5:15 AM Tuesday17 - June 2025
ಬ್ರೇಕಿಂಗ್ ನ್ಯೂಸ್
Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ…

ಇತ್ತೀಚಿನ ಸುದ್ದಿ

ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ ಕೇಳಿದ್ವಾ: ಸಚಿವ ಸತೀಶ್ ಜಾರಕಿಹೊಳಿ ಪ್ರಶ್ನೆ

08/06/2025, 21:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಉಗ್ರಗಾಮಿಗಳು ನಡೆಸಿದ ದಾಳಿಗೆ 26 ಜನ ಸತ್ರು, ಇದು ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ ಕೇಳುದ್ವಾ ಎಂದು ಲೋಕೋಪಯೋಗಿ
ಸಚಿವ ಸತೀಶ್ ಜಾರಕಿಹೊಳಿ ಪ್ರಶ್ನಿಸಿದರು.
ಚಿಕ್ಕಮಗಳೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿದ ಅವರು, ಹಿಂದಿನ ಸರ್ಕಾರಗಳಿದ್ದಾಗ ಬಹಳಷ್ಟು ಘಟನೆ ನಡೆದಿದೆ, ನಾವು ರಾಜೀನಾಮೆ ಕೇಳಿರಲಿಲ್ಲ. ಪಾಕಿಸ್ತಾನದ ಜೊತೆ ಯುದ್ಧವಾದಾಗ ಎಲ್ಲ ಪಕ್ಷಗಳು ಬಿಜೆಪಿ ಜೊತೆ ಕೈಜೋಡಿಸಿದ್ರು. ಅಲ್ಲೂ ಫೆಯ್ಲ್ಯೂರ್ ಆಗಿತ್ತು, ಆಗ ಯಾರೂ ರಾಜೀನಾಮೆ ಕೇಳಿಲ್ಲ.
ಯಾರು ತಮ್ಮ ಕೆಲಸ ಸರಿಯಾಗಿ ಮಾಡಿಲ್ಲ ಅನ್ನೋದು ತನಿಖೆಯಿಂದ ಹೊರಬರಬೇಕು. ಯಾರು ಅನುಮತಿ ಕೇಳಿದ್ರು, ಯಾರು ನಿರಾಕರಿಸಿದ್ರು, ಯಾವಾಗ ಕೊಟ್ರು ಯಾರಿಗೂ ಗೊತ್ತಿಲ್ಲ, ಎಲ್ಲಾ ಬೂದಿ ಮುಚ್ಚಿದ ಕೆಂಡ ಎಂದು ಸಚಿವ ಜಾರಕಿಹೊಳಿ ನುಡಿದರು.

ಕಮಿಷನರ್, ಡಿಸಿಪಿ, ಇನ್ಸ್ಪೆಕ್ಟರ್, ಪೊಲೀಸ್ ಒಬ್ಬೊಬ್ಬರ ಲೆವೆಲ್ ನಲ್ಲಿ ಒಂದೊಂದು ಆಗಿದೆ ತನಿಖೆಯಿಂದ ಸತ್ಯ ಹೊರಬರಲಿ. ಹೈಕಮಾಂಡ್ ಜವಾಬ್ದಾರಿ ಇದೆ, ದೆಹಲಿಗೆ ಕರೆಸಿ ವರದಿ ಕೇಳಬಹುದು, ಮುಂದೆ ಆಗದಂತೆ ಎಚ್ಚರ ವಹಿಸಲು ಸಲಹೆ ಸೂಚನೆ ಕೊಡಬಹುದು ಎಂದರು.
ಬೆಳಗಾವಿ ವಿಭಜನೆ ಸದ್ಯಕ್ಕಿಲ್ಲ, ಆಮೇಲೆ ಮಾಡಬಹುದು, ಮಾಡೋ ವಿಚಾರ ಇದೆ, ಸದ್ಯಕ್ಕಿಲ್ಲ ಎಂದು ಅವರು ನುಡಿದರು.

*ಸಿಎಂ ಬದಲಾವಣೆ ಪ್ರಶ್ನೆಗೆ ನಸುನಕ್ಕ ಸತೀಶ್ ಜಾರಕಿಹೊಳಿ:*
ಅದೇಗೆ ಬದಲಾವಣೆ ಮಾಡ್ತಾರೆ? ನಿಮಗೆ ಹೇಳಿದ್ದು ಯಾರು? ಎಂದು ಸಚಿವರು ನಸುನಕ್ಕರು.
ಎರಡೂವರೆ ವರ್ಷಕ್ಕೆ ಮಾಡ್ತಾರೆ ಅಂತ ನಿಮಗೆ ಯಾರು ಹೇಳಿದ್ದು?
ಎರಡೂವರೆ ವರ್ಷ ಅಂತ ಎಲ್ಲೂ ಇಲ್ಲ, ಅವರೇ ಇದ್ದಾರೆ ಮುಂದೆಯೂ ಇರುತ್ತಾರೆ ಅಷ್ಟೇ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು