4:07 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

ಪಾಣೆಮಂಗಳೂರಿನಲ್ಲಿ ರಾಜ್ಯೋತ್ಸವ ಆಚರಣೆ: ಜಯಾನಂದ ಪೆರಾಜೆಗೆ ಗೌರವ ಪುರಸ್ಕಾರ

03/11/2024, 11:43

ಬಂಟ್ವಾಳ(reporterkarnataka.com): ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢ ಶಾಲೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಪಾಣೆಮಂಗಳೂರು ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಎನ್. ನರೇಂದ್ರನಾಥ ಕುಡ್ವ ಅವರು ಧ್ವಜಾರೋಹಣವನ್ನು ನೆರವೇರಿಸಿದರು. ಸಭಾ ಕಾರ್ಯಕ್ರಮದಲ್ಲಿ ದೀಕ್ಷಾ ಮತ್ತು ಬಳಗದವರು ನಾಡಗೀತೆಯನ್ನು ಹಾಡಿ, ಕರ್ನಾಟಕ ಭೂಪಟಕ್ಕೆ ಸಾಂಕೇತಿಕವಾಗಿ 69 ದೀಪಗಳನ್ನು ಹಚ್ಚಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಾಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಜಯಾನಂದ ಪೆರಾಜೆ ಅವರು ಮಾತನಾಡಿ ಕನ್ನಡ ನಾಡು, ನುಡಿ, ಭಾಷೆ, ಸಾಹಿತ್ಯ, ಸಂಸ್ಕೃತಿ, ಕನ್ನಡದ ಹಿರಿಮೆ ಗರಿಮೆ, ಕನ್ನಡ ಪರಂಪರೆ ಕನ್ನಡವನ್ನು ಕಟ್ಟಿ ಬೆಳೆಸುವಲ್ಲಿ ಕಾರಣಿಭೂತರಾದ ಕನ್ನಡದ ಮಹಾನ್ ಕವಿಗಳು ಹಾಗೂ ದಕ್ಷಿಣ ಕನ್ನಡದ ಮತ್ತು ಬಂಟ್ವಾಳ ತಾಲೂಕಿನ ಮೇರು ಸಾಹಿತಿಗಳ ಸಾಧನೆಯನ್ನು ಪರಿಚಯಿಸಿದರು. ಮೂಲಕ ಮತ್ತೋರ್ವ ಅತಿಥಿ ಪಾಣೆಮಂಗಳೂರಿನ ಆಶಾ ಕಾರ್ಯಕರ್ತೆ ಜ್ಯೋತಿಲಕ್ಷ್ಮಿ ಅವರು ಉಪಸ್ಥಿತರಿದ್ದರು. ಸಂಚಾಲಕರು ಮತ್ತು ಅಧ್ಯಕ್ಷರು ಸನ್ಮಾನಿಸಿ, ಸ್ಮರಣಿಕೆ ನೀಡಿ ಅತಿಥಿಗಳನ್ನು ಗೌರವಿಸಿ ಸನ್ಮಾನ ಮಾಡಿದರು.
ಶಾಲಾ ಸಂಚಾಲಕ ಡಾ. ಪಿ. ವಿಶ್ವನಾಥ ನಾಯಕ್ , ಮುಖ್ಯೋಪಾಧ್ಯಾಯ ಶಿವಪ್ಪ ನಾಯ್ಕ, ಕನ್ನಡ ರಾಜ್ಯೋತ್ಸವದ ಸಂದೇಶಗಳನ್ನು ತಿಳಿದರು. ನವ್ಯ ಬಳಗದವರು ಹಚ್ಚೇವು ಕನ್ನಡದ ದೀಪ ಹಾಡನ್ನು ಹಾಡಿದರು. ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತೆ ಕವಯಿತ್ರಿ ಸುಧಾ ನಾಗೇಶ್ , ಶಾಲಾ ನಾಯಕ ಮನ್ವಿತ್ ಸಿ. ಪೂಜಾರಿ ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕ ಶಿವಪ್ಪ ನಾಯ್ಕ ಸ್ವಾಗತಿಸಿ,ಕನ್ನಡ ಭಾಷಾ ಆಧ್ಯಾಪಕ ಧನರಾಜ್ ದೊಡ್ಡನೇರಳೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿಗಳಾದ ಶೈಮಾ ಪ್ರಶಸ್ತಿ ಪತ್ರ ವಾಚಿಸಿ, ಖತೀಜತುಲ್ ಸಹಬೀರ ಧನ್ಯವಾದವಿತ್ತರು. ಅಬ್ದುಲ್ ರಾಝಿಕ್ ನಿರೂಪಿಸಿದರು..

ಇತ್ತೀಚಿನ ಸುದ್ದಿ

ಜಾಹೀರಾತು