10:20 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಪಿ.ಎ.ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಭಿನಂದನಾ ಕಾರ್ಯಕ್ರಮ

08/08/2023, 19:38

ಮಂಗಳೂರು(reporterkarnataka.com): ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ನಡೆಸಿದ 2023ರ ವಾರ್ಷಿಕ ಪರೀಕ್ಷೆಯಲ್ಲಿ ಬಯೋಟೆಕ್ನಾಲಜಿ ವಿಭಾಗದಲ್ಲಿ 5ನೇ ಹಾಗೂ 6ನೇ ರ್ಯಾಂಕ್ ಗಳಿಸಿದ ಫೀನಾ ಹಕೀಮ್ ಮತ್ತು ಹರ್ಷಿತಾ ಶೆಟ್ಟಿಗಾರ್ ಅವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಪಿ.ಎ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪಿ.ಎ.ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರಮೀಝ್ ಎಂ.ಕೆ. ಅವರು ವಿದ್ಯಾರ್ಥಿಗಳು ಉದ್ಯೋಗಾವಕಾಶವನ್ನು ಹೇಗೆ ಸದುಪಯೋಗಪಡಿಸಿಕೊಳ್ಳಬೇಕು ಹಾಗೂ ಸಂಸ್ಥೆಯೆಲ್ಲ ವಿದ್ಯಾರ್ಥಿಗಳು ಮುಂದೆ ತಮ್ಮ ತಮ್ಮ ವಿಭಾಗದಲ್ಲಿ ಅತ್ಯಧಿಕ ರಾಂಕ್ ಗಳನ್ನು ಗಳಿಸುವ ಮೂಲಕ ಸಂಸ್ಥೆಗೆ ಹೆಸರನ್ನು ತರಬೇಕೆಂದು ಕಿವಿಮಾತನ್ನು ಹೇಳಿದರು. ಪಿ. ಎ. ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರ್ಫಾಝ್ ಹಾಸಿಮ್ ಜೆ. ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿ ಯಜ್ನೀಶ್ ಅವರು ಮಾತನಾಡಿ, ವಿದ್ಯಾರ್ಥಿಗಳ ಸಾಧನೆಯನ್ನು ಕೊಂಡಾಡಿದರು.

ಈ ಕಾರ್ಯಕ್ರಮದಲ್ಲಿ ಫೀನಾ ಹಕೀಮ್ ಮತ್ತು ಕುಮಾರಿ ಹರ್ಷಿತ ಶೆಟ್ಟಿಗಾರ್ ಅವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಪೇಸ್ ನ್ಯೂಸ್ ಬುಲೇಟಿನ್ 2023 ಸಂಚಿಕೆ 3ನ್ನು ಬಿಡುಗಡೆಗೊಳಿಸಲಾಯಿತು.
ಪಿ.ಎ. ವಿದ್ಯಾಸಂಸ್ಥೆಯ ಎ.ಜಿ.ಎಂ. ಸರ್ಫುದ್ದೀನ್ ರವರು ಉಪಸ್ಥಿತರಿದ್ದರು. ಉಪ ಪ್ರಾಂಶುಪಾಲರಾದ ಡಾ. ಶರ್ಮಿಳಾ ಕುಮಾರಿ ಅವರು ಅತಿಥಿಗಳನ್ನು ಸ್ವಾಗತಿಸಿದರು. ಬಯೋಟೆಕ್ನಾಲಜಿ ವಿಭಾಗದ ಮುಖ್ಯಸ್ಥರಾದ ಡಾ. ಕೃಷ್ಣ ಪ್ರಸಾದ್ ವಂದಿಸಿದರು. ಎಂಬಿಎ ವಿಭಾಗದ ನಿರ್ದೇಶಕ ಹಾಗೂ ಡೀನ್, (ವಿದ್ಯಾರ್ಥಿ ಕಲ್ಯಾಣ ಅಧಿಕಾರಿ) ಡಾ. ಸಯ್ಯದ್ ಅಮೀನ್, ಪಿ.ಎ. ಟ್ರಸ್ಟ್ ನ ವಿವಿಧ ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ, ಡಾ. ಸರ್ಫಾಝ್ ಹಾಸಿಮ್ ಜೆ, ಪ್ರೊ. ಸೂಫಿ, ಡಾ. ಸಲೀಮುಲ್ಲಾ ಖಾನ್, ಡಾ. ಸಜೀಸ್ ರಘುನಾಥನ್ ಮತ್ತು ವಿವಿಧ ವಿಭಾಗದ ಮುಖ್ಯಸ್ಥರು, ಕಾಲೇಜಿನ ಶಿಕ್ಷಕ ವೃಂದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಇಸ್ಮಾಯಿಲ್ ಶಾಫಿ, ಬಯೋಟೆಕ್ನಾಲಜಿ ವಿಭಾದ ಡಾ. ರೊನಾಲ್ಡ್ ವಾಲ್ಡರ್ ಹಾಗೂ ದೈಹಿಕ ಶಿಕ್ಷಣ ನಿರ್ಧೇಶಕರಾದ ಡಾ. ಇಕ್ಬಾಲ್ ಅವರು ಕಾರ್ಯಕ್ರಮವನ್ನು ಆಯೋಜಿಸಿದರು. ಬುಶೈರಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು