2:52 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಒಂದೆಡೆ ಪಾದಯಾತ್ರೆಗೆ ಸಿದ್ದತೆ; ಇನ್ನೊಂದೆಡೆ ಭಿನ್ನಮತದ ಹೊಗೆ; ರಾಜ್ಯ ಬಿಜೆಪಿಯಲ್ಲಿ ನಡೆಯುತ್ತದೆಯೇ ಅಂತರ್ಯುದ್ಧ?

02/08/2024, 00:21

ಬೆಂಗಳೂರು(reporterkarnataka.com): ಒಂದು ಕಡೆ ಮುಡಾ ಹಗರಣದ ವಿರುದ್ದ ಪಾದಯಾತ್ರೆಗೆ ಸಿದ್ದವಾಗಿರುವ ರಾಜ್ಯ ಬಿಜೆಪಿಯಲ್ಲಿ ಬಂಡಾಯದ ಹೊಗೆ ಏಳಲಾರಂಭಿಸಿದೆ. ಪಕ್ಷದ ಕೆಲವು ಹಿರಿಯ ನಾಯಕರು ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧ ಶುಕ್ರವಾರ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ದ ಸದಾ ಗುಟುರ್ ಹಾಕುತ್ತಿರುವ ಬಿಜೆಪಿ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಈ ಸಭೆಯ ಮುಂದಾಳತ್ವ ವಹಿಸಿಕೊಂಡಿದ್ದಾರೆ. ಉಳಿದಂತೆ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹಾಗೂ ಮೈಸೂರು ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸೇರಿಕೊಂಡಿದ್ದಾರೆ‌.
ಯತ್ನಾಳ್ ಅವರು ಆರಂಭದಿಂದಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಾಯಕತ್ವಕ್ಕೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ಅವರನ್ನು ಕೂಡ ವಿರೋಧಿಸುತ್ತಲೇ ಬಂದಿದ್ದಾರೆ. ಇದೀಗ ಯತ್ನಾಳ್ ಪಾಳಯಕ್ಕೆ ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ ಹಾಗೂ ಪ್ರತಾಪ್ ಸಿಂಹ ಸೇರಿಕೊಂಡಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ನಾಯಕರು ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಇಲ್ಲಿ ಚರ್ಚೆ ನಡೆಸಲಾಗಿದೆ. ಮತ್ತೊಂದಿಷ್ಟು ಅತೃಪ್ತ ನಾಯಕರನ್ನು ಸೇರಿಸಿಕೊಂಡು ಇನ್ನೊಂದು ಸಭೆ ನಡೆಸಿ ವಿಜಯೇಂದ್ರ ಬಣದ ವಿರುದ್ಧ ಪಕ್ಷದ ವರಿಷ್ಠರಿಗೆ ದೂರು ನೀಡಲು ಪ್ಲಾನ್ ಮಾಡಿಕೊಂಡಿದ್ದಾರೆ. ಇನ್ನು ಮೈಸೂರು ಪಾದಯಾತ್ರೆಯಲ್ಲಿ ಭಾಗವಹಿಸದಿರಲು ನಾಯಕರು ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ನಾಳೆ ಇನ್ನಷ್ಟು ನಾಯಕರುಗಳು ಸೇರಿಕೊಂಡು ಮತ್ತೊಂದು ಸುತ್ತಿನ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು