3:16 PM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಒತ್ತಡ ನಿವಾರಣೆಗೆ ಕ್ರೀಡಾ ಚಟುವಟಿಕೆ ಸಹಕಾರಿ: ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರೀಡಾ ಕೂಟದಲ್ಲಿ ಜಿಲ್ಲಾಧಿಕಾರಿ

09/10/2022, 23:55

ಮಂಗಳೂರು(reporter Karnataka.com):
ಜಿಲ್ಲೆಯಲ್ಲಿ ಸೌಹಾರ್ದ ಮೂಡಿಸುವ ನಿಟ್ಟಿನ ಬ್ರ್ಯಾಂಡ್ ಮಂಗಳೂ ರು ಪರಿಕಲ್ಪನೆ ಮಾದರಿಯಾಗಿದೆ. ಒತ್ತಡ ನಿವಾರಣೆಗೆ ಕ್ರೀಡಾ ಚಟುವಟಿಕೆ ಸಹಕಾರಿ ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.
ದ.ಕ.ಜಿಲ್ಲಾಡಳಿತ, ಪೊಲೀಸ್ ಇಲಾಖೆ, ದ.ಕ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘ, ಮಂಗಳೂರು ವಿಶ್ವ ವಿದ್ಯಾನಿಲಯ ಮತ್ತು ಮಂಗಳೂರು ಮಹಾನಗರ ಪಾಲಿ ಕೆಯ ಸಹಭಾಗಿತ್ವದಲ್ಲಿಹಮ್ಮಿಕೊಂಡಿ ರುವ ಬ್ರ್ಯಾಂಡ್ ಮಂಗ ಳೂರು ಸೌಹಾರ್ದ ಕ್ರಿಕೆಟ್ ಪಂದ್ಯವನ್ನು ನಗರದ ಸಂತ ಅಲೋಶಿಯಸ್ ಕಾಲೇಜು ಮೈದಾನದಲ್ಲಿಂದು ಉದ್ಘಾಟಿಸಿ ಮಾತನಾಡುತ್ತಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಧಿಕಾರಿಗಳು, ಪತ್ರ ಕರ್ತರು ಸಾಕಷ್ಟು ಒತ್ತಡ ಗಳ ನಡುವೆ ಕಾರ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಸೌಹಾರ್ದ ಕ್ರಿಕೆಟ್ ನಂತಹ ಚಟುವಟಿಕೆಗಳು ಸಹಕಾರಿ ಎಂದು ಶುಭ ಹಾರೈಸಿದರು.
ಉದ್ಘಾಟನಾ ಕಾರ್ಯಕ್ರಮ ದಲ್ಲಿಮುಖ್ಯ ಅತಿಥಿಗಳಾಗಿ ಮಂಗಳೂರು ಪೊಲೀಸ್ ಆಯುಕ್ತ ಶಶಿ ಕುಮಾರ್ ಮಾತನಾಡುತ್ತಾ, ದ.ಕ ಜಿಲ್ಲೆ ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಖ್ಯಾತಿ ಪಡೆದಿದೆ ಜೊತೆಗೆ ಪ್ರವಾಸೋದ್ಯಮ ದಲ್ಲಿ ರಾಜ್ಯಕ್ಕೆ ಮಾದರಿಯಾಗುವ ಅಭಿವೃದ್ಧಿ ಪಡಿಸಲು ಅವಕಾಶವಿದೆ ಎಂದು ಶುಭ ಹಾರೈಸಿದರು.
ಮಂಗಳೂರು ಮಂಗಳ ಗಂಗೋತ್ರಿ ವಿಶ್ವ ವಿದ್ಯಾನಿ ಲಯ ಕುಲಪತಿ ಪ್ರೊ.ಪಿ.ಎಸ್. ಯಡಪಡಿ ತ್ತಾಯ,ಅಪರ ಜಿಲ್ಲಾ ಧಿಕಾರಿ ಕೃಷ್ಣ ಮೂರ್ತಿ, ರೋಹನ್ ಕಾರ್ಪೊರೇಶನ್ ಮಂಗಳೂರು ಇದರ ಆಡಳಿತ ನಿರ್ದೇಶಕ ರೋಹನ್ ಮೊಂತೆರೋ ಸಮಾರಂಭದಲ್ಲಿ ಮುಖ್ಯ ಅತಿಥಿ ಗಳಾಗಿ ಭಾಗವಹಿಸಿದ್ದರು.
ದ.ಕ.ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘ(ರಿ)ದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ ಸಮಾರಂಭದ ಅಧ್ಯಕ್ಷ ತೆ ವಹಿಸಿದ್ದರು.ಸಮಾರಂಭದಲ್ಲಿ ಹಿರಿಯ ಪತ್ರ ಕರ್ತರಾದ ಮನೋಹರ ಪ್ರಸಾದ್ ಪದಾಧಿಕಾರಿ ಗಳಾದ ಜಗನ್ನಾಥ ಶೆಟ್ಟಿ ಬಾಳ, ಹರೀಶ್ ರೈ,ಆರಿಫ್ ಪಡು ಬಿದ್ರೆ, ಪುಷ್ಪ ರಾಜ್ ಬಿ.ಎನ್,ಭಾಸ್ಕರ ರೈ ಕಟ್ಟ ರಾಜೇಶ್ ಪೂಜಾರಿ, ಭರತ್ ರಾಜ್ ,ರಾಜೇಶ್ ದಡ್ಡಂಗಡಿ ಉಪಸ್ಥಿತರಿದ್ದರು.ಪತ್ರ ಕರ್ತರ ಸಂಘದ ಪ್ರಧಾನ ಕಾರ್ಯ ದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.ವಿಜಯ ಕೋಟ್ಯಾನ್ ಪಡು ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು