9:27 PM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಒತ್ತುವರಿ ತೆರವು ಮಾಡಿದ ಜಮೀನುಗಳಲ್ಲಿ ಸಸಿ ನೆಡುವ ಕಾರ್ಯಕ್ರಮ ಮಾಡಿ: ಸಾಮಾಜಿಕ ಕಾರ್ಯಕರ್ತ ಉಮೇಶ ಕೆ. ಮುದ್ನಾಳ ಒತ್ತಾಯ

05/07/2024, 21:28

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmal.com

ಯಾದಗಿರಿ ಜಿಲ್ಲೆಯ ವಡಗೇರಿ ತಾಲ್ಲೂಕಿನ ಸುಗೂರು ಮತ್ತು ಗೋಡಿಹಾಳ ಗ್ರಾಮಗಳಲ್ಲಿ ಅರಣ್ಯ ಮತ್ತು ಗೈರಾಣಿಗೆ ಸೇರಿದ ಸುಮಾರು 95 ಎಕರೆ ಜಮೀನು ಅತಿಕ್ರಮ ಒತ್ತುವರಿ ತೆರವು ಮಾಡಿದ ಜಾಗೆಯಲ್ಲಿ ಸಸಿಗಳನ್ನು ನೆಡುವ ಮೂಲಕ ಒತ್ತುವರಿಯಿಂದ ರಕ್ಷಣೆ ಹಾಗೂ ಪರಿಸರ ಸಂರಕ್ಷಣೆಯಾಗುತ್ತದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಒತ್ತಾಯಿಸಿದ್ದಾರೆ.


ಈ ಕುರಿತು ಹೇಳಿಕೆ ನೀಡಿರುವ ಅವರು, ಜಿಲ್ಲಾಧಿಕಾರಿಗಳು ವಡಗೇರಿ ತಾಲ್ಲೂಕಿನ ಅಗ್ನಿಹಾಳ ಗ್ರಾಮದಲ್ಲಿ ಕಂದಾಯ ದಿನಾಚರಣೆ ಅಂಗವಾಗಿ ಒತ್ತುವರಿ ತೆರವು ಮಾಡಿ ಆ ಸ್ಥಳದಲ್ಲಿ ಸಸಿ ನೆಡುವ ಕಾರ್ಯಕ್ರಮ ಮಾಡಿದರು. ಆದರೆ ಇದೇ ಮಾದರಿಯಲ್ಲಿ ಹೋರಾಟದ ಮೂಲಕ ಒತ್ತುವರಿ ಜಾಗೆ ತೆರವು ಮಾಡಿಸಿದ ಸುಗೂರದಲ್ಲಿ 47 ಎಕರೆ, ಗೋಡಿಹಾಳದಲ್ಲಿ 48 ಎಕರೆ ಸೇರಿ ಒಟ್ಟು 95 ಎಕರೆ ಜಾಗೆಯಲ್ಲಿಯೂ ವಿವಿಧ ತಳಿಯ ಸಸಿ ನೆಡುವ ಕಾರ್ಯಕ್ರಮ ಮಾಡುವಂತೆ ಒತ್ತಾಯಿಸಿದ್ದಾರೆ.
ಇದರಿಂದ ಒತ್ತುವರಿ ತೆರವು ಮಾಡಿದ ಜಮೀನು ರಕ್ಷಣೆಯೂ ಆಗುತ್ತದೆ ಬಿಸಿಲಿನ ತಾಪಕ್ಕೆ ಈಡಾಗಿರುವ ಈ ಪ್ರದೇಶದಲ್ಲಿ ಅರಣ್ಯ ಬೆಳೆಸಿದಂತೆಯೂ ಆಗುತ್ತದೆ. ಇದಕ್ಕೆ ಅರಣ್ಯ ಇಲಾಖೆಯ ಸಹಯೋಗದಲ್ಲಿ ಕಾರ್ಯಕ್ರಮ ರೂಪಿಸಬೇಕೆಂದು ಅವರು ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.
ಮಳೆಗಾಲ ಆರಂಭವಾಗಿರುವುದರಿಂದ ಇಗಲೇ ಕಾರ್ಯಕ್ರಮ ಮಾಡುವುದು ಸೂಕ್ತವಾಗಿದೆ. ಕೂಡಲೇ ಕಾರ್ಯಪ್ರವೃತ್ತರಾಗಿ ಒತ್ತುವರಿ ಜಾಗೆಯಲ್ಲಿ ಪರಿಸರ ರಕ್ಷಣೆ ಕಾರ್ಯಕ್ರಮ ಮಾಡಬೇಕೆಂದು ಅವರು ಒತ್ತಾಯಿಸಿದ್ದಾರೆ.
ಈ ಹಿಂದೆ ನಮ್ಮ ಹೋರಾಟಕ್ಕೆ ಎಚ್ಚೆತ್ತು ಪೊಲೀಸ್ ಬಂದೋಬಸ್ತ್ ನಲ್ಲಿ ಅರಣ್ಯ ಇಲಾಖೆಯವರ ಸಮ್ಮುಖದಲ್ಲಿಯೇ ಎರಡು ಗ್ರಾಮಗಳಲ್ಲಿ ಸರ್ಕಾರಿ ಜಮೀನು ಒತ್ತುವರಿ ತೆರವು ಮಾಡಿದ್ದು ಇಂತಹ ಜಾಗೆಯಲ್ಲಿ ಸಸಿ ನೆಡುವ ಕಾರ್ಯಕ್ರಮ ಮಾಡುವುದರಿಂದ ಒತ್ತುವರಿ ಆಗದಂತೆ ನೋಡಿಕೊಳ್ಳಲು ಮತ್ತು ಅರಣ್ಯ ಬೆಳೆಸಿದಂತೆ ಆಗುತ್ತದೆ ಎಂದು ಅವರು ಜಿಲ್ಲಾಡಳಿತಕ್ಕೆ ಸಲಹೆ ನೀಡಿದ್ದಾರೆ.


ಈ ಹಿಂದೆ ಒತ್ತುವರಿ ತೆರವು ಮಾಡಿ ನಾಮಫಲಕ ಅಳವಡಿಸಿದ್ದರೂ ಅವುಗಳನ್ನು ಬೀಳಿಸಿ ಮತ್ತೆ ಅತಿಕ್ರಮಣ ಮಾಡುವ ಕೆಲಸಗಳು ನಡೆಯುತ್ತಿದ್ದು ಜಿಲ್ಲಾಧಿಕಾರಿಗಳು ಕೂಡಲೇ ಕ್ರಮ ವಹಿಸಬೇಕಿದೆ.

-ಉಮೇಶ ಕೆ. ಮುದ್ನಾಳ,
ಸಾಮಾಜಿಕ ಹೋರಾಟಗಾರು
ಯಾದಗಿರಿ

ಇತ್ತೀಚಿನ ಸುದ್ದಿ

ಜಾಹೀರಾತು