9:37 AM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಒಂದೇ ಮಳೆಗೆ ಮಂಗಳೂರು ‘ಗೇಟ್ ವೇ’ ಪಂಪ್ ವೆಲ್ ಜಲಾವೃತ್ತ!!: ಕಡಲನಗರಿ ಎಲ್ಲೆಡೆ ಭಾರೀ ಟ್ರಾಫಿಕ್ ಜಾಮ್!!

03/07/2023, 21:13

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com
ಮುಂಗಾರು ಆರಂಭವಾಗಿ ಸುಮಾರು 33 ದಿನಗಳ ಬಳಿಕ ಕಡಲನಗರಿ ಮಂಗಳೂರಿನಲ್ಲಿ ಸೋಮವಾರ ಭಾರಿ ಮಳೆ ಸುರಿದಿದ್ದು, ಒಂದೇ ದಿನದ ಮಳಗೆ ನಗರದ ಉತ್ತರ ದಿಕ್ಕಿನ ಹೆಬ್ಬಾಗಿಲು ಎಂದೇ ಪರಿಗಣಿಸಲಾದ ಪಂಪ್ ವೆಲ್ ಪ್ರದೇಶ ಜಲಾವೃತವಾಗಿದೆ. ಇದರಿಂದ ವಾಹನ ಸವಾರರು, ಪಾದಚಾರಿಗಳು ನರಕಯಾತನೆ ಅನುಭವಿಸಿದ್ದಲ್ಲದೆ ಇಡೀ ನಗರವೇ ಟ್ರಾಫಿಕ್ ಜಾಮ್ ಗೆ ಗುರಿಯಾಗಬೇಕಾಯಿತು.



ರಾಜ್ಯದಲ್ಲಿ ಮುಂಗಾರು ಆರಂಭದಿಂದಲೇ ದುರ್ಬಲವಾಗಿತ್ತು. ಜೂನ್ ತಿಂಗಳು ಇಡೀ ಮಳೆ ಇಲ್ಲದೆ ಕಳೆದು ಹೋಯಿತು. ಇದೀಗ ಜುಲೈ ಮೊದಲ ವಾರದಲ್ಲಿ ಇಂದು ಕಡಲನಗರಿ ಮಂಗಳೂರಿನಲ್ಲಿ ಭಾರಿ ಮಳೆಯಾಯಿತು. ಸೆಕೆಗೆ ಒದ್ದಾಡುತ್ತಿದ್ದ ನಗರದ ಜನತೆಗೆ ಮಳೆ ಸ್ವಲ್ಪ ಮಟ್ಟಿಗೆ ನೆಮ್ಮದಿ ಉಂಟು ಮಾಡಿತು. ಆದರೆ ಆ ನೆಮ್ಮದಿ ಹೆಚ್ಚು ಸಮಯ ಉಳಿಯಲಿಲ್ಲ.ಅಲ್ಲಲ್ಲಿ ರಸ್ತೆಯ ಮೇಲೆ ತೋಡಿನಂತೆ ನೀರು ಹರಿದು ಹೋಗುತ್ತಿತ್ತು.ಮಳೆ ನೀರಿನ ತೋಡು ಇದ್ದರೂ ಮಳೆ ನೀರು ಮಾತ್ರ ನಾಚಿಕೊಂಡು ರಸ್ತೆ ಮೇಲೆ ಹರಿಯುತ್ತಿತ್ತು. ಇತ್ತ ಮಂಗಳೂರಿನ ಗೇಟ್ ವೇ ಎಂದೇ ಪರಿಗಣಿಸಲಾದ ಪಂಪ್ ವೆಲ್ ನ ರಸ್ತೆಯಲ್ಲಿ ದೊಡ್ಡ ಕೊಳವೇ ನಿರ್ಮಾಣವಾಗಿತ್ತು. ಮೊದಲೇ ತಗ್ಗು ಪ್ರದೇಶವಾದ ಪಂಪ್ ವೆಲ್ ಸುತ್ತಮುತ್ತಲಿನ ಪ್ರದೇಶದಲ್ಲಿ ನಮ್ಮ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಹಾಗೂ ಪಾಲಿಕೆಯ ಎಂಜಿನಿಯರ್ ಗಳು ಸೇರಿ ಸ್ವಿಮ್ಮಿಂಗ್ ಪೂಲ್ ನಿರ್ಮಾಣಕ್ಕೆ ಕೊಡುಗೆ ನೀಡಿದ್ದಾರೆ. ವಾಹನಗಳ ಟಯರ್ ಮುಳುಗುವಷ್ಟು ನೀರು ಫ್ಲೈ ಓವರ್ ತಳಭಾಗದ ರಸ್ತೆಯಲ್ಲಿ ಶೇಖರಿಸಲ್ಪಟ್ಟಿದೆ. ಇದು ಮೊದಲ ಬಾರಿ ಏನೂ ಅಲ್ಲ, ಕಳೆದ ವರ್ಷ ಮಳೆಗಾಲದಲ್ಲಿ ಇಂತಹದ್ದೇ ಪರಿಸ್ಥಿತಿ ಏರ್ಪಟ್ಟಿತ್ತು. ಆದರೆ ಜಿಲ್ಲಾಡಳಿತವಾಗಲಿ, ಪಾಲಿಕೆಯಾಗಲಿ, ಶಾಸಕರಾಗಲಿ, ಸಂಸದರಾಗಲಿ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ.
ಪಂಪ್ ವೆಲ್ ನಲ್ಲಿ ರಸ್ತೆಗೆ ನೀರು ಬಂದಿರುವುದು ಇಡೀ ನಗರದ ಟ್ರಾಫಿಕ್ ವ್ಯವಸ್ಥೆ ಮೇಲೆ ಕೆಟ್ಟ ಪರಿಣಾಮ ಬೀರಿದೆ. ನಂತೂರು ಫ್ಲೈ ಓವರ್, ಕದ್ರಿ, ಹಂಪನಕಟ್ಟೆ ಪ್ರದೇಶದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಇಷ್ಟೇ ಅಲ್ಲದೆ, ಜಪ್ಪು ಬಪ್ಪಲ್, ಪಾಂಡೇಶ್ವರ, ಕೊಟ್ಟಾರ ಚೌಕಿ ಪ್ರದೇಶದ ರಸ್ತೆಗಳಲ್ಲಿ ನೀರು ನಿಂತು ಸುಗಮ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು