7:21 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಒತ್ತಿನೆಣೆ ಕೊಲೆ ಪ್ರಕರಣದ ಪ್ರಮುಖ‌ ಆರೋಪಿ ಹಿರಿಯಡಕ ಜೈಲಿನಲ್ಲಿ ಆತ್ಮಹತ್ಯೆಗೆ ಶರಣು

11/12/2022, 22:50

ಕಾರ್ಕಳ(reporterkarnataka.com):
ವಿಚಾರಣಾಧೀನ ಕೈದಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರಿಯಡಕದ ಸಮೀಪದ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಭಾನುವಾರ ನಡೆದಿದೆ.

ಕಾರ್ಕಳ ತಾಲೂಕಿನ ಮಾಳ ಗ್ರಾಮದ ಪೇರಡ್ಕ ನಿವಾಸಿ ಸದಾನಂದ ಸೇರಿಗಾರ್ ಆತ್ಮಹತ್ಯೆ ಮಾಡಿಕೊಂಡ ಕೈದಿ. ಈತನು ಇತರೆ ಮೂವರೊಂದಿಗೆ ಸೇರಿಕೊಂಡು ಕಾರ್ಕಳದ ಆನಂದ ದೇವಾಡಿಗ ಎಂಬಾತನನ್ನು ಬೈಂದೂರು ತಾಲೂಕಿನ ಒತ್ತಿನೆಣೆ ಹೇನ್ ಬೇರು ಬಳಿ ನಿರ್ಜನ ಪ್ರದೇಶದಲ್ಲಿ ಕಾರಿನಲ್ಲಿ ಸಜೀವವಾಗಿ ಸುಟ್ಟು ಹತ್ಯೆಗೈದಿದ್ದರು.
ಪ್ರಕರಣವೊಂದರಲ್ಲಿ ತಪ್ಪಿಸಿಕೊಳ್ಳುವ ಉದ್ದೇಶದಿಂದ ಈ ಕೃತ್ಯ ಎಸಗಿದ್ದರು. ಆದರೆ ಆ ಬಳಿಕ ಪೊಲೀಸರಿಗೆ ಸಿಕ್ಕಿಬಿದ್ದ ಸದಾನಂದ ಸೇರಿಗಾರ್ ಹಾಗೂ ಆತನ ಗೆಳತಿ ಶಿಲ್ಪ ಸಾಲಿಯಾನ್, ಸತೀಶ್ ದೇವಾಡಿಗ, ನಿತೀಶ್ ದೇವಾಡಿಗ ಜೈಲು ಪಾಲಾಗಿದ್ದರು. ಜೈಲು ಸೇರಿದ ಬಳಿಕ ಸದಾನಂದ ಸೇರಿಗಾರ್ ಬಹಳಷ್ಟು ಮಾನಸಿಕ‌ ಖಿನ್ನತೆಗೆ ಒಳಗಾಗಿದ್ದನು. ಇದೇ ಕಾರಣದಿಂದ ಇಂದು ಮುಂಜಾನೆ 5 ಗಂಟೆಯ ಸುಮಾರಿಗೆ ಪಂಚೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನು ಗಮನಿಸಿದ ಇತರ ಕೈದಿಗಳು ಆತನನ್ನು ನೇಣಿನ ಕುಣಿಕೆಯಿಂದ ಬಿಡಿಸಿ ಕೆಳಗೆ ಇಳಿಸಿದ್ದಾರೆ. ಬಳಿಕ ಜೈಲು ಸಿಬ್ಬಂದಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವ ದಾರಿ ಮಧ್ಯೆ ಸದಾನಂದ ಸೇರಿಗಾರ್ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದುಬಂದಿದೆ.

ಮೃತದೇಹವನ್ನು ಅಜ್ಜರಕಾಡು ಶವಗಾರದಲ್ಲಿ ಇರಿಸಲಾಗಿದ್ದು, ಸ್ಥಳದಲ್ಲಿ ಹೆಚ್ಚುವರಿ ಎಸ್ಪಿ ಎಸ್‌.ಟಿ ಸಿದ್ದಲಿಂಗಪ್ಪ, ಉಡುಪಿ ಡಿವೈಎಸ್ಪಿ ಸುಧಾಕರ್ ನಾಯ್ಕ್ ಮತ್ತು ಸಿಬ್ಬಂದಿಗಳು ಮೊಕ್ಕಾಂ ಹೂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು