6:58 PM Monday27 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

1 ನಿಮಿಷದಲ್ಲಿ 200 ಪಂಚ್ ಮೂಲಕ ನೊಬೆಲ್ ವರ್ಲ್ಡ್ ರೆಕಾರ್ಡ್: ಬಾಲಕಿ ಫಾತಿಮಾ ನಜಫ್ ರಿಗೆ ಸನ್ಮಾನ

20/01/2025, 20:25

ಸುರತ್ಕಲ್(reporterkarnataka.com): ಮೂಡಬಿದ್ರೆಯಲ್ಲಿ ನಡೆದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಒಂದು ನಿಮಿಷದಲ್ಲಿ 200 ಪಂಚ್ ಮೂಲಕ ನೊಬೆಲ್ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ಹೊಸದಾಗಿ ದಾಖಲೆ ಬರೆದಿರುವ ಅಡ್ಡೂರಿನ ಬಾಲಕಿ ಫಾತಿಮಾ ನಜಫ್ ಅವರನ್ನು ಸುರತ್ಕಲ್ ಅಟ್ಲಾಸ್ ಜ್ಯುವೆಲ್ಲರ್ಸ್ ವತಿಯಿಂದ ವಜ್ರದ ಉಂಗುರ ಕೊಟ್ಟು ಸನ್ಮಾನಿಸಲಾಯಿತು.


ಈ ವೇಳೆ ಸುರತ್ಕಲ್ ಠಾಣಾಧಿಕಾರಿ ರಘು ನಾಯಕ ಅವರು ಬಾಲಕಿಯನ್ನು ಶಾಲು ಹೊದಿಸಿ ಗೌರವಿಸಿದರು. ಬಳಿಕ ಮಾತಾಡಿದ ಅವರು, ಶಿಕ್ಷಣದ ಜೊತೆಗೆ ಮಕ್ಕಳು ಬಾಲ್ಯದಲ್ಲೇ ಇಂತಹ ಸಾಧನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಈ ಮೂಲಕ ಹೆತ್ತವರು, ಸಮಾಜದ ಹೆಸರನ್ನು ಎಲ್ಲರೂ ಗುರುತಿಸುವಂತೆ ಮಾಡಬೇಕು. ಬಾಲಕಿಯ ಸಾಧನೆಗೆ ಎಲ್ಲರೂ ಬೆನ್ನುತಟ್ಟಿ ಪ್ರೋತ್ಸಾಹಿಸೋಣ ಎಂದರು.
ಬಳಿಕ ಮಾತಾಡಿದ ಫಾತಿಮಾ ನಜಫ್, ನಾನು ಅಡ್ಡೂರಿನ ಸಹಾರ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ 6ನೇ ತರಗತಿ ಕಲಿಯುತ್ತಿದ್ದೇನೆ. ನನ್ನ ಸಾಧನೆಗೆ ಹೆತ್ತವರು, ಶಾಲಾ ಶಿಕ್ಷಕರ ಸಹಕಾರ ತುಂಬಾ ಇದೆ. ಅವರಿಗೆ ನಾನು ಧನ್ಯವಾದವನ್ನು ಅರ್ಪಿಸುತ್ತೇನೆ ಎಂದರು.
ಅಟ್ಲಾಸ್ ಜ್ಯುವೆಲ್ಲರಿಯ ವ್ಯವಸ್ಥಾಪಕರಾದ ಅಬ್ದುಲ್ ಸಲಾಂ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು