲ್ಲಿ ಭಾಗವಹಿಸದಿರಲು ನಾಯಕರು ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ನಾಳೆ ಇನ್ನಷ್ಟು ನಾಯಕರುಗಳು ಸೇರಿಕೊಂಡು ಮತ್ತೊಂದು ಸುತ್ತಿನ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು