11:05 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಆಪರೇಷನ್ ಅಜಯ್: ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಸ್ರೇಲ್ ನಿಂದ ದೆಹಲಿಗೆ ಆಗಮನ

13/10/2023, 22:38

ಟೆಲ್ ಅವಿವ್‌(reporterkarnataka.com):ಪ್ಯಾಲೆಸ್ತೀನ್ ಮತ್ತು ಇಸ್ರೇಲ್ ನಡುವೆ ಭೀಕರ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಸ್ರೇಲ್ ನಟೆಲ್ ಅವಿವ್‌ನಲ್ಲಿರುವ ಭಾರತೀಯರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆದು ತರುವ ಆಪರೇಷನ್ ಅಜಯ್ ಕಾರ್ಯಾಚರಣೆಯ ಅಂಗವಾಗಿ ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಸ್ರೇಲ್ ನಿಂದ ಇಂದು ಸುರಕ್ಷಿತವಾಗಿ ಭಾರತಕ್ಕೆ ಆಗಮಿಸಿತು.
212 ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಸ್ರೇಲ್​ನಿಂದ ದೆಹಲಿಗೆ ಬಂದಿಳಿದಿದೆ. ಈ ನಡುವೆ ಇಸ್ರೇಲ್​ ಹಾಗೂ ಹಮಾಸ್​ ಬಂಡುಕೋರರ ನಡುವೆ ಯುದ್ಧ ಮುಂದುವರೆದಿದೆ.

ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಇಸ್ರೇಲ್‌ನಿಂದ ಆಗಮಿಸಿದ ಭಾರತೀಯರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಬರ ಮಾಡಿಕೊಂಡರು. ಆಪರೇಷನ್ ಅಜಯ್ ಅಡಿಯಲ್ಲಿ, ಇಸ್ರೇಲ್‌ನಿಂದ ಹಿಂತಿರುಗಲು ಬಯಸುವ ಭಾರತೀಯ ನಾಗರಿಕರಿಗೆ ಅನುಕೂಲವಾಗುವಂತೆ ವಿಮಾನವು ಟೆಲ್ ಅವಿವ್‌ನ ಬೆನ್ ಗುರಿಯನ್ ವಿಮಾನ ನಿಲ್ದಾಣದಿಂದ ಹೊರಟಿತು. ವಿಮಾನವು 211 ವಯಸ್ಕರು ಮತ್ತು ಒಂದು ಶಿಶುವನ್ನು ಭಾರತಕ್ಕೆ ಕರೆದು ತಂದಿದೆ.
ಇಸ್ರೇಲ್​ ಮೇಲೆ ಕಳೆದ ಶನಿವಾರ ಹಮಾಸ್​ ಉಗ್ರರು ನಡೆಸಿದ ದಾಳಿಯಲ್ಲಿ 3 ಸಾವಿರಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ನಂತರದ ಇಸ್ರೇಲಿ ಪ್ರತೀಕಾರಕ್ಕೆ ಪ್ರತಿಕ್ರಿಯೆಯಾಗಿ ಈ ಕಾರ್ಯಾಚರಣೆಯು 2,500 ಕ್ಕೂ ಹೆಚ್ಚು ಜನರನ್ನು ಬಲಿತೆಗೆದುಕೊಂಡಿತು. ಹಮಾಸ್ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಇಸ್ರೇಲ್ ಗಾಜಾದಲ್ಲಿ ಭಾರಿ ಪ್ರತಿದಾಳಿ ನಡೆಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು