8:48 PM Wednesday3 - June 2026
ಬ್ರೇಕಿಂಗ್ ನ್ಯೂಸ್
ಯು.ಟಿ. ಖಾದರ್: ಸ್ಪೀಕರ್ ಸ್ಥಾನದಿಂದ ಮತ್ತೆ ಸಕ್ರೀಯ ರಾಜಕೀಯಕ್ಕೆ; ಡಿಕೆಶಿ ಸಂಪುಟದಲ್ಲಿ ಸಚಿವ… ಡಿ.ಕೆ. ಶಿವಕುಮಾರ್ ರಾಜ್ಯಭಾರ ಶುರು: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ ರಾಜೀನಾಮೆ: ನೂತನ ಪಕ್ಷ ಸ್ಥಾಪನೆ? ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ…

ಇತ್ತೀಚಿನ ಸುದ್ದಿ

ಬರೀ 40 ಶಾಸಕರಿದ್ರೆ ಮುಖ್ಯಮಂತ್ರಿಯೇ ಆಗ್ತಾರೆ!: ಕೇವಲ ಇಬ್ಬರು ಸಂಸದರಿದ್ದರೆ ಕೇಂದ್ರದಲ್ಲಿ ಸಚಿವರಾಗಿಯೇ ಬಿಡ್ತಾರೆ!!

09/06/2024, 23:01

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಕೇಂದ್ರದಲ್ಲಿ ಹೊಸ ಸರಕಾರ ಅಸ್ತಿತ್ವಕ್ಕೆ ಬಂದಿದೆ. ನರೇಂದ್ರ ಮೋದಿ ಅವರು ಸತತ 3ನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಕರ್ನಾಟಕದಿಂದ ಅವರ ಮಿತ್ರಪಕ್ಷವಾದ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸಚಿವರಾಗಿದ್ದಾರೆ.
ಕೇಂದ್ರದಲ್ಲಿ ಬಿಜೆಪಿಗೆ ಬಹುಮತ ಬಂದಿಲ್ಲ. ಮಿತ್ರಪಕ್ಷವಾದ ಜೆಡಿಯು ಮತ್ತು ತೆಲುಗುದೇಶಂ ಸಹಾಯದಿಂದ ಎನ್ ಡಿಎ ಮೈತ್ರಿಕೂಟ ಸರಕಾರದ ಮುಖ್ಯಸ್ಥರಾಗಿ ಮೋದಿ ಕಾರ್ಯನಿರ್ವಹಿಸಲಿದ್ದಾರೆ.
ಮಿತ್ರಪಕ್ಷಗಳ ಅಣತಿಯಂತೆ ಕಾರ್ಯನಿರ್ವಹಿಸುವ ಅನಿವಾರ್ಯತೆ ಮೋದಿ ಅವರಿಗಿದೆ.
ರಾಜ್ಯದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವನ್ನು ಮಣಿಸಲು ಬಿಜೆಪಿ ಪಕ್ಷವು ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜತೆ ಮೈತ್ರಿಕೊಂಡಿತ್ತು. ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಾಗ ತನ್ನ ಅಸ್ತಿತ್ವಕ್ಕೆ ಸಂಚಕಾರ ಬರುತ್ತದೆ ಎಂಬುದನ್ನು ಮನಗಂಡ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಕೂಡ ಬಿಜೆಪಿ ಜತೆ ಹೋಗುವುದು ಅನಿವಾರ್ಯವಾಗಿತ್ತು. ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆಯಾದಾಗ ಜೆಡಿಎಸ್ ಪಾಲಿಗೆ 3 ಕ್ಷೇತ್ರಗಳು ದಕ್ಕಿದವು. ಆದರೆ ಮೂರರಲ್ಲಿ ಒಂದಾದ ಹಾಸನ ಕ್ಷೇತ್ರವನ್ನು ಅಲ್ಲಿ ಸಂಸದರಾಗಿದ್ದ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಪ್ರಕರಣದಿಂದ ಕಳೆದುಕೊಳ್ಳಬೇಕಾಯಿತು. ಮಂಡ್ಯದಲ್ಲಿ ಸ್ವತಃ ಕುಮಾರಸ್ವಾಮಿ ಅವರೇ ಗೆದ್ದರು. ಕೋಲಾರದಲ್ಲಿಯೂ ಜೆಡಿಎಸ್ ಗೆಲುವು ಕಂಡಿತು. ಅಸ್ತಿತ್ವವನ್ನೇ ಕಳೆದುಕೊಳ್ಳುವ ಭೀತಿಯಲ್ಲಿದ್ದ ಜೆಡಿಎಸ್ ಗೆ ಸಂಜೀವಿನಿ ದೊರಕಿದಂತಾಯಿತು. ಮೈತ್ರಿಕೂಟ ಸರಕಾರದಲ್ಲಿ ಮೈತ್ರಿಧರ್ಮ ಪಾಲಿಸುವ ಅನಿವಾರ್ಯತೆ ಇರುವುದರಿಂದ ಎರಡು ಸಂಸದರನ್ನು ಹೊಂದಿರುವ ಜೆಡಿಎಸ್ ನ ನಾಯಕ ಕುಮಾರಸ್ವಾಮಿ ಅವರು ಕೇಂದ್ರದಲ್ಲಿ ಸಚಿವರಾಗಿಯೇ ಬಿಟ್ಟರು. ಅದೂ ಮೊದಲ ಬಾರಿಗೆ ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಕೃಷಿ ಖಾತೆ ಅವರ ಬೇಡಿಕೆ.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪುತ್ರರಾದ ಕುಮಾರಸ್ವಾಮಿ ರಾಜಕೀಯವಾಗಿ ತುಂಬಾ ಲಕ್ಕಿ ಪರ್ಸನ್. ಹೀಗೆಂತ ರಾಜ್ಯದ ಜನತೆಯೇ ಆಡಿಕೊಳ್ಳುತ್ತಾರೆ. ಕೇವಲ 40 ಶಾಸಕರನ್ನು ಕಟ್ಟಿಕೊಂಡು ಅವರು ರಾಜ್ಯದಲ್ಲಿ ಎರಡೆರಡು ಬಾರಿ ಮುಖ್ಯಮಂತ್ರಿಯಾಗಿದ್ದರು. ಈಗ ಎರಡು ಸಂಸದರನ್ನು ಹೊಂದಿದ ಕುಮಾರಸ್ವಾಮಿ ಕೇಂದ್ರದಲ್ಲಿ ಸಚಿವರಾಗಿದ್ದಾರೆ. ನಮ್ಮದು ಬಹುದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ.

ಇತ್ತೀಚಿನ ಸುದ್ದಿ

ಜಾಹೀರಾತು