12:14 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಒಂದು ದೇಶ ಒಂದು ಚುನಾವಣೆ ವಿರೋಧಿಸುವವರು ದೇಶದ ಅಭಿವೃದ್ಧಿ ವಿರೋಧಿಗಳು: ಬಸವರಾಜ ಬೊಮ್ಮಾಯಿ

13/12/2024, 14:23

ಹೊಸದಿಲ್ಲಿ(reporterkarnataka.com): ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ತರಲು ಸಂವಿಧಾನ ತಿದ್ದುಪಡಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಂಡಿದೆ. ಈ ತೀರ್ಮಾನವನ್ನು ವಿರೋಧಿಸುವವರು ದೇಶದ ಅಭಿವೃದ್ಧಿ ವಿರೋಧಿಗಳು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹೊಸದಿಲ್ಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ತರಲು ಸಂವಿಧಾನ ತಿದ್ದುಪಡಿಗೆ ಒಪ್ಪಿಗೆ ನೀಡಿದೆ. ಅದನ್ನು ಇದೇ ಸಂಸತ್ ಅಧಿವೇಶನದಲ್ಲಿ ಮಂಡಿಸುವ ವಿಚಾರ ಇದೆ. ಇದು ಬಹಳ ಪ್ರಮುಖವಾದದ್ದು, ಮುಂದಿನ ದಿನಗಳಲ್ಲಿ ದೇಶದ ಅಭಿವೃದ್ಧಿ ಆಗಬೇಕಾದರೆ ಪ್ರತಿನಿತ್ಯ ಚುನಾವಣೆ ಮಾಡಲು ಆಗುವುದಿಲ್ಲ. ಈ ದೇಶದಲ್ಲಿ ಸಹಕಾರಿ ವ್ಯವಸ್ಥೆಯಿಂದ ಹಿಡಿದು, ಪಂಚಾಯತಿ ಚುನಾವಣೆ, ವಿಧಾನಸಭೆ ಲೋಕಸಭೆವರೆಗೆ ಒಂದಿಲ್ಲ ಒಂದು ಚುನಾವಣೆ ನಡೆಯುತ್ತಲೇ ಇರುತ್ತವೆ. ಪ್ರತಿ ಚುನಾವಣೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಹಣ ಖರ್ಚಾಗುತ್ತದೆ ಅಷ್ಟೇ ಅಲ್ಲ ಆ ದಿನಗಳಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.
ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಯಾದರೆ ಆಡಳಿತದಲ್ಲಿ ಸ್ಥಿರತೆ ಬರುತ್ತದೆ. ಅಭಿವೃದ್ಧಿ ಸ್ಥಿರತೆ ಬಹಳ ಮುಖ್ಯ. ಬೇರೆ ಯಾವ ದೇಶಗಳಲ್ಲಿಯೂ ಈ ರೀತಿಯ ವ್ಯವಸ್ಥೆ ಇಲ್ಲ. ಆದ್ದರಿಂದ ಇದಕ್ಕೆ ಇತಿಶ್ರೀ ಹಾಡಬೇಕೆಂದು ದಶಕಗಳಿಂದ ಚರ್ಚೆ ನಡೆಯುತ್ತಿತ್ರು. ನಮ್ಮ ಪ್ರಧಾನಮಂತ್ರಿಗಳು ಒಂದು ದಿಟ್ಟ ನಿರ್ಧಾರ ಮಾಡಿದ್ದು, ಇದು ದೂರಗಾಮಿಯಾಗಿ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಇದು ಈ ದೇಶಕ್ಕೆ ಒಳ್ಳೆಯ ದಾಗುವಂತಹ ನಿರ್ಧಾರ. ಇದಕ್ಕೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದ ಸಮಿತಿಯ ಶಿಫಾರಸ್ಸಿನ ಅನ್ವಯ ಈ ಬದಲಾವಣೆ ತರುತ್ತಿದ್ದಾರೆ. ಇದಕ್ಕೆ ಎಲ್ಲರೂ ಚರ್ಚೆ ಮಾಡಬೇಕು, ಸ್ವಾಗತ ಮಾಡಬೇಕು. ದೇಶದ ಎಲ್ಲ ಜನರೂ ಸ್ವಾಗತಿಸಬೇಕು. ಇದನ್ನು ವಿರೋಧಿಸುವವರು ದೇಶದ ಅಭಿವೃದ್ಧಿಯ ವಿರೋಧಿಗಳಾಗಿದ್ದಾರೆ. ರಾಜಕೀಯ ಕಾರಣಗಳಿಗೆ ಇದನ್ನು ಕೆಲವರು ವಿರೋಧಿಸುತ್ತಿದ್ದಾರೆ. ಆದರೆ, ಇಡೀ ದೇಶ ಈ ಬದಲಾವಣೆಯ ಪರವಾಗಿ ನಿಲ್ಲಬೇಕು. ಈ ದಿಟ್ಟ ತೀರ್ಮಾನ ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸುತ್ತೇನೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು