4:13 AM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ ಕೇಳಿದ್ವಾ: ಸಚಿವ ಸತೀಶ್ ಜಾರಕಿಹೊಳಿ ಪ್ರಶ್ನೆ

08/06/2025, 21:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಉಗ್ರಗಾಮಿಗಳು ನಡೆಸಿದ ದಾಳಿಗೆ 26 ಜನ ಸತ್ರು, ಇದು ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ ಕೇಳುದ್ವಾ ಎಂದು ಲೋಕೋಪಯೋಗಿ
ಸಚಿವ ಸತೀಶ್ ಜಾರಕಿಹೊಳಿ ಪ್ರಶ್ನಿಸಿದರು.
ಚಿಕ್ಕಮಗಳೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿದ ಅವರು, ಹಿಂದಿನ ಸರ್ಕಾರಗಳಿದ್ದಾಗ ಬಹಳಷ್ಟು ಘಟನೆ ನಡೆದಿದೆ, ನಾವು ರಾಜೀನಾಮೆ ಕೇಳಿರಲಿಲ್ಲ. ಪಾಕಿಸ್ತಾನದ ಜೊತೆ ಯುದ್ಧವಾದಾಗ ಎಲ್ಲ ಪಕ್ಷಗಳು ಬಿಜೆಪಿ ಜೊತೆ ಕೈಜೋಡಿಸಿದ್ರು. ಅಲ್ಲೂ ಫೆಯ್ಲ್ಯೂರ್ ಆಗಿತ್ತು, ಆಗ ಯಾರೂ ರಾಜೀನಾಮೆ ಕೇಳಿಲ್ಲ.
ಯಾರು ತಮ್ಮ ಕೆಲಸ ಸರಿಯಾಗಿ ಮಾಡಿಲ್ಲ ಅನ್ನೋದು ತನಿಖೆಯಿಂದ ಹೊರಬರಬೇಕು. ಯಾರು ಅನುಮತಿ ಕೇಳಿದ್ರು, ಯಾರು ನಿರಾಕರಿಸಿದ್ರು, ಯಾವಾಗ ಕೊಟ್ರು ಯಾರಿಗೂ ಗೊತ್ತಿಲ್ಲ, ಎಲ್ಲಾ ಬೂದಿ ಮುಚ್ಚಿದ ಕೆಂಡ ಎಂದು ಸಚಿವ ಜಾರಕಿಹೊಳಿ ನುಡಿದರು.

ಕಮಿಷನರ್, ಡಿಸಿಪಿ, ಇನ್ಸ್ಪೆಕ್ಟರ್, ಪೊಲೀಸ್ ಒಬ್ಬೊಬ್ಬರ ಲೆವೆಲ್ ನಲ್ಲಿ ಒಂದೊಂದು ಆಗಿದೆ ತನಿಖೆಯಿಂದ ಸತ್ಯ ಹೊರಬರಲಿ. ಹೈಕಮಾಂಡ್ ಜವಾಬ್ದಾರಿ ಇದೆ, ದೆಹಲಿಗೆ ಕರೆಸಿ ವರದಿ ಕೇಳಬಹುದು, ಮುಂದೆ ಆಗದಂತೆ ಎಚ್ಚರ ವಹಿಸಲು ಸಲಹೆ ಸೂಚನೆ ಕೊಡಬಹುದು ಎಂದರು.
ಬೆಳಗಾವಿ ವಿಭಜನೆ ಸದ್ಯಕ್ಕಿಲ್ಲ, ಆಮೇಲೆ ಮಾಡಬಹುದು, ಮಾಡೋ ವಿಚಾರ ಇದೆ, ಸದ್ಯಕ್ಕಿಲ್ಲ ಎಂದು ಅವರು ನುಡಿದರು.

*ಸಿಎಂ ಬದಲಾವಣೆ ಪ್ರಶ್ನೆಗೆ ನಸುನಕ್ಕ ಸತೀಶ್ ಜಾರಕಿಹೊಳಿ:*
ಅದೇಗೆ ಬದಲಾವಣೆ ಮಾಡ್ತಾರೆ? ನಿಮಗೆ ಹೇಳಿದ್ದು ಯಾರು? ಎಂದು ಸಚಿವರು ನಸುನಕ್ಕರು.
ಎರಡೂವರೆ ವರ್ಷಕ್ಕೆ ಮಾಡ್ತಾರೆ ಅಂತ ನಿಮಗೆ ಯಾರು ಹೇಳಿದ್ದು?
ಎರಡೂವರೆ ವರ್ಷ ಅಂತ ಎಲ್ಲೂ ಇಲ್ಲ, ಅವರೇ ಇದ್ದಾರೆ ಮುಂದೆಯೂ ಇರುತ್ತಾರೆ ಅಷ್ಟೇ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು