7:04 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಒಂದೆಡೆ ಪಾದಯಾತ್ರೆಗೆ ಸಿದ್ದತೆ; ಇನ್ನೊಂದೆಡೆ ಭಿನ್ನಮತದ ಹೊಗೆ; ರಾಜ್ಯ ಬಿಜೆಪಿಯಲ್ಲಿ ನಡೆಯುತ್ತದೆಯೇ ಅಂತರ್ಯುದ್ಧ?

02/08/2024, 00:21

ಬೆಂಗಳೂರು(reporterkarnataka.com): ಒಂದು ಕಡೆ ಮುಡಾ ಹಗರಣದ ವಿರುದ್ದ ಪಾದಯಾತ್ರೆಗೆ ಸಿದ್ದವಾಗಿರುವ ರಾಜ್ಯ ಬಿಜೆಪಿಯಲ್ಲಿ ಬಂಡಾಯದ ಹೊಗೆ ಏಳಲಾರಂಭಿಸಿದೆ. ಪಕ್ಷದ ಕೆಲವು ಹಿರಿಯ ನಾಯಕರು ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧ ಶುಕ್ರವಾರ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ದ ಸದಾ ಗುಟುರ್ ಹಾಕುತ್ತಿರುವ ಬಿಜೆಪಿ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಈ ಸಭೆಯ ಮುಂದಾಳತ್ವ ವಹಿಸಿಕೊಂಡಿದ್ದಾರೆ. ಉಳಿದಂತೆ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹಾಗೂ ಮೈಸೂರು ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸೇರಿಕೊಂಡಿದ್ದಾರೆ‌.
ಯತ್ನಾಳ್ ಅವರು ಆರಂಭದಿಂದಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಾಯಕತ್ವಕ್ಕೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ಅವರನ್ನು ಕೂಡ ವಿರೋಧಿಸುತ್ತಲೇ ಬಂದಿದ್ದಾರೆ. ಇದೀಗ ಯತ್ನಾಳ್ ಪಾಳಯಕ್ಕೆ ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ ಹಾಗೂ ಪ್ರತಾಪ್ ಸಿಂಹ ಸೇರಿಕೊಂಡಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ನಾಯಕರು ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಇಲ್ಲಿ ಚರ್ಚೆ ನಡೆಸಲಾಗಿದೆ. ಮತ್ತೊಂದಿಷ್ಟು ಅತೃಪ್ತ ನಾಯಕರನ್ನು ಸೇರಿಸಿಕೊಂಡು ಇನ್ನೊಂದು ಸಭೆ ನಡೆಸಿ ವಿಜಯೇಂದ್ರ ಬಣದ ವಿರುದ್ಧ ಪಕ್ಷದ ವರಿಷ್ಠರಿಗೆ ದೂರು ನೀಡಲು ಪ್ಲಾನ್ ಮಾಡಿಕೊಂಡಿದ್ದಾರೆ. ಇನ್ನು ಮೈಸೂರು ಪಾದಯಾತ್ರೆಯಲ್ಲಿ ಭಾಗವಹಿಸದಿರಲು ನಾಯಕರು ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ನಾಳೆ ಇನ್ನಷ್ಟು ನಾಯಕರುಗಳು ಸೇರಿಕೊಂಡು ಮತ್ತೊಂದು ಸುತ್ತಿನ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು