4:17 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಆನ್‌ಲೈನ್ ವಂಚನೆ: ಹಣ ಕಳೆದುಕೊಂಡಿದ್ದ 4 ಮಂದಿಗೆ 6,43,297 ರೂ. ಮರುಪಾವತಿ ಮಾಡಿಸಿದ ಪೊಲೀಸರು!

25/02/2022, 10:21

ಮೈಸೂರು(reporterkarnataka.com): ಆನ್ ಲೈನ್ ವಂಚನೆ ಮೂಲಕ ಹಣ ಕಳೆದುಕೊಂಡಿದ್ದ ಮತ್ತೆ ನಾಲ್ವರಿಗೆ ಪೊಲೀಸರು ಒಟ್ಟು 6,43,297 ರೂಗಳನ್ನು ವಾಪಾಸ್ ಕೊಡಿಸಿದ್ದಾರೆ.

ಮೈಸೂರಿನ ವಿಜಯನಗರದ ಚಂದ್ ಮತ್ತು ಸುನೀತಾ ಲಾಲ್ ಚಂದ್ ಎಂಬುವರಿoದ ಕೆವೈಸಿ ಆಪ್ಡೇಟ್ ಎಂದು ಒಟಿಪಿ ಪಡೆದು ಒಟ್ಟು 4,49,100 ರೂ, ವಿದ್ಯಾರಣ್ಯಪುರಂನ ಚಂದ್ರು ಎನ್ ಎಂಬುವರಿoದ ಕೆವೈಸಿ ಅಪ್ಡೇಟ್ ಮಾಡಲು ಬ್ಯಾಂಕ್ ಖಾತೆಯ ಮಾಹಿತಿ ಪಡೆದು ಒಟ್ಟು 1,69,199 ರೂ, ದಟ್ಟಗಳ್ಳಿಯ ನಿವಾಸಿ ರವಿ ಹೆಬ್ಬಾರ್‌ಗೆ ಬ್ಯಾಂಕ್‌ನವರು ಎಂದು ಹೇಳಿ ಒಟ್ಟು 22,999 ರೂ, ಹಿನಕಲ್‌ನ ಪ್ರೇಮ್ ದಾಸ್ ರಿಗೆ ಡೆಬಿಟ್ ಕಾರ್ಡ್ ಮೂಲಕ ರಿಚಾರ್ಜ್ ಎಂದು ಒಟ್ಟು 1,999 ರೂ ಹಣವನ್ನು ವಂಚಿಸಲಾಗಿತ್ತು. ಈ ಬಗ್ಗೆ ಸಿಇಎನ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ನಾಲ್ಕು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, 4 ಪ್ರತ್ಯೇಕ ಪ್ರಕರಣಗಳಲ್ಲಿ ದೇಶದ ವಿವಿಧ ಭಾಗಗಳಲ್ಲಿನ ಆರೋಪಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗಿದ್ದ ಒಟ್ಟು 6,43,297 ರೂ ಹಣವನ್ನು ಸೆನ್ ಕ್ರೈo ಪೊಲೀಸ್ ಠಾಣೆಯ ಕ್ವಿಕ್ ರೆಸ್ಪಾಂನ್ಸ್ ಟೀಮ್‌ನ ಸಿಬ್ಬಂದಿಗಳು ತ್ವರಿತವಾಗಿ ಕ್ರಮ ಕೈಗೊಂಡು, ಸಂಬoಧ ಪಟ್ಟ ಬ್ಯಾಂಕ್ ಮ್ಯಾನೇಜರ್, ನೋಡಲ್ ಆಫೀಸರ್, ಮತ್ತು ಕೋರ್ ಬ್ಯಾಂಕಿoಗ್‌ನ ಲೀಗಲ್ ಟೀಮ್ ರವರನ್ನು ಸಂಪರ್ಕಿಸಿ ಆರೋಪಿಗಳ ಬ್ಯಾಂಕ್ ಖಾತೆಯನ್ನು ಫ್ರೀಜ್ ಮಾಡಿಸಿ, ಆರೋಪಿಗಳ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು ಹಣ ಕಳೆದುಕೊಂಡವರಿಗೆ ಹಿಂದಿರುಗಿಸಿದ್ದಾರೆ

ಈ ಕಾರ್ಯವನ್ನು ಮೈಸೂರು ನಗರದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಪ್ರದೀಪ್ ಗುಂಟಿ, ಮಾರ್ಗದರ್ಶನದಲ್ಲಿ ಮೈಸೂರು ನಗರ ಸೆನ್ ಕ್ರೈo ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಜಯಕುಮಾರ್.ಎನ್, ಪಿ.ಎಸ್.ಐ.ಗಳಾದ ಅನಿಲ್‌ಕುಮಾರ್, ಸಿದ್ದೇಶ್ ಎಂ.ಎಲ್. ಮತ್ತು ಸಿಬ್ಬಂದಿಗಳು ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು