5:20 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಪಿ.ಎ. ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ: ಮಂಗಳೂರು ವಿವಿ ಕುಲಪತಿ ಪ್ರೊ. ಧರ್ಮ ಭಾಗಿ

19/05/2024, 00:10

ಮಂಗಳೂರು(reporterkarnataka.com): ಅಧ್ಯಾಪಕರುಗಳ ಪ್ರೋತ್ಸಾಹ ಮತ್ತು ಬೆಂಬಲವೇ ಇವತ್ತಿನ ಈ ದಿನದ ಯಶಸ್ಸು ಮತ್ತು ಇಲ್ಲಿಯ ಕಾರ್ಯಕ್ರಮಗಳೇ ಈ ಕಾಲೇಜಿನ ಮಹತ್ವವನ್ನು ಸಾರುತ್ತಿದೆ ಹಾಗೂ ಉಳಿದ ಕಾಲೇಜುಗಳಿಗಿಂತ ಭಿನ್ನ ಎನ್ನುವುದನ್ನು ಸಾಬೀತುಪಡಿಸುತ್ತಿದೆ ಎಂದು
ಮಂಗಳೂರು ವಿವಿಯ ಕುಲಪತಿಗಳಾದ ಡಾ.ಪಿ.ಎಲ್. ಧರ್ಮ ಹೇಳಿದರು.


ಪಿ.ಎ. ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ 2024ರ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಅವರು ಮಾತನಾಡಿದರು.
ಕಾಲೇಜಿನ ವಾರ್ಷಿಕ ವರದಿಯನ್ನು ಪ್ರಾಂಶುಪಾಲರಾದ ಡಾ. ಸರ್ಫ್ರಾಝ್ ಜೆ. ಹಾಸಿಂ ಓದಿದರು. ಪಿಎಇಟಿಯ ಹಣಕಾಸು ವ್ಯವಹಾರಗಳ ಮುಖ್ಯಸ್ಥರಾದ ಅಹ್ಮದ್ ಕುಟ್ಟಿ ಕೆ., ಕಾಲೇಜ್ ನ ಖರೀದಿ ವಿಭಾಗದ ನಿರ್ದೇಶಕರಾದ ಹಾರಿಸ್ ಟಿಡಿ, ಪಿಎಇಟಿಯ ಎ.ಜಿ.ಎಂ ಶರಫುದ್ದೀನ್ ಪಿ.ಕೆ ಅಥಿತಿಗಳಾಗಿ ಆಗಮಿಸಿದರು. ಪಿ.ಎ.ಕಾಲೇಜ್ ಆಫ್ ಇಂಜಿನಿಯರಿಂಗ್ ನ ಪ್ರಾಂಶುಪಾಲರಾದ ಡಾ. ರಮೀಝ್ ಕೆ, ಪಿ.ಎ. ಕಾಲೇಜ್ ಆಫ್ ಫಾರ್ಮಸಿಯ ಪ್ರಾಂಶುಪಾಲರಾದ ಸಲೀಮುಲ್ಲಾ ಖಾನ್, ಪಿ.ಎ. ಇನ್ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಪ್ರಾಂಶುಪಾಲರಾದ ಡಾ. ಸಜೀಶ್ ರಘುನಾಥನ್, ಪಿಎ‌ಇಟಿಯ ವಿದ್ಯಾರ್ಥಿ ಡೀನ್ ಡಾ. ಸಯ್ಯಿದ್ ಅಮೀನ್, ಉಪ ಪ್ರಾಂಶುಪಾಲರಾದ ಡಾ.ಹರಿಕೃಷ್ಣನ್ ಜಿ., ಸಿ.ಪಾಡ್ ಮುಖ್ಯಸ್ಥರಾದ ಫೈಝಲ್ ಎನ್, ಐ.ಕ್ಯೂ.ಎ.ಸಿ ಯ ಮುಖ್ಯಸ್ಥೆ ವಾಣಿಶ್ರೀ, ವಿಜ್ಞಾನ ವಿಭಾಗದ ಮುಖ್ಯಸ್ಥೆ ಡೆಲ್ಸಿ ಡಿ.ಸೋಜ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ದೀಪ್ತಿ ಉದ್ಯಾವರ್, ಮಾನವಿಕ ವಿಭಾಗದ ಮುಖ್ಯಸ್ಥೆ ನೂರ್ ಜಹಾನ್ ಬೇಗಂ ಹಾಗೂ ವಾರ್ಷಿಕೋತ್ಸವದ ಸಂಯೋಜಕರಾದ ಬಶೀರ್ ಅಹ್ಮದ್, ಚೈತ್ರಾ ಎನ್. ವಿ. ಮತ್ತು ಅನ್ಫಾ ನಿಶಾತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿವಿಧ ಕಾರ್ಯ ಚಟುವಟಿಕೆಗಳಲ್ಲಿ ವಿಜೇತರನ್ನು ಇದೇ ಸಂದರ್ಭ ಅಭಿನಂದಿಸಲಾಯಿತು. ಅಧ್ಯಾಪಕರಾದ ಲವೀನಾ ಡಿ. ಸೋಜ ಮತ್ತು ಅಫ್ರದತ್ ಅಮಾನ್ ಕಾರ್ಯಕ್ರಮ ನಿರೂಪಿಸಿದರೆ ವಿದ್ಯಾರ್ಥಿಗಳಾದ ಇರ್ಫಾದ್ ಪ್ರಾರ್ಥನೆ ನೆರವೇರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು