10:49 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ ಕೇಳಿದ್ವಾ: ಸಚಿವ ಸತೀಶ್ ಜಾರಕಿಹೊಳಿ ಪ್ರಶ್ನೆ

08/06/2025, 21:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಉಗ್ರಗಾಮಿಗಳು ನಡೆಸಿದ ದಾಳಿಗೆ 26 ಜನ ಸತ್ರು, ಇದು ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ ಕೇಳುದ್ವಾ ಎಂದು ಲೋಕೋಪಯೋಗಿ
ಸಚಿವ ಸತೀಶ್ ಜಾರಕಿಹೊಳಿ ಪ್ರಶ್ನಿಸಿದರು.
ಚಿಕ್ಕಮಗಳೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿದ ಅವರು, ಹಿಂದಿನ ಸರ್ಕಾರಗಳಿದ್ದಾಗ ಬಹಳಷ್ಟು ಘಟನೆ ನಡೆದಿದೆ, ನಾವು ರಾಜೀನಾಮೆ ಕೇಳಿರಲಿಲ್ಲ. ಪಾಕಿಸ್ತಾನದ ಜೊತೆ ಯುದ್ಧವಾದಾಗ ಎಲ್ಲ ಪಕ್ಷಗಳು ಬಿಜೆಪಿ ಜೊತೆ ಕೈಜೋಡಿಸಿದ್ರು. ಅಲ್ಲೂ ಫೆಯ್ಲ್ಯೂರ್ ಆಗಿತ್ತು, ಆಗ ಯಾರೂ ರಾಜೀನಾಮೆ ಕೇಳಿಲ್ಲ.
ಯಾರು ತಮ್ಮ ಕೆಲಸ ಸರಿಯಾಗಿ ಮಾಡಿಲ್ಲ ಅನ್ನೋದು ತನಿಖೆಯಿಂದ ಹೊರಬರಬೇಕು. ಯಾರು ಅನುಮತಿ ಕೇಳಿದ್ರು, ಯಾರು ನಿರಾಕರಿಸಿದ್ರು, ಯಾವಾಗ ಕೊಟ್ರು ಯಾರಿಗೂ ಗೊತ್ತಿಲ್ಲ, ಎಲ್ಲಾ ಬೂದಿ ಮುಚ್ಚಿದ ಕೆಂಡ ಎಂದು ಸಚಿವ ಜಾರಕಿಹೊಳಿ ನುಡಿದರು.

ಕಮಿಷನರ್, ಡಿಸಿಪಿ, ಇನ್ಸ್ಪೆಕ್ಟರ್, ಪೊಲೀಸ್ ಒಬ್ಬೊಬ್ಬರ ಲೆವೆಲ್ ನಲ್ಲಿ ಒಂದೊಂದು ಆಗಿದೆ ತನಿಖೆಯಿಂದ ಸತ್ಯ ಹೊರಬರಲಿ. ಹೈಕಮಾಂಡ್ ಜವಾಬ್ದಾರಿ ಇದೆ, ದೆಹಲಿಗೆ ಕರೆಸಿ ವರದಿ ಕೇಳಬಹುದು, ಮುಂದೆ ಆಗದಂತೆ ಎಚ್ಚರ ವಹಿಸಲು ಸಲಹೆ ಸೂಚನೆ ಕೊಡಬಹುದು ಎಂದರು.
ಬೆಳಗಾವಿ ವಿಭಜನೆ ಸದ್ಯಕ್ಕಿಲ್ಲ, ಆಮೇಲೆ ಮಾಡಬಹುದು, ಮಾಡೋ ವಿಚಾರ ಇದೆ, ಸದ್ಯಕ್ಕಿಲ್ಲ ಎಂದು ಅವರು ನುಡಿದರು.

*ಸಿಎಂ ಬದಲಾವಣೆ ಪ್ರಶ್ನೆಗೆ ನಸುನಕ್ಕ ಸತೀಶ್ ಜಾರಕಿಹೊಳಿ:*
ಅದೇಗೆ ಬದಲಾವಣೆ ಮಾಡ್ತಾರೆ? ನಿಮಗೆ ಹೇಳಿದ್ದು ಯಾರು? ಎಂದು ಸಚಿವರು ನಸುನಕ್ಕರು.
ಎರಡೂವರೆ ವರ್ಷಕ್ಕೆ ಮಾಡ್ತಾರೆ ಅಂತ ನಿಮಗೆ ಯಾರು ಹೇಳಿದ್ದು?
ಎರಡೂವರೆ ವರ್ಷ ಅಂತ ಎಲ್ಲೂ ಇಲ್ಲ, ಅವರೇ ಇದ್ದಾರೆ ಮುಂದೆಯೂ ಇರುತ್ತಾರೆ ಅಷ್ಟೇ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು