9:23 AM Sunday7 - December 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ: ಆಕಸ್ಮಿಕ ಗುಂಡಿನ ಚೂರು ತಗುಲಿ ಇಬ್ಬರು ಯುವಕರಿಗೆ ಗಾಯ ರಾಷ್ಟ್ರವ್ಯಾಪಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಸಚಿವ ಡಾ. ಶರಣಪ್ರಕಾಶ್‌ ಒತ್ತಾಯ ಸೌರಶಕ್ತಿಗೆ 3ನೇ ಅತಿದೊಡ್ಡ ಕೊಡುಗೆದಾರ ಭಾರತ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Shivamogga | ಬಸ್ ಚಾಲಕನ ಅತೀ ವೇಗ, ಅಜಾಗರೂಕತೆ: ಬೈಕ್ ಸವಾರ ಗಂಭೀರ ತೋಟಕ್ಕೆ ತೆರಳಿದ್ದ ಸಂದರ್ಭ ಏಕಾಏಕಿ ಹೆಜ್ಜೇನು ದಾಳಿ: ಮಹಿಳೆ ಸಹಿತ 3 ಮಂದಿಗೆ… ವಿರಾಜಪೇಟೆ | ಕ್ಷುಲ್ಲಕ ಕಾರಣ: ಕುಡಿದ ಮತ್ತಿನಲ್ಲಿ ನಡುರಸ್ತೆಯಲ್ಲಿ ಯುವಕರ ಮಾರಮಾರಿ..!! “ಸ್ವಸ್ಥ ಮೈಸೂರು” ಅಭಿಯಾನ ಒಪ್ಪಂದಕ್ಕೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಹಿ New Delhi | ಬೆಳ್ಳಿ ವಸ್ತು, ಆಭರಣಗಳಿಗಿನ್ನು BIS ಹಾಲ್‌ಮಾರ್ಕ್‌, HUID ಕಡ್ಡಾಯ ರಾಜ್ಯ ಸರಕಾರ ಅನ್ನದಾತ ರೈತನ ಬಗ್ಗೆ ಕಾಳಜಿ ವಹಿಸುತ್ತಿಲ್ಲ: ಮಾಜಿ ಗೃಹ ಸಚಿವ… ವಿಶೇಷ ಚೇತನರು ಇನ್ನು ವಿಮಾನವೇರುವುದು ಸುಲಭ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಮೊಬಿಲಿಟಿ…

ಇತ್ತೀಚಿನ ಸುದ್ದಿ

ಆಪರೇಷನ್ ಸಿಂಧೂರ್; ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಕಾಂಗ್ರೆಸ್ ಅಂತರಾತ್ಮದ ದನಿ: ಕೇಂದ್ರ ಸಚಿವ ಕುಮಾರಸ್ವಾಮಿ

17/05/2025, 00:41

ನವದೆಹಲಿ(reporterkarnataka.com): ಆಪರೇಷನ್ ಸಿಂಧೂರ್ ಕೋಲಾರದ ಶಾಸಕ ಕೊತ್ತೂರು ಮಂಜುನಾಥ್ ನೀಡಿರುವ ಹೇಳಿಕೆ ಕಾಂಗ್ರೆಸ್ ಪಕ್ಷದ ಅಂತರಾತ್ಮದ ದನಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಂತರ ಸೀನಿಯರ್ ಖರ್ಗೆ, ಜ್ಯೂನಿಯರ್ ಖರ್ಗೆ, ರಾಹುಲ್ ಗಾಂಧಿ ಸೇರಿ ಕರ್ನಾಟಕದ ಸೋ ಕಾಲ್ಡ್ ಕಾಂಗ್ರೆಸ್ ನಾಯಕರು ಕೂಡ ಇದೇ ರೀತಿಯಲ್ಲಿ ಹೇಳಿಕೆ ನೀಡಿದ್ದರು ಎಂದು ಕಿಡಿಕಾರಿದ್ದಾರೆ.
ಪಹಲ್ಗಾಮ್’ನಲ್ಲಿ ಭಾರತೀಯ ಪ್ರವಾಸಿಗರ ಮೇಲೆ ಪೈಶಾಚಿಕ ಭಯೋತ್ಪಾದಕ ದಾಳಿ ಮತ್ತು ಉಗ್ರರಿಗೆ ಪಾಕಿಸ್ತಾನದ ಚಿತಾವಣಿಯಷ್ಟೇ ಅಲ್ಲದೇ ತನ್ನ ತನು-ಮನ-ಧನ ಅರ್ಪಣೆ ಮಾಡುತ್ತಿರುವುದನ್ನು ಖಂಡಿಸುವ ಬದಲಿಗೆ ಕಾಂಗ್ರೆಸ್ ಪಕ್ಷವು ಸೇನಾಪಡೆಗಳನ್ನು, ಪ್ರಧಾನಿ ನರೇಂದ್ರ ಮೋದಿ ಅವರನ್ನೂ ನಿಂದಿಸುತ್ತಿರುವುದು ನಾಚಿಕೆಗೇಡು ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್, ಭಾರತದ ರಾಜಕೀಯ ಪಕ್ಷವೋ? ಅಥವಾ ಶತ್ರು ದೇಶದ ವಕ್ತಾರಿಕೆ ಮಾಡುತ್ತಿರುವ ಪಕ್ಷವೋ? ಅದರ ತನ್ನ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? ಎಂಬುದನ್ನು ಅದುವೇ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿರುವ ಕುಮಾರಸ್ವಾಮಿ ಅವರು; ಪಾಕಿಸ್ತಾನ ಸೃಷ್ಟಿಯಾಗಿದ್ದು ಹೇಗೆ? ಅದರಲ್ಲಿ ಕಾಂಗ್ರೆಸ್ ಪಾತ್ರವೇನು? ಎಂಬ ಬಗ್ಗೆ ಚರ್ಚಿಸುವ ಅಗತ್ಯವಿಲ್ಲ. ಆದರೆ, ದೇಶ ವಿಭಜನೆಯಾಗಿ ಏಳೂವರೆ ದಶಕ ಮೀರಿದರೂ ಆ ಪಕ್ಷ ಇನ್ನೂ ಪಾಕಿಸ್ತಾನ್ ಮನಃಸ್ಥಿತಿಯಲ್ಲೇ ಇದೆ! ಅಸ್ತಿತ್ವ ಭಾರತದಲ್ಲಿ, ಅದರ ಹೃದಯ ಮಾತ್ರ ಪಾಕಿಸ್ತಾನದಲ್ಲಿ!! ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ!! ಎಂದು ಕಟುವಾಗಿ ಟೀಕಿಸಿದ್ದಾರೆ.
ಕೋಲಾರದ ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಕಾಂಗ್ರೆಸ್ ಪಕ್ಷದ ಅಂತರಾತ್ಮದ ದನಿ. ಆಚಾರವಿಲ್ಲದ ನಾಲಿಗೆ.. ಆಪರೇಷನ್ ಸಿಂಧೂರ್ ಬೂಟಾಟಿಕೆಯಂತೆ! ಇಡೀ ರಾಷ್ಟ್ರದ ಹೆಮ್ಮೆಯಾಗಿರುವ ಈ ಯಶಸ್ವಿ ಕಾರ್ಯಾಚರಣೆ ವಿರಾಟ್ ಸ್ವರೂಪವನ್ನು ಖುದ್ದು ನೋಡಬೇಕೆ ಮಂಜುನಾಥ್..? ಹಾಗಿದ್ದರೆ ಬನ್ನಿ, ನಿಮ್ಮನ್ನು ಪಾಕಿಸ್ತಾನಕ್ಕೆ ಕಳಿಸಿ ಕೊಡುತ್ತೇವೆ. ಭಾರತೀಯ ಸೇನೆಯ ಪರಾಕ್ರಮವನ್ನು ಖುದ್ದು ನೋಡಿಕೊಂಡು ಬರುವಿರಂತೆ. ಹೋಗುವಿರಾ ಪಾಕಿಸ್ತಾನಕ್ಕೆ..? ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಸವಾಲು ಹಾಕಿದ್ದಾರೆ.
ಚುನಾವಣೆ ಆಯೋಗಕ್ಕೆ ನಕಲಿ ಜಾತಿ ಪ್ರಮಾಣ ಪತ್ರ ಕೊಟ್ಟು ಜನತೆಗೆ ಟೋಪಿ ಹಾಕಿ ಚುನಾವಣೆ ಗೆದ್ದಿದ್ದ ಈ ಕಿಡಿಗೇಡಿ ಕಾಂಗ್ರೆಸ್ ಶಾಸಕ, ತನ್ನೊಳಗಿದ್ದ ವಿಷವನ್ನೇ ಕಕ್ಕಿಕೊಂಡಿದ್ದಾರೆ. ಅಂಥ ವಿಷಕಾರಿ DNA ಉಳ್ಳ ಕಾಂಗ್ರೆಸ್ ಪಕ್ಷಕ್ಕೆ ರಾಷ್ಟ್ರ ಪ್ರೇಮವಿರಲು ಸಾಧ್ಯವೇ..? ಆಪರೇಷನ್ ಸಿಂದೂರ್ ನಂತರ ಸೀನಿಯರ್ ಖರ್ಗೆ, ಜ್ಯೂನಿಯರ್ ಖರ್ಗೆ, ರಾಹುಲ್ ಗಾಂಧಿ ಸೇರಿ ಕರ್ನಾಟಕದ ಸೋ ಕಾಲ್ಡ್ ಕಾಂಗ್ರೆಸ್ ನಾಯಕರ ಆಣಿಮುತ್ತುಗಳನ್ನು ಗಮನಿಸಿದರೆ ಅವರ ಪ್ರೇಮ ಯಾವ ರಾಷ್ಟ್ರದ ಮೇಲೆ ಎಂದು ತಿಳಿಯುತ್ತದೆ! ಎಂದು ಕಾಂಗ್ರೆಸ್ ಪಕ್ಷಕ್ಕೆ ಸಚಿವರು ತಿರುಗೇಟು ನೀಡಿದ್ದಾರೆ.
ಹಾಗೆಯೇ; ಪ್ರಧಾನಿ ನರೇಂದ್ರ ಮೋದಿ ಅವರು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ವಿದೇಶಾಂಗ ಮಂತ್ರಿ ಎಸ್. ಜೈಶಂಕರ್ ಅವರ ಹೇಳಿಕೆಗಳನ್ನೂ ದೇಶ ಗಮನಿಸಿದೆ. ರಾಷ್ಟ್ರದ ಬಗ್ಗೆ ಅವರಿಗಿರುವ ಬದ್ಧತೆ, ಆಚಲತೆಯನ್ನು ನೋಡಿದೆ, ಕೊಂಡಾಡಿದೆ. ರಾಷ್ಟ್ರ ದ್ರೋಹ ಮತ್ತು ರಾಷ್ಟ್ರಪ್ರೇಮಕ್ಕೆ ಇರುವ ವ್ಯತ್ಯಾಸವಿದು ಎಂದು ಸಚಿವರು ಕಾಂಗ್ರೆಸ್ ಪಕ್ಷವನ್ನು ಕುಟುಕಿದ್ದಾರೆ.
ರಾಷ್ಟ್ರ ನಿಂದನೆ, ಸೇನೆಯ ನಿಂದನೆ ಕಾಂಗ್ರೆಸ್ ಪಕ್ಷಕ್ಕೆ ಹೊಸದಲ್ಲ. ಅದು ಕಾಂಗ್ರೆಸ್ ಪಕ್ಷಕ್ಕೆ ಜನ್ಮತಃ ಅಂಟಿರುವ ಜಾಡ್ಯ. ಪಾಕಿಸ್ತಾನ್ ನ್ಯಾಶನಲ್ ಕಾಂಗ್ರೆಸ್ ಪಾರ್ಟಿಯಾಗಿ ರೂಪಾಂತರಗೊಂಡಿರುವ ಆ ಪಕ್ಷದ ಅಸಲಿ ಅಜೆಂಡಾ ಏನು? ಹಿಡೆನ್ ಹಿಡೆನ್ ಏನೆಲ್ಲಾ ಮಾಡುತ್ತಿದೆ..!? ಇದು ನನ್ನ ಮೂಲಭೂತ ಪ್ರಶ್ನೆ ಎಂದು ಸಚಿವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು