1:54 AM Friday30 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಒತ್ತಡ ನಿವಾರಣೆಗೆ ಕ್ರೀಡಾ ಚಟುವಟಿಕೆ ಸಹಕಾರಿ: ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರೀಡಾ ಕೂಟದಲ್ಲಿ ಜಿಲ್ಲಾಧಿಕಾರಿ

09/10/2022, 23:55

ಮಂಗಳೂರು(reporter Karnataka.com):
ಜಿಲ್ಲೆಯಲ್ಲಿ ಸೌಹಾರ್ದ ಮೂಡಿಸುವ ನಿಟ್ಟಿನ ಬ್ರ್ಯಾಂಡ್ ಮಂಗಳೂ ರು ಪರಿಕಲ್ಪನೆ ಮಾದರಿಯಾಗಿದೆ. ಒತ್ತಡ ನಿವಾರಣೆಗೆ ಕ್ರೀಡಾ ಚಟುವಟಿಕೆ ಸಹಕಾರಿ ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.
ದ.ಕ.ಜಿಲ್ಲಾಡಳಿತ, ಪೊಲೀಸ್ ಇಲಾಖೆ, ದ.ಕ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘ, ಮಂಗಳೂರು ವಿಶ್ವ ವಿದ್ಯಾನಿಲಯ ಮತ್ತು ಮಂಗಳೂರು ಮಹಾನಗರ ಪಾಲಿ ಕೆಯ ಸಹಭಾಗಿತ್ವದಲ್ಲಿಹಮ್ಮಿಕೊಂಡಿ ರುವ ಬ್ರ್ಯಾಂಡ್ ಮಂಗ ಳೂರು ಸೌಹಾರ್ದ ಕ್ರಿಕೆಟ್ ಪಂದ್ಯವನ್ನು ನಗರದ ಸಂತ ಅಲೋಶಿಯಸ್ ಕಾಲೇಜು ಮೈದಾನದಲ್ಲಿಂದು ಉದ್ಘಾಟಿಸಿ ಮಾತನಾಡುತ್ತಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಧಿಕಾರಿಗಳು, ಪತ್ರ ಕರ್ತರು ಸಾಕಷ್ಟು ಒತ್ತಡ ಗಳ ನಡುವೆ ಕಾರ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಸೌಹಾರ್ದ ಕ್ರಿಕೆಟ್ ನಂತಹ ಚಟುವಟಿಕೆಗಳು ಸಹಕಾರಿ ಎಂದು ಶುಭ ಹಾರೈಸಿದರು.
ಉದ್ಘಾಟನಾ ಕಾರ್ಯಕ್ರಮ ದಲ್ಲಿಮುಖ್ಯ ಅತಿಥಿಗಳಾಗಿ ಮಂಗಳೂರು ಪೊಲೀಸ್ ಆಯುಕ್ತ ಶಶಿ ಕುಮಾರ್ ಮಾತನಾಡುತ್ತಾ, ದ.ಕ ಜಿಲ್ಲೆ ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಖ್ಯಾತಿ ಪಡೆದಿದೆ ಜೊತೆಗೆ ಪ್ರವಾಸೋದ್ಯಮ ದಲ್ಲಿ ರಾಜ್ಯಕ್ಕೆ ಮಾದರಿಯಾಗುವ ಅಭಿವೃದ್ಧಿ ಪಡಿಸಲು ಅವಕಾಶವಿದೆ ಎಂದು ಶುಭ ಹಾರೈಸಿದರು.
ಮಂಗಳೂರು ಮಂಗಳ ಗಂಗೋತ್ರಿ ವಿಶ್ವ ವಿದ್ಯಾನಿ ಲಯ ಕುಲಪತಿ ಪ್ರೊ.ಪಿ.ಎಸ್. ಯಡಪಡಿ ತ್ತಾಯ,ಅಪರ ಜಿಲ್ಲಾ ಧಿಕಾರಿ ಕೃಷ್ಣ ಮೂರ್ತಿ, ರೋಹನ್ ಕಾರ್ಪೊರೇಶನ್ ಮಂಗಳೂರು ಇದರ ಆಡಳಿತ ನಿರ್ದೇಶಕ ರೋಹನ್ ಮೊಂತೆರೋ ಸಮಾರಂಭದಲ್ಲಿ ಮುಖ್ಯ ಅತಿಥಿ ಗಳಾಗಿ ಭಾಗವಹಿಸಿದ್ದರು.
ದ.ಕ.ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘ(ರಿ)ದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ ಸಮಾರಂಭದ ಅಧ್ಯಕ್ಷ ತೆ ವಹಿಸಿದ್ದರು.ಸಮಾರಂಭದಲ್ಲಿ ಹಿರಿಯ ಪತ್ರ ಕರ್ತರಾದ ಮನೋಹರ ಪ್ರಸಾದ್ ಪದಾಧಿಕಾರಿ ಗಳಾದ ಜಗನ್ನಾಥ ಶೆಟ್ಟಿ ಬಾಳ, ಹರೀಶ್ ರೈ,ಆರಿಫ್ ಪಡು ಬಿದ್ರೆ, ಪುಷ್ಪ ರಾಜ್ ಬಿ.ಎನ್,ಭಾಸ್ಕರ ರೈ ಕಟ್ಟ ರಾಜೇಶ್ ಪೂಜಾರಿ, ಭರತ್ ರಾಜ್ ,ರಾಜೇಶ್ ದಡ್ಡಂಗಡಿ ಉಪಸ್ಥಿತರಿದ್ದರು.ಪತ್ರ ಕರ್ತರ ಸಂಘದ ಪ್ರಧಾನ ಕಾರ್ಯ ದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.ವಿಜಯ ಕೋಟ್ಯಾನ್ ಪಡು ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು