11:54 AM Thursday26 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ಊಟದಲ್ಲಿ ರಾಜಕೀಯ ಬೆರೆಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

06/01/2025, 18:37

ನವದೆಹಲಿ(reporterkarnataka.com): ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.
ನಿಮ್ಮ ವಿದೇಶಿ ಪ್ರವಾಸದ ವೇಳೆಯಲ್ಲೇ ರಾಜ್ಯದಲ್ಲಿ ಡಿನ್ನರ್ ರಾಜಕೀಯ ನಡೆದಿದೆಯೇ ಎಂದು ಕೇಳಿದಾಗ, “ಮಾಧ್ಯಮದವರು ಔತಣಕೂಟಕ್ಕೆ ಏಕೆ ರಾಜಕಾರಣ ಬೆರೆಸುತ್ತೀರಿ? ಇದಕ್ಕೆ ಇಲ್ಲಸಲ್ಲದ ಅರ್ಥವನ್ನು ಏಕೆ ಕಲ್ಪಿಸುತ್ತೀರಿ? ನಾನು ಕಳೆದ ನಾಲ್ಕೈದು ವರ್ಷಗಳಿಂದ ಕುಟುಂಬದವರ ಜೊತೆ ಎಲ್ಲಿಯೂ ಹೋಗಿರಲಿಲ್ಲ. ಆದ ಕಾರಣಕ್ಕೆ ವಿದೇಶಿ ಪ್ರವಾಸಕ್ಕೆ ತೆರಳಿದ್ದೆ” ಎಂದರು.
ಡಿಸಿಎಂ ಅವರ ಅನುಪಸ್ಥಿತಿಯಲ್ಲಿ ಔತಣಕೂಟ ಸಭೆ ನಡೆದಿದೆ ಎಂದು ಕೇಳಿದಾಗ, “ಅನೇಕ ಮಂತ್ರಿಗಳು ಸಹ ಕುಟುಂಬದವರ ಜೊತೆ ವಿದೇಶಿ ಪ್ರವಾಸ ಹೋಗಿದ್ದರು. ಬೆಂಗಳೂರಿನಲ್ಲಿ ಇದ್ದವರು ಒಂದು ಸಂಜೆ ಒಟ್ಟಿಗೆ ಸೇರಿದ್ದಾರೆ. ಇದರಲ್ಲಿ ತಪ್ಪೇನಿದೆ?” ಎಂದು ಅವರು ಪ್ರಶ್ನಿಸಿದರು.
ಕ್ಯಾಬಿನೆಟ್ ಪುನರ್ ರಚನೆಯಾಗಬೇಕು ಎಂದು ಎಚ್.ಕೆ.ಪಾಟೀಲ್ ಅವರು ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ಮಾತುಗಳು ಕೇಳಿಬರುತ್ತಿವೆ ಎಂದಾಗ, “ಯಾವ ಚರ್ಚೆಯೂ ನಡೆದಿಲ್ಲ. ಮಾಧ್ಯಮದವರಿಗೆ ಯಾರೋ ತಪ್ಪು ಮಾಹಿತಿ ನೀಡಿ, ನಿಮಗೆ ಬಿಡುವು ಸಿಗದಂತೆ ನೋಡಿಕೊಳ್ಳುತ್ತಿದ್ದಾರೆ. ಇದು ಮಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರು ಇದರ ಬಗ್ಗೆ ಮಾತನಾಡುತ್ತಾರೆ” ಎಂದು ಅವರು ನುಡಿದರು.
ರಾಜ್ಯದಲ್ಲಿ ಎಂಟು ತಿಂಗಳ ಮಗುವಿನಲ್ಲಿ ಎಚ್ ಎಂವಿ ವೈರಸ್ ಪತ್ತೆಯಾಗಿರುವ ಬಗ್ಗೆ ಕೇಳಿದಾಗ, “ಈಗಾಗಲೇ ನಮ್ಮ ಆರೋಗ್ಯ ಸಚಿವರು ಕೆಲಸ ಮಾಡುತ್ತಿದ್ದಾರೆ. ಯಾರೂ ಸಹ ಆತಂಕಪಡುವ ಅವಶ್ಯಕತೆಯಿಲ್ಲ. ಸರ್ಕಾರ ಎಚ್ಚರಿಕೆಯಿಂದ ಕೆಲಸ ಮಾಡುತ್ತಿದೆ” ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು