7:24 PM Sunday17 - August 2025
ಬ್ರೇಕಿಂಗ್ ನ್ಯೂಸ್
ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ: ಶೃಂಗೇರಿ ಅಕ್ಷರಶಃ ಜಲಾವೃತ; ನಾಳೆ ಶಾಲೆಗಳಿಗೆ ರಜೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ ಅಬ್ಬರ: ಮಲೆನಾಡು ಅಕ್ಷರಶಃ ಜಲಾವೃತ ಆರ್‌ಎಸ್‌ಎಸ್‌ನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:…

ಇತ್ತೀಚಿನ ಸುದ್ದಿ

ಪಿ.ಎ. ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ: ಮಂಗಳೂರು ವಿವಿ ಕುಲಪತಿ ಪ್ರೊ. ಧರ್ಮ ಭಾಗಿ

19/05/2024, 00:10

ಮಂಗಳೂರು(reporterkarnataka.com): ಅಧ್ಯಾಪಕರುಗಳ ಪ್ರೋತ್ಸಾಹ ಮತ್ತು ಬೆಂಬಲವೇ ಇವತ್ತಿನ ಈ ದಿನದ ಯಶಸ್ಸು ಮತ್ತು ಇಲ್ಲಿಯ ಕಾರ್ಯಕ್ರಮಗಳೇ ಈ ಕಾಲೇಜಿನ ಮಹತ್ವವನ್ನು ಸಾರುತ್ತಿದೆ ಹಾಗೂ ಉಳಿದ ಕಾಲೇಜುಗಳಿಗಿಂತ ಭಿನ್ನ ಎನ್ನುವುದನ್ನು ಸಾಬೀತುಪಡಿಸುತ್ತಿದೆ ಎಂದು
ಮಂಗಳೂರು ವಿವಿಯ ಕುಲಪತಿಗಳಾದ ಡಾ.ಪಿ.ಎಲ್. ಧರ್ಮ ಹೇಳಿದರು.


ಪಿ.ಎ. ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ 2024ರ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಅವರು ಮಾತನಾಡಿದರು.
ಕಾಲೇಜಿನ ವಾರ್ಷಿಕ ವರದಿಯನ್ನು ಪ್ರಾಂಶುಪಾಲರಾದ ಡಾ. ಸರ್ಫ್ರಾಝ್ ಜೆ. ಹಾಸಿಂ ಓದಿದರು. ಪಿಎಇಟಿಯ ಹಣಕಾಸು ವ್ಯವಹಾರಗಳ ಮುಖ್ಯಸ್ಥರಾದ ಅಹ್ಮದ್ ಕುಟ್ಟಿ ಕೆ., ಕಾಲೇಜ್ ನ ಖರೀದಿ ವಿಭಾಗದ ನಿರ್ದೇಶಕರಾದ ಹಾರಿಸ್ ಟಿಡಿ, ಪಿಎಇಟಿಯ ಎ.ಜಿ.ಎಂ ಶರಫುದ್ದೀನ್ ಪಿ.ಕೆ ಅಥಿತಿಗಳಾಗಿ ಆಗಮಿಸಿದರು. ಪಿ.ಎ.ಕಾಲೇಜ್ ಆಫ್ ಇಂಜಿನಿಯರಿಂಗ್ ನ ಪ್ರಾಂಶುಪಾಲರಾದ ಡಾ. ರಮೀಝ್ ಕೆ, ಪಿ.ಎ. ಕಾಲೇಜ್ ಆಫ್ ಫಾರ್ಮಸಿಯ ಪ್ರಾಂಶುಪಾಲರಾದ ಸಲೀಮುಲ್ಲಾ ಖಾನ್, ಪಿ.ಎ. ಇನ್ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಪ್ರಾಂಶುಪಾಲರಾದ ಡಾ. ಸಜೀಶ್ ರಘುನಾಥನ್, ಪಿಎ‌ಇಟಿಯ ವಿದ್ಯಾರ್ಥಿ ಡೀನ್ ಡಾ. ಸಯ್ಯಿದ್ ಅಮೀನ್, ಉಪ ಪ್ರಾಂಶುಪಾಲರಾದ ಡಾ.ಹರಿಕೃಷ್ಣನ್ ಜಿ., ಸಿ.ಪಾಡ್ ಮುಖ್ಯಸ್ಥರಾದ ಫೈಝಲ್ ಎನ್, ಐ.ಕ್ಯೂ.ಎ.ಸಿ ಯ ಮುಖ್ಯಸ್ಥೆ ವಾಣಿಶ್ರೀ, ವಿಜ್ಞಾನ ವಿಭಾಗದ ಮುಖ್ಯಸ್ಥೆ ಡೆಲ್ಸಿ ಡಿ.ಸೋಜ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ದೀಪ್ತಿ ಉದ್ಯಾವರ್, ಮಾನವಿಕ ವಿಭಾಗದ ಮುಖ್ಯಸ್ಥೆ ನೂರ್ ಜಹಾನ್ ಬೇಗಂ ಹಾಗೂ ವಾರ್ಷಿಕೋತ್ಸವದ ಸಂಯೋಜಕರಾದ ಬಶೀರ್ ಅಹ್ಮದ್, ಚೈತ್ರಾ ಎನ್. ವಿ. ಮತ್ತು ಅನ್ಫಾ ನಿಶಾತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿವಿಧ ಕಾರ್ಯ ಚಟುವಟಿಕೆಗಳಲ್ಲಿ ವಿಜೇತರನ್ನು ಇದೇ ಸಂದರ್ಭ ಅಭಿನಂದಿಸಲಾಯಿತು. ಅಧ್ಯಾಪಕರಾದ ಲವೀನಾ ಡಿ. ಸೋಜ ಮತ್ತು ಅಫ್ರದತ್ ಅಮಾನ್ ಕಾರ್ಯಕ್ರಮ ನಿರೂಪಿಸಿದರೆ ವಿದ್ಯಾರ್ಥಿಗಳಾದ ಇರ್ಫಾದ್ ಪ್ರಾರ್ಥನೆ ನೆರವೇರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು