4:03 AM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಒತ್ತುವರಿ ತೆರವು ಮಾಡಿದ ಜಮೀನುಗಳಲ್ಲಿ ಸಸಿ ನೆಡುವ ಕಾರ್ಯಕ್ರಮ ಮಾಡಿ: ಸಾಮಾಜಿಕ ಕಾರ್ಯಕರ್ತ ಉಮೇಶ ಕೆ. ಮುದ್ನಾಳ ಒತ್ತಾಯ

05/07/2024, 21:28

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmal.com

ಯಾದಗಿರಿ ಜಿಲ್ಲೆಯ ವಡಗೇರಿ ತಾಲ್ಲೂಕಿನ ಸುಗೂರು ಮತ್ತು ಗೋಡಿಹಾಳ ಗ್ರಾಮಗಳಲ್ಲಿ ಅರಣ್ಯ ಮತ್ತು ಗೈರಾಣಿಗೆ ಸೇರಿದ ಸುಮಾರು 95 ಎಕರೆ ಜಮೀನು ಅತಿಕ್ರಮ ಒತ್ತುವರಿ ತೆರವು ಮಾಡಿದ ಜಾಗೆಯಲ್ಲಿ ಸಸಿಗಳನ್ನು ನೆಡುವ ಮೂಲಕ ಒತ್ತುವರಿಯಿಂದ ರಕ್ಷಣೆ ಹಾಗೂ ಪರಿಸರ ಸಂರಕ್ಷಣೆಯಾಗುತ್ತದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಒತ್ತಾಯಿಸಿದ್ದಾರೆ.


ಈ ಕುರಿತು ಹೇಳಿಕೆ ನೀಡಿರುವ ಅವರು, ಜಿಲ್ಲಾಧಿಕಾರಿಗಳು ವಡಗೇರಿ ತಾಲ್ಲೂಕಿನ ಅಗ್ನಿಹಾಳ ಗ್ರಾಮದಲ್ಲಿ ಕಂದಾಯ ದಿನಾಚರಣೆ ಅಂಗವಾಗಿ ಒತ್ತುವರಿ ತೆರವು ಮಾಡಿ ಆ ಸ್ಥಳದಲ್ಲಿ ಸಸಿ ನೆಡುವ ಕಾರ್ಯಕ್ರಮ ಮಾಡಿದರು. ಆದರೆ ಇದೇ ಮಾದರಿಯಲ್ಲಿ ಹೋರಾಟದ ಮೂಲಕ ಒತ್ತುವರಿ ಜಾಗೆ ತೆರವು ಮಾಡಿಸಿದ ಸುಗೂರದಲ್ಲಿ 47 ಎಕರೆ, ಗೋಡಿಹಾಳದಲ್ಲಿ 48 ಎಕರೆ ಸೇರಿ ಒಟ್ಟು 95 ಎಕರೆ ಜಾಗೆಯಲ್ಲಿಯೂ ವಿವಿಧ ತಳಿಯ ಸಸಿ ನೆಡುವ ಕಾರ್ಯಕ್ರಮ ಮಾಡುವಂತೆ ಒತ್ತಾಯಿಸಿದ್ದಾರೆ.
ಇದರಿಂದ ಒತ್ತುವರಿ ತೆರವು ಮಾಡಿದ ಜಮೀನು ರಕ್ಷಣೆಯೂ ಆಗುತ್ತದೆ ಬಿಸಿಲಿನ ತಾಪಕ್ಕೆ ಈಡಾಗಿರುವ ಈ ಪ್ರದೇಶದಲ್ಲಿ ಅರಣ್ಯ ಬೆಳೆಸಿದಂತೆಯೂ ಆಗುತ್ತದೆ. ಇದಕ್ಕೆ ಅರಣ್ಯ ಇಲಾಖೆಯ ಸಹಯೋಗದಲ್ಲಿ ಕಾರ್ಯಕ್ರಮ ರೂಪಿಸಬೇಕೆಂದು ಅವರು ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.
ಮಳೆಗಾಲ ಆರಂಭವಾಗಿರುವುದರಿಂದ ಇಗಲೇ ಕಾರ್ಯಕ್ರಮ ಮಾಡುವುದು ಸೂಕ್ತವಾಗಿದೆ. ಕೂಡಲೇ ಕಾರ್ಯಪ್ರವೃತ್ತರಾಗಿ ಒತ್ತುವರಿ ಜಾಗೆಯಲ್ಲಿ ಪರಿಸರ ರಕ್ಷಣೆ ಕಾರ್ಯಕ್ರಮ ಮಾಡಬೇಕೆಂದು ಅವರು ಒತ್ತಾಯಿಸಿದ್ದಾರೆ.
ಈ ಹಿಂದೆ ನಮ್ಮ ಹೋರಾಟಕ್ಕೆ ಎಚ್ಚೆತ್ತು ಪೊಲೀಸ್ ಬಂದೋಬಸ್ತ್ ನಲ್ಲಿ ಅರಣ್ಯ ಇಲಾಖೆಯವರ ಸಮ್ಮುಖದಲ್ಲಿಯೇ ಎರಡು ಗ್ರಾಮಗಳಲ್ಲಿ ಸರ್ಕಾರಿ ಜಮೀನು ಒತ್ತುವರಿ ತೆರವು ಮಾಡಿದ್ದು ಇಂತಹ ಜಾಗೆಯಲ್ಲಿ ಸಸಿ ನೆಡುವ ಕಾರ್ಯಕ್ರಮ ಮಾಡುವುದರಿಂದ ಒತ್ತುವರಿ ಆಗದಂತೆ ನೋಡಿಕೊಳ್ಳಲು ಮತ್ತು ಅರಣ್ಯ ಬೆಳೆಸಿದಂತೆ ಆಗುತ್ತದೆ ಎಂದು ಅವರು ಜಿಲ್ಲಾಡಳಿತಕ್ಕೆ ಸಲಹೆ ನೀಡಿದ್ದಾರೆ.


ಈ ಹಿಂದೆ ಒತ್ತುವರಿ ತೆರವು ಮಾಡಿ ನಾಮಫಲಕ ಅಳವಡಿಸಿದ್ದರೂ ಅವುಗಳನ್ನು ಬೀಳಿಸಿ ಮತ್ತೆ ಅತಿಕ್ರಮಣ ಮಾಡುವ ಕೆಲಸಗಳು ನಡೆಯುತ್ತಿದ್ದು ಜಿಲ್ಲಾಧಿಕಾರಿಗಳು ಕೂಡಲೇ ಕ್ರಮ ವಹಿಸಬೇಕಿದೆ.

-ಉಮೇಶ ಕೆ. ಮುದ್ನಾಳ,
ಸಾಮಾಜಿಕ ಹೋರಾಟಗಾರು
ಯಾದಗಿರಿ

ಇತ್ತೀಚಿನ ಸುದ್ದಿ

ಜಾಹೀರಾತು