1:51 AM Wednesday5 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ ಕೇಳಿದ್ವಾ: ಸಚಿವ ಸತೀಶ್ ಜಾರಕಿಹೊಳಿ ಪ್ರಶ್ನೆ

08/06/2025, 21:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಉಗ್ರಗಾಮಿಗಳು ನಡೆಸಿದ ದಾಳಿಗೆ 26 ಜನ ಸತ್ರು, ಇದು ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ ಕೇಳುದ್ವಾ ಎಂದು ಲೋಕೋಪಯೋಗಿ
ಸಚಿವ ಸತೀಶ್ ಜಾರಕಿಹೊಳಿ ಪ್ರಶ್ನಿಸಿದರು.
ಚಿಕ್ಕಮಗಳೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿದ ಅವರು, ಹಿಂದಿನ ಸರ್ಕಾರಗಳಿದ್ದಾಗ ಬಹಳಷ್ಟು ಘಟನೆ ನಡೆದಿದೆ, ನಾವು ರಾಜೀನಾಮೆ ಕೇಳಿರಲಿಲ್ಲ. ಪಾಕಿಸ್ತಾನದ ಜೊತೆ ಯುದ್ಧವಾದಾಗ ಎಲ್ಲ ಪಕ್ಷಗಳು ಬಿಜೆಪಿ ಜೊತೆ ಕೈಜೋಡಿಸಿದ್ರು. ಅಲ್ಲೂ ಫೆಯ್ಲ್ಯೂರ್ ಆಗಿತ್ತು, ಆಗ ಯಾರೂ ರಾಜೀನಾಮೆ ಕೇಳಿಲ್ಲ.
ಯಾರು ತಮ್ಮ ಕೆಲಸ ಸರಿಯಾಗಿ ಮಾಡಿಲ್ಲ ಅನ್ನೋದು ತನಿಖೆಯಿಂದ ಹೊರಬರಬೇಕು. ಯಾರು ಅನುಮತಿ ಕೇಳಿದ್ರು, ಯಾರು ನಿರಾಕರಿಸಿದ್ರು, ಯಾವಾಗ ಕೊಟ್ರು ಯಾರಿಗೂ ಗೊತ್ತಿಲ್ಲ, ಎಲ್ಲಾ ಬೂದಿ ಮುಚ್ಚಿದ ಕೆಂಡ ಎಂದು ಸಚಿವ ಜಾರಕಿಹೊಳಿ ನುಡಿದರು.

ಕಮಿಷನರ್, ಡಿಸಿಪಿ, ಇನ್ಸ್ಪೆಕ್ಟರ್, ಪೊಲೀಸ್ ಒಬ್ಬೊಬ್ಬರ ಲೆವೆಲ್ ನಲ್ಲಿ ಒಂದೊಂದು ಆಗಿದೆ ತನಿಖೆಯಿಂದ ಸತ್ಯ ಹೊರಬರಲಿ. ಹೈಕಮಾಂಡ್ ಜವಾಬ್ದಾರಿ ಇದೆ, ದೆಹಲಿಗೆ ಕರೆಸಿ ವರದಿ ಕೇಳಬಹುದು, ಮುಂದೆ ಆಗದಂತೆ ಎಚ್ಚರ ವಹಿಸಲು ಸಲಹೆ ಸೂಚನೆ ಕೊಡಬಹುದು ಎಂದರು.
ಬೆಳಗಾವಿ ವಿಭಜನೆ ಸದ್ಯಕ್ಕಿಲ್ಲ, ಆಮೇಲೆ ಮಾಡಬಹುದು, ಮಾಡೋ ವಿಚಾರ ಇದೆ, ಸದ್ಯಕ್ಕಿಲ್ಲ ಎಂದು ಅವರು ನುಡಿದರು.

*ಸಿಎಂ ಬದಲಾವಣೆ ಪ್ರಶ್ನೆಗೆ ನಸುನಕ್ಕ ಸತೀಶ್ ಜಾರಕಿಹೊಳಿ:*
ಅದೇಗೆ ಬದಲಾವಣೆ ಮಾಡ್ತಾರೆ? ನಿಮಗೆ ಹೇಳಿದ್ದು ಯಾರು? ಎಂದು ಸಚಿವರು ನಸುನಕ್ಕರು.
ಎರಡೂವರೆ ವರ್ಷಕ್ಕೆ ಮಾಡ್ತಾರೆ ಅಂತ ನಿಮಗೆ ಯಾರು ಹೇಳಿದ್ದು?
ಎರಡೂವರೆ ವರ್ಷ ಅಂತ ಎಲ್ಲೂ ಇಲ್ಲ, ಅವರೇ ಇದ್ದಾರೆ ಮುಂದೆಯೂ ಇರುತ್ತಾರೆ ಅಷ್ಟೇ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು