1:47 AM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಬರೀ 40 ಶಾಸಕರಿದ್ರೆ ಮುಖ್ಯಮಂತ್ರಿಯೇ ಆಗ್ತಾರೆ!: ಕೇವಲ ಇಬ್ಬರು ಸಂಸದರಿದ್ದರೆ ಕೇಂದ್ರದಲ್ಲಿ ಸಚಿವರಾಗಿಯೇ ಬಿಡ್ತಾರೆ!!

09/06/2024, 23:01

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಕೇಂದ್ರದಲ್ಲಿ ಹೊಸ ಸರಕಾರ ಅಸ್ತಿತ್ವಕ್ಕೆ ಬಂದಿದೆ. ನರೇಂದ್ರ ಮೋದಿ ಅವರು ಸತತ 3ನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಕರ್ನಾಟಕದಿಂದ ಅವರ ಮಿತ್ರಪಕ್ಷವಾದ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸಚಿವರಾಗಿದ್ದಾರೆ.
ಕೇಂದ್ರದಲ್ಲಿ ಬಿಜೆಪಿಗೆ ಬಹುಮತ ಬಂದಿಲ್ಲ. ಮಿತ್ರಪಕ್ಷವಾದ ಜೆಡಿಯು ಮತ್ತು ತೆಲುಗುದೇಶಂ ಸಹಾಯದಿಂದ ಎನ್ ಡಿಎ ಮೈತ್ರಿಕೂಟ ಸರಕಾರದ ಮುಖ್ಯಸ್ಥರಾಗಿ ಮೋದಿ ಕಾರ್ಯನಿರ್ವಹಿಸಲಿದ್ದಾರೆ.
ಮಿತ್ರಪಕ್ಷಗಳ ಅಣತಿಯಂತೆ ಕಾರ್ಯನಿರ್ವಹಿಸುವ ಅನಿವಾರ್ಯತೆ ಮೋದಿ ಅವರಿಗಿದೆ.
ರಾಜ್ಯದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವನ್ನು ಮಣಿಸಲು ಬಿಜೆಪಿ ಪಕ್ಷವು ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜತೆ ಮೈತ್ರಿಕೊಂಡಿತ್ತು. ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಾಗ ತನ್ನ ಅಸ್ತಿತ್ವಕ್ಕೆ ಸಂಚಕಾರ ಬರುತ್ತದೆ ಎಂಬುದನ್ನು ಮನಗಂಡ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಕೂಡ ಬಿಜೆಪಿ ಜತೆ ಹೋಗುವುದು ಅನಿವಾರ್ಯವಾಗಿತ್ತು. ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆಯಾದಾಗ ಜೆಡಿಎಸ್ ಪಾಲಿಗೆ 3 ಕ್ಷೇತ್ರಗಳು ದಕ್ಕಿದವು. ಆದರೆ ಮೂರರಲ್ಲಿ ಒಂದಾದ ಹಾಸನ ಕ್ಷೇತ್ರವನ್ನು ಅಲ್ಲಿ ಸಂಸದರಾಗಿದ್ದ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಪ್ರಕರಣದಿಂದ ಕಳೆದುಕೊಳ್ಳಬೇಕಾಯಿತು. ಮಂಡ್ಯದಲ್ಲಿ ಸ್ವತಃ ಕುಮಾರಸ್ವಾಮಿ ಅವರೇ ಗೆದ್ದರು. ಕೋಲಾರದಲ್ಲಿಯೂ ಜೆಡಿಎಸ್ ಗೆಲುವು ಕಂಡಿತು. ಅಸ್ತಿತ್ವವನ್ನೇ ಕಳೆದುಕೊಳ್ಳುವ ಭೀತಿಯಲ್ಲಿದ್ದ ಜೆಡಿಎಸ್ ಗೆ ಸಂಜೀವಿನಿ ದೊರಕಿದಂತಾಯಿತು. ಮೈತ್ರಿಕೂಟ ಸರಕಾರದಲ್ಲಿ ಮೈತ್ರಿಧರ್ಮ ಪಾಲಿಸುವ ಅನಿವಾರ್ಯತೆ ಇರುವುದರಿಂದ ಎರಡು ಸಂಸದರನ್ನು ಹೊಂದಿರುವ ಜೆಡಿಎಸ್ ನ ನಾಯಕ ಕುಮಾರಸ್ವಾಮಿ ಅವರು ಕೇಂದ್ರದಲ್ಲಿ ಸಚಿವರಾಗಿಯೇ ಬಿಟ್ಟರು. ಅದೂ ಮೊದಲ ಬಾರಿಗೆ ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಕೃಷಿ ಖಾತೆ ಅವರ ಬೇಡಿಕೆ.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪುತ್ರರಾದ ಕುಮಾರಸ್ವಾಮಿ ರಾಜಕೀಯವಾಗಿ ತುಂಬಾ ಲಕ್ಕಿ ಪರ್ಸನ್. ಹೀಗೆಂತ ರಾಜ್ಯದ ಜನತೆಯೇ ಆಡಿಕೊಳ್ಳುತ್ತಾರೆ. ಕೇವಲ 40 ಶಾಸಕರನ್ನು ಕಟ್ಟಿಕೊಂಡು ಅವರು ರಾಜ್ಯದಲ್ಲಿ ಎರಡೆರಡು ಬಾರಿ ಮುಖ್ಯಮಂತ್ರಿಯಾಗಿದ್ದರು. ಈಗ ಎರಡು ಸಂಸದರನ್ನು ಹೊಂದಿದ ಕುಮಾರಸ್ವಾಮಿ ಕೇಂದ್ರದಲ್ಲಿ ಸಚಿವರಾಗಿದ್ದಾರೆ. ನಮ್ಮದು ಬಹುದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ.

ಇತ್ತೀಚಿನ ಸುದ್ದಿ

ಜಾಹೀರಾತು